Homeಕರ್ನಾಟಕಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

ಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ”ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಪ್ರಸ್ತುತ ಇರುವ ಗಡುವು ಮಾರ್ಚ್‌ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ ಹಾಗಾಗಿ ದಿನಾಂಕ ವಿಸ್ತರಣೆ ಮಾಡುವ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

“ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡದೇ ಹೋದರೆ ಅಂತಹ ಪಾನ್‌ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. ಪಾನ್ ನಿಷ್ಕ್ರಿಯಗೊಳಿಸಲಾಗುತ್ತದೆ. ಆ ಪಾನ್‌ಗಳಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್‌ ಮತ್ತು ಟಿಸಿಎಸ್‌ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವವರು ಪ್ಯಾನ್​ ಕಾರ್ಡ್-ಆಧಾರ್ ಕಾರ್ಡ್​ ಲಿಂಕ್ ಮಾಡಬೇಕಂತಿಲ್ಲ.

ಆದಾಯ ತೆರಿಗೆ ಕಾಯ್ದೆ, 1961 ಅಡಿಯಲ್ಲಿ ನಾನ್‌ ರೆಸಿಡೆನ್ಟ್ (ಅನಿವಾಸಿಗಳು) ಮತ್ತು ಹಿಂದಿನ ವರ್ಷದಿಂದ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಪ್ಯಾನ್​-ಆಧಾರ್​ ಕಾರ್ಡ್ ಲಿಂಕ್​ ಮಾಡದಿದ್ದರೂ ತೊಂದರೆಯಿಲ್ಲ.

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್‌ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕೆಳಗಿನ ಲಿಂಕ್ https://eportal.incometax.gov.in/iec/foservices/#/pre-login/bl-link-aadhaar ಅನ್ನು ಪ್ರವೇಶಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು.

 ಆಧಾರ್-ಪಾನ್ ಹೇಗೆ ಲಿಂಕ್ ಮಾಡುವುದು?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ

View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.

ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ

ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.

ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು.

ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್  ಲಿಂಕ್ ಮಾಡಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...