Homeಮುಖಪುಟ‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI - ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI – ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

- Advertisement -
- Advertisement -

ಬುಧವಾರ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತರಾತುರಿಯಲ್ಲಿ ಒಂದು ಹೇಳಿಕೆ ಬಿಡುಗಡೆ ಮಾಡಿ, ಆಧಾರ್ ಪೌರತ್ವ ದಾಖಲೆಯಲ್ಲ ಮತ್ತು ಪೌರತ್ವದ ಕುರಿತಾಗಿ ತನಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ತನ್ನ ಅಧಿಕಾರದ ವ್ಯಾಪ್ತಿ ಮೀರಿ ವರ್ತಿಸಲು ಹೋದ ಯುಐಡಿಎಐ, ಈ ಎಲ್ಲ ಗೊಂದಲಕ್ಕೆ ಕಾರಣವಾಗಿದೆ. ಹೈದರಾಬಾದಿನ ಪೊಲೀಸರು, 127 ಜನರನ್ನು (ಎಲ್ಲರೂ ಮುಸ್ಲಿಮರು) ಅಕ್ರಮ ವಲಸೆಗಾರರು ಎಂದು ಗುರುತಿಸಿ, ಇವರೆಲ್ಲರ ಆಧಾರ್ ಕಾರ್ಡ್‌ಗೆ ಕ್ರಮಬದ್ಧವಾದ ದಾಖಲೆ ಇವೆಯೇ? ಇಲ್ಲದಿದ್ದರೆ ಇವರ ಆಧಾರ್ ಕಾರ್ಡ್ ರದ್ದು ಮಾಡಿ ಎಂದು ಯುಐಡಿಎಐಗೆ ಪತ್ರ ಬರೆದಿದ್ದರು.

127 ಜನರು ಆಧಾರ್ ಪಡೆಯಲು ಸೂಕ್ತ ದಾಖಲೆ ನೀಡಿದ್ದಾರೋ ಇಲ್ಲವೋ, ಅದರಲ್ಲಿ ಫೋರ್ಜರಿ ಆಗಿದೆಯಾ ಅಥವಾ ಅನಧಿಕೃತ ಮೂಲಗಳಿಂದ ದಾಖಲೆ ಪಡೆದಿರುವರಾ ಎಂದು ಚೆಕ್ ಮಾಡಿ, ಅಲ್ಲಿ ಅಕ್ರಮ ಕಂಡು ಬಂದಿದ್ದರೆ ಅವರ ಆಧಾರ್ ಕಾರ್ಡ್ ಅನ್ನು ರದ್ದು ಮಾಡಬೇಕಾಗಿತ್ತು.

ಆದರೆ, ತನ್ನ ಅಧಿಕಾರ ವ್ಯಾಪ್ತಿ ಮೀರಿದ ಯುಐಡಿಎಐ, ನೀವು ಭಾರತೀಯ ಪೌರತ್ವ ಹೊಂದಿದ್ದೀರಾ? ಅಕ್ರಮ ವಲಸೆ ಬಂದಿದ್ದೀರಾ ಎಂದೆಲ್ಲ ನೋಟಿಸ್ ನೀಡುವ ಮೂಲಕ ಈಗಾಗಲೇ ಪೌರತ್ವದ ದಾಖಲೆಗಳ ಕುರಿತು ಎದ್ದಿರುವ ಗೊಂದಲವನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ. ಯುಐಡಿಎಐ ಮತ್ತು ಹೈದರಾಬಾದ್ ಪೊಲೀಸರ ನಡೆ 127 ಜನರ ಕುಟುಂಬಗಳಿಗೆ ಮಾರಕವಾಗಿ ಪರಿಣಮಿಸಿದೆ.

2016ರ ಆಧಾರ್‌ ಆ್ಯಕ್ಟ್ ಯುಐಡಿಎಐಗೆ ನೀಡಿರುವ ಅಧಿಕಾರ ಸಿಮೀತ ಸ್ವರೂಪದ್ದು ಅಷ್ಟೇ. ಈ ಆ್ಯಕ್ಟ್‌ನ 9ನೇ ಸೆಕ್ಷನ್ ಪ್ರಕಾರ, ಆಧಾರ್ ಯಾವುದೇ ಬಗೆಯ ಪೌರತ್ವ ಅಥವಾ ವಲಸೆಗೆ ಸಂಬಂಧಿಸಿದ ದಾಖಲೆಯಲ್ಲ. ಆಧಾರ್ ಪಡೆಯಲು ನೀಡಿದ ದಾಖಲೆಗಳು ಅಸಮರ್ಪಕ ಅಥವಾ ನಕಲಿಯಾಗಿದ್ದಾಗ ಮಾತ್ರ ಯುಐಡಿಎಐ ಅಂತಹ ಆಧಾರ್ ಸಂಖ್ಯೆಯನ್ನು ರದ್ದು ಮಾಡಬಹುದು ಅಷ್ಟೇ. ಸೆಕ್ಷನ್ 3ರ ಪ್ರಕಾರ, ವಾಸದ ವಿಳಾಸದ ದಾಖಲೆ ಇದ್ದರೆ ಸಾಕು, ಆಧಾರ್ ಪಡೆಯಬಹುದು. ವಿದೇಶದಿಂದ ಬಂದು ಇಲ್ಲಿ ಆರು ತಿಂಗಳು ನೆಲೆಸಿದವರಿಗೂ ಆಧಾರ್ ಸಿಗುತ್ತದೆ. ಹೀಗಿರುವಾಗ ಯುಐಡಿಐಎ ಅಕ್ಟ್‌ ವಲಸೆ ವಿಚಾರದಲ್ಲಿ ಮೂಗು ತೂರಿಸಿ, ಜನರ ಪೌರತ್ವವನ್ನು ಪ್ರಶ್ನಿಸಲು ಹೊರಟಿದೆ.

ಇಲ್ಲಿ ಒಂದಿಷ್ಟು ಪ್ರಶ್ನೆಗಳು ಏಳುತ್ತವೆ: 2018ರ ಜೂನ್‌ನಲ್ಲಿ ಯುಐಡಿಎಐ ಸ್ಪಷ್ಟಪಡಿಸಿದಂತೆ, ಒಟ್ಟು ಆಧಾರ್ ನೋಂದಣಿ ಪೈಕಿ ಶೇ.38ರಷ್ಟು ನೋಂದಣಿ ವಿವರಗಳು (ಗುರುತು ಮತ್ತು ವಿಳಾಸದ ದಾಖಲೆ) ತನಗೆ ಲಭ್ಯ (access) ಆಗುತ್ತಿಲ್ಲ ಎಂದಿತ್ತು. ಈ 127 ಜನರು ‘ಆ ಲಭ್ಯವಿಲ್ಲದ’ ನೋಂದಣಿಯಲ್ಲಿರಬಹುದೇ ಎಂದು ಹೇಗೆ ದೃಢೀಕರಿಸುತ್ತಾರೆ? ನಿಮ್ಮ ದಾಖಲೆಗಳನ್ನು ಸಲ್ಲಿಸಿ ಅವು ಅಸಲಿ ಎಂದು ರುಜುವಾತು ಮಾಡಿ ಎಂದಷ್ಟೇ 127 ಜನರಿಗೆ ಸೂಚಿಸಿದ್ದರೆ ಸಾಕಿತ್ತು. ಆದರೆ ಒಂದು ಹೆಜ್ಜೆ ಮುಂದೆ ಹೋದ ಯುಐಡಿಎಐ, ವಲಸೆ, ಪೌರತ್ವದ ಪ್ರಶ್ನೆ ಎತ್ತಿ ವಿವಾದಕ್ಕೆ ಈಡಾಗಿದೆ.

ಹೈದರಾಬಾದ್ ಪೊಲೀಸರಿಗೆ 127 ಜನ ಅಕ್ರಮ ವಲಸೆಗಾರರು ಎಂಬ ಸಂಶಯ ಬಂದಿದ್ದರೆ, ಅವರು ವಿವರಣೆ ಪಡೆಯಬೇಕಾದುದು ಆಧಾರ್ ಕುರಿತಲ್ಲ ಮತ್ತು ಯುಐಡಿಎಐನಿಂದಲ್ಲ. ಅವರು ವಲಸೆ ವಿಭಾಗವನ್ನು ಸಂಪರ್ಕಿಸಿ, ವಿದೇಶಿಗರ ಆ್ಯಕ್ಟ್ ಅಡಿ 127 ಜನ ಅಕ್ರಮ ವಲಸಿಗರೇ ಎಂಬುದನ್ನು ಪರೀಕ್ಷಿಸಿ ಎಂದು ಕೇಳಬೇಕಿತ್ತು. ಆಮೇಲೆ ಆಧಾರ್ ರದ್ದಿನ ವಿಷಯ ನೋಡಬೇಕಿತ್ತು.

ಈಗ ನೋಡಿ, ಸರಿಯಾದ ವಿಚಾರಣೆಯಿಲ್ಲದೇ ಅಥವಾ ವಿಚಾರಣೆ ಮುಗಿಯುವವರೆಗೆ ಕಾಯದೆ 127 ಜನರ ಆಧಾರ್ ಕಿತ್ತುಕೊಂಡು ಬಿಟ್ಟರೆ, 127 ಕುಟುಂಬಗಳು ರೇಷನ್‌ನಿಂದ ಹಿಡಿದು ಚಿಕಿತ್ಸೆವರೆಗೆ ಎಲ್ಲ ಸೌಲಭ್ಯ ಕಳೆದುಕೊಳ್ಳಲಿವೆ.

ಅಕ್ರಮ ವಲಸಿಗರಾ ಎಂದು ಕೇಳಲು ಈ ಯುಐಡಿಎಐ ಯಾರು? ಅಕ್ರಮ ವಲಸೆಗಾರರ ವಿಷಯವನ್ನು ವಲಸೆ ವಿಭಾಗಕ್ಕೆ ತಲುಪಿಸಬೇಕಿದ್ದ ಪೊಲೀಸರು, ಯುಐಡಿಎಐ ಮೊರೆ ಹೋದರೇಕೆ? ಈಗಲೇ ಹೀಗೆ, ಈ ಎನ್‌ಪಿಆರ್, ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ಬಂದರೆ ಪರಿಸ್ಥಿತಿ ಎಷ್ಟು ಭೀಕರವಾಗಿರಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...