Homeಮುಖಪುಟ‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI - ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI – ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

- Advertisement -
- Advertisement -

ಬುಧವಾರ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತರಾತುರಿಯಲ್ಲಿ ಒಂದು ಹೇಳಿಕೆ ಬಿಡುಗಡೆ ಮಾಡಿ, ಆಧಾರ್ ಪೌರತ್ವ ದಾಖಲೆಯಲ್ಲ ಮತ್ತು ಪೌರತ್ವದ ಕುರಿತಾಗಿ ತನಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ತನ್ನ ಅಧಿಕಾರದ ವ್ಯಾಪ್ತಿ ಮೀರಿ ವರ್ತಿಸಲು ಹೋದ ಯುಐಡಿಎಐ, ಈ ಎಲ್ಲ ಗೊಂದಲಕ್ಕೆ ಕಾರಣವಾಗಿದೆ. ಹೈದರಾಬಾದಿನ ಪೊಲೀಸರು, 127 ಜನರನ್ನು (ಎಲ್ಲರೂ ಮುಸ್ಲಿಮರು) ಅಕ್ರಮ ವಲಸೆಗಾರರು ಎಂದು ಗುರುತಿಸಿ, ಇವರೆಲ್ಲರ ಆಧಾರ್ ಕಾರ್ಡ್‌ಗೆ ಕ್ರಮಬದ್ಧವಾದ ದಾಖಲೆ ಇವೆಯೇ? ಇಲ್ಲದಿದ್ದರೆ ಇವರ ಆಧಾರ್ ಕಾರ್ಡ್ ರದ್ದು ಮಾಡಿ ಎಂದು ಯುಐಡಿಎಐಗೆ ಪತ್ರ ಬರೆದಿದ್ದರು.

127 ಜನರು ಆಧಾರ್ ಪಡೆಯಲು ಸೂಕ್ತ ದಾಖಲೆ ನೀಡಿದ್ದಾರೋ ಇಲ್ಲವೋ, ಅದರಲ್ಲಿ ಫೋರ್ಜರಿ ಆಗಿದೆಯಾ ಅಥವಾ ಅನಧಿಕೃತ ಮೂಲಗಳಿಂದ ದಾಖಲೆ ಪಡೆದಿರುವರಾ ಎಂದು ಚೆಕ್ ಮಾಡಿ, ಅಲ್ಲಿ ಅಕ್ರಮ ಕಂಡು ಬಂದಿದ್ದರೆ ಅವರ ಆಧಾರ್ ಕಾರ್ಡ್ ಅನ್ನು ರದ್ದು ಮಾಡಬೇಕಾಗಿತ್ತು.

ಆದರೆ, ತನ್ನ ಅಧಿಕಾರ ವ್ಯಾಪ್ತಿ ಮೀರಿದ ಯುಐಡಿಎಐ, ನೀವು ಭಾರತೀಯ ಪೌರತ್ವ ಹೊಂದಿದ್ದೀರಾ? ಅಕ್ರಮ ವಲಸೆ ಬಂದಿದ್ದೀರಾ ಎಂದೆಲ್ಲ ನೋಟಿಸ್ ನೀಡುವ ಮೂಲಕ ಈಗಾಗಲೇ ಪೌರತ್ವದ ದಾಖಲೆಗಳ ಕುರಿತು ಎದ್ದಿರುವ ಗೊಂದಲವನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ. ಯುಐಡಿಎಐ ಮತ್ತು ಹೈದರಾಬಾದ್ ಪೊಲೀಸರ ನಡೆ 127 ಜನರ ಕುಟುಂಬಗಳಿಗೆ ಮಾರಕವಾಗಿ ಪರಿಣಮಿಸಿದೆ.

2016ರ ಆಧಾರ್‌ ಆ್ಯಕ್ಟ್ ಯುಐಡಿಎಐಗೆ ನೀಡಿರುವ ಅಧಿಕಾರ ಸಿಮೀತ ಸ್ವರೂಪದ್ದು ಅಷ್ಟೇ. ಈ ಆ್ಯಕ್ಟ್‌ನ 9ನೇ ಸೆಕ್ಷನ್ ಪ್ರಕಾರ, ಆಧಾರ್ ಯಾವುದೇ ಬಗೆಯ ಪೌರತ್ವ ಅಥವಾ ವಲಸೆಗೆ ಸಂಬಂಧಿಸಿದ ದಾಖಲೆಯಲ್ಲ. ಆಧಾರ್ ಪಡೆಯಲು ನೀಡಿದ ದಾಖಲೆಗಳು ಅಸಮರ್ಪಕ ಅಥವಾ ನಕಲಿಯಾಗಿದ್ದಾಗ ಮಾತ್ರ ಯುಐಡಿಎಐ ಅಂತಹ ಆಧಾರ್ ಸಂಖ್ಯೆಯನ್ನು ರದ್ದು ಮಾಡಬಹುದು ಅಷ್ಟೇ. ಸೆಕ್ಷನ್ 3ರ ಪ್ರಕಾರ, ವಾಸದ ವಿಳಾಸದ ದಾಖಲೆ ಇದ್ದರೆ ಸಾಕು, ಆಧಾರ್ ಪಡೆಯಬಹುದು. ವಿದೇಶದಿಂದ ಬಂದು ಇಲ್ಲಿ ಆರು ತಿಂಗಳು ನೆಲೆಸಿದವರಿಗೂ ಆಧಾರ್ ಸಿಗುತ್ತದೆ. ಹೀಗಿರುವಾಗ ಯುಐಡಿಐಎ ಅಕ್ಟ್‌ ವಲಸೆ ವಿಚಾರದಲ್ಲಿ ಮೂಗು ತೂರಿಸಿ, ಜನರ ಪೌರತ್ವವನ್ನು ಪ್ರಶ್ನಿಸಲು ಹೊರಟಿದೆ.

ಇಲ್ಲಿ ಒಂದಿಷ್ಟು ಪ್ರಶ್ನೆಗಳು ಏಳುತ್ತವೆ: 2018ರ ಜೂನ್‌ನಲ್ಲಿ ಯುಐಡಿಎಐ ಸ್ಪಷ್ಟಪಡಿಸಿದಂತೆ, ಒಟ್ಟು ಆಧಾರ್ ನೋಂದಣಿ ಪೈಕಿ ಶೇ.38ರಷ್ಟು ನೋಂದಣಿ ವಿವರಗಳು (ಗುರುತು ಮತ್ತು ವಿಳಾಸದ ದಾಖಲೆ) ತನಗೆ ಲಭ್ಯ (access) ಆಗುತ್ತಿಲ್ಲ ಎಂದಿತ್ತು. ಈ 127 ಜನರು ‘ಆ ಲಭ್ಯವಿಲ್ಲದ’ ನೋಂದಣಿಯಲ್ಲಿರಬಹುದೇ ಎಂದು ಹೇಗೆ ದೃಢೀಕರಿಸುತ್ತಾರೆ? ನಿಮ್ಮ ದಾಖಲೆಗಳನ್ನು ಸಲ್ಲಿಸಿ ಅವು ಅಸಲಿ ಎಂದು ರುಜುವಾತು ಮಾಡಿ ಎಂದಷ್ಟೇ 127 ಜನರಿಗೆ ಸೂಚಿಸಿದ್ದರೆ ಸಾಕಿತ್ತು. ಆದರೆ ಒಂದು ಹೆಜ್ಜೆ ಮುಂದೆ ಹೋದ ಯುಐಡಿಎಐ, ವಲಸೆ, ಪೌರತ್ವದ ಪ್ರಶ್ನೆ ಎತ್ತಿ ವಿವಾದಕ್ಕೆ ಈಡಾಗಿದೆ.

ಹೈದರಾಬಾದ್ ಪೊಲೀಸರಿಗೆ 127 ಜನ ಅಕ್ರಮ ವಲಸೆಗಾರರು ಎಂಬ ಸಂಶಯ ಬಂದಿದ್ದರೆ, ಅವರು ವಿವರಣೆ ಪಡೆಯಬೇಕಾದುದು ಆಧಾರ್ ಕುರಿತಲ್ಲ ಮತ್ತು ಯುಐಡಿಎಐನಿಂದಲ್ಲ. ಅವರು ವಲಸೆ ವಿಭಾಗವನ್ನು ಸಂಪರ್ಕಿಸಿ, ವಿದೇಶಿಗರ ಆ್ಯಕ್ಟ್ ಅಡಿ 127 ಜನ ಅಕ್ರಮ ವಲಸಿಗರೇ ಎಂಬುದನ್ನು ಪರೀಕ್ಷಿಸಿ ಎಂದು ಕೇಳಬೇಕಿತ್ತು. ಆಮೇಲೆ ಆಧಾರ್ ರದ್ದಿನ ವಿಷಯ ನೋಡಬೇಕಿತ್ತು.

ಈಗ ನೋಡಿ, ಸರಿಯಾದ ವಿಚಾರಣೆಯಿಲ್ಲದೇ ಅಥವಾ ವಿಚಾರಣೆ ಮುಗಿಯುವವರೆಗೆ ಕಾಯದೆ 127 ಜನರ ಆಧಾರ್ ಕಿತ್ತುಕೊಂಡು ಬಿಟ್ಟರೆ, 127 ಕುಟುಂಬಗಳು ರೇಷನ್‌ನಿಂದ ಹಿಡಿದು ಚಿಕಿತ್ಸೆವರೆಗೆ ಎಲ್ಲ ಸೌಲಭ್ಯ ಕಳೆದುಕೊಳ್ಳಲಿವೆ.

ಅಕ್ರಮ ವಲಸಿಗರಾ ಎಂದು ಕೇಳಲು ಈ ಯುಐಡಿಎಐ ಯಾರು? ಅಕ್ರಮ ವಲಸೆಗಾರರ ವಿಷಯವನ್ನು ವಲಸೆ ವಿಭಾಗಕ್ಕೆ ತಲುಪಿಸಬೇಕಿದ್ದ ಪೊಲೀಸರು, ಯುಐಡಿಎಐ ಮೊರೆ ಹೋದರೇಕೆ? ಈಗಲೇ ಹೀಗೆ, ಈ ಎನ್‌ಪಿಆರ್, ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ಬಂದರೆ ಪರಿಸ್ಥಿತಿ ಎಷ್ಟು ಭೀಕರವಾಗಿರಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...