Homeಕರ್ನಾಟಕಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

ಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ”ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಪ್ರಸ್ತುತ ಇರುವ ಗಡುವು ಮಾರ್ಚ್‌ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ ಹಾಗಾಗಿ ದಿನಾಂಕ ವಿಸ್ತರಣೆ ಮಾಡುವ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

“ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡದೇ ಹೋದರೆ ಅಂತಹ ಪಾನ್‌ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. ಪಾನ್ ನಿಷ್ಕ್ರಿಯಗೊಳಿಸಲಾಗುತ್ತದೆ. ಆ ಪಾನ್‌ಗಳಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್‌ ಮತ್ತು ಟಿಸಿಎಸ್‌ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವವರು ಪ್ಯಾನ್​ ಕಾರ್ಡ್-ಆಧಾರ್ ಕಾರ್ಡ್​ ಲಿಂಕ್ ಮಾಡಬೇಕಂತಿಲ್ಲ.

ಆದಾಯ ತೆರಿಗೆ ಕಾಯ್ದೆ, 1961 ಅಡಿಯಲ್ಲಿ ನಾನ್‌ ರೆಸಿಡೆನ್ಟ್ (ಅನಿವಾಸಿಗಳು) ಮತ್ತು ಹಿಂದಿನ ವರ್ಷದಿಂದ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಪ್ಯಾನ್​-ಆಧಾರ್​ ಕಾರ್ಡ್ ಲಿಂಕ್​ ಮಾಡದಿದ್ದರೂ ತೊಂದರೆಯಿಲ್ಲ.

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್‌ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕೆಳಗಿನ ಲಿಂಕ್ https://eportal.incometax.gov.in/iec/foservices/#/pre-login/bl-link-aadhaar ಅನ್ನು ಪ್ರವೇಶಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು.

 ಆಧಾರ್-ಪಾನ್ ಹೇಗೆ ಲಿಂಕ್ ಮಾಡುವುದು?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ

View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.

ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ

ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.

ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು.

ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್  ಲಿಂಕ್ ಮಾಡಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...