Homeಮುಖಪುಟ‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI - ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI – ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

- Advertisement -
- Advertisement -

ಬುಧವಾರ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತರಾತುರಿಯಲ್ಲಿ ಒಂದು ಹೇಳಿಕೆ ಬಿಡುಗಡೆ ಮಾಡಿ, ಆಧಾರ್ ಪೌರತ್ವ ದಾಖಲೆಯಲ್ಲ ಮತ್ತು ಪೌರತ್ವದ ಕುರಿತಾಗಿ ತನಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ತನ್ನ ಅಧಿಕಾರದ ವ್ಯಾಪ್ತಿ ಮೀರಿ ವರ್ತಿಸಲು ಹೋದ ಯುಐಡಿಎಐ, ಈ ಎಲ್ಲ ಗೊಂದಲಕ್ಕೆ ಕಾರಣವಾಗಿದೆ. ಹೈದರಾಬಾದಿನ ಪೊಲೀಸರು, 127 ಜನರನ್ನು (ಎಲ್ಲರೂ ಮುಸ್ಲಿಮರು) ಅಕ್ರಮ ವಲಸೆಗಾರರು ಎಂದು ಗುರುತಿಸಿ, ಇವರೆಲ್ಲರ ಆಧಾರ್ ಕಾರ್ಡ್‌ಗೆ ಕ್ರಮಬದ್ಧವಾದ ದಾಖಲೆ ಇವೆಯೇ? ಇಲ್ಲದಿದ್ದರೆ ಇವರ ಆಧಾರ್ ಕಾರ್ಡ್ ರದ್ದು ಮಾಡಿ ಎಂದು ಯುಐಡಿಎಐಗೆ ಪತ್ರ ಬರೆದಿದ್ದರು.

127 ಜನರು ಆಧಾರ್ ಪಡೆಯಲು ಸೂಕ್ತ ದಾಖಲೆ ನೀಡಿದ್ದಾರೋ ಇಲ್ಲವೋ, ಅದರಲ್ಲಿ ಫೋರ್ಜರಿ ಆಗಿದೆಯಾ ಅಥವಾ ಅನಧಿಕೃತ ಮೂಲಗಳಿಂದ ದಾಖಲೆ ಪಡೆದಿರುವರಾ ಎಂದು ಚೆಕ್ ಮಾಡಿ, ಅಲ್ಲಿ ಅಕ್ರಮ ಕಂಡು ಬಂದಿದ್ದರೆ ಅವರ ಆಧಾರ್ ಕಾರ್ಡ್ ಅನ್ನು ರದ್ದು ಮಾಡಬೇಕಾಗಿತ್ತು.

ಆದರೆ, ತನ್ನ ಅಧಿಕಾರ ವ್ಯಾಪ್ತಿ ಮೀರಿದ ಯುಐಡಿಎಐ, ನೀವು ಭಾರತೀಯ ಪೌರತ್ವ ಹೊಂದಿದ್ದೀರಾ? ಅಕ್ರಮ ವಲಸೆ ಬಂದಿದ್ದೀರಾ ಎಂದೆಲ್ಲ ನೋಟಿಸ್ ನೀಡುವ ಮೂಲಕ ಈಗಾಗಲೇ ಪೌರತ್ವದ ದಾಖಲೆಗಳ ಕುರಿತು ಎದ್ದಿರುವ ಗೊಂದಲವನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ. ಯುಐಡಿಎಐ ಮತ್ತು ಹೈದರಾಬಾದ್ ಪೊಲೀಸರ ನಡೆ 127 ಜನರ ಕುಟುಂಬಗಳಿಗೆ ಮಾರಕವಾಗಿ ಪರಿಣಮಿಸಿದೆ.

2016ರ ಆಧಾರ್‌ ಆ್ಯಕ್ಟ್ ಯುಐಡಿಎಐಗೆ ನೀಡಿರುವ ಅಧಿಕಾರ ಸಿಮೀತ ಸ್ವರೂಪದ್ದು ಅಷ್ಟೇ. ಈ ಆ್ಯಕ್ಟ್‌ನ 9ನೇ ಸೆಕ್ಷನ್ ಪ್ರಕಾರ, ಆಧಾರ್ ಯಾವುದೇ ಬಗೆಯ ಪೌರತ್ವ ಅಥವಾ ವಲಸೆಗೆ ಸಂಬಂಧಿಸಿದ ದಾಖಲೆಯಲ್ಲ. ಆಧಾರ್ ಪಡೆಯಲು ನೀಡಿದ ದಾಖಲೆಗಳು ಅಸಮರ್ಪಕ ಅಥವಾ ನಕಲಿಯಾಗಿದ್ದಾಗ ಮಾತ್ರ ಯುಐಡಿಎಐ ಅಂತಹ ಆಧಾರ್ ಸಂಖ್ಯೆಯನ್ನು ರದ್ದು ಮಾಡಬಹುದು ಅಷ್ಟೇ. ಸೆಕ್ಷನ್ 3ರ ಪ್ರಕಾರ, ವಾಸದ ವಿಳಾಸದ ದಾಖಲೆ ಇದ್ದರೆ ಸಾಕು, ಆಧಾರ್ ಪಡೆಯಬಹುದು. ವಿದೇಶದಿಂದ ಬಂದು ಇಲ್ಲಿ ಆರು ತಿಂಗಳು ನೆಲೆಸಿದವರಿಗೂ ಆಧಾರ್ ಸಿಗುತ್ತದೆ. ಹೀಗಿರುವಾಗ ಯುಐಡಿಐಎ ಅಕ್ಟ್‌ ವಲಸೆ ವಿಚಾರದಲ್ಲಿ ಮೂಗು ತೂರಿಸಿ, ಜನರ ಪೌರತ್ವವನ್ನು ಪ್ರಶ್ನಿಸಲು ಹೊರಟಿದೆ.

ಇಲ್ಲಿ ಒಂದಿಷ್ಟು ಪ್ರಶ್ನೆಗಳು ಏಳುತ್ತವೆ: 2018ರ ಜೂನ್‌ನಲ್ಲಿ ಯುಐಡಿಎಐ ಸ್ಪಷ್ಟಪಡಿಸಿದಂತೆ, ಒಟ್ಟು ಆಧಾರ್ ನೋಂದಣಿ ಪೈಕಿ ಶೇ.38ರಷ್ಟು ನೋಂದಣಿ ವಿವರಗಳು (ಗುರುತು ಮತ್ತು ವಿಳಾಸದ ದಾಖಲೆ) ತನಗೆ ಲಭ್ಯ (access) ಆಗುತ್ತಿಲ್ಲ ಎಂದಿತ್ತು. ಈ 127 ಜನರು ‘ಆ ಲಭ್ಯವಿಲ್ಲದ’ ನೋಂದಣಿಯಲ್ಲಿರಬಹುದೇ ಎಂದು ಹೇಗೆ ದೃಢೀಕರಿಸುತ್ತಾರೆ? ನಿಮ್ಮ ದಾಖಲೆಗಳನ್ನು ಸಲ್ಲಿಸಿ ಅವು ಅಸಲಿ ಎಂದು ರುಜುವಾತು ಮಾಡಿ ಎಂದಷ್ಟೇ 127 ಜನರಿಗೆ ಸೂಚಿಸಿದ್ದರೆ ಸಾಕಿತ್ತು. ಆದರೆ ಒಂದು ಹೆಜ್ಜೆ ಮುಂದೆ ಹೋದ ಯುಐಡಿಎಐ, ವಲಸೆ, ಪೌರತ್ವದ ಪ್ರಶ್ನೆ ಎತ್ತಿ ವಿವಾದಕ್ಕೆ ಈಡಾಗಿದೆ.

ಹೈದರಾಬಾದ್ ಪೊಲೀಸರಿಗೆ 127 ಜನ ಅಕ್ರಮ ವಲಸೆಗಾರರು ಎಂಬ ಸಂಶಯ ಬಂದಿದ್ದರೆ, ಅವರು ವಿವರಣೆ ಪಡೆಯಬೇಕಾದುದು ಆಧಾರ್ ಕುರಿತಲ್ಲ ಮತ್ತು ಯುಐಡಿಎಐನಿಂದಲ್ಲ. ಅವರು ವಲಸೆ ವಿಭಾಗವನ್ನು ಸಂಪರ್ಕಿಸಿ, ವಿದೇಶಿಗರ ಆ್ಯಕ್ಟ್ ಅಡಿ 127 ಜನ ಅಕ್ರಮ ವಲಸಿಗರೇ ಎಂಬುದನ್ನು ಪರೀಕ್ಷಿಸಿ ಎಂದು ಕೇಳಬೇಕಿತ್ತು. ಆಮೇಲೆ ಆಧಾರ್ ರದ್ದಿನ ವಿಷಯ ನೋಡಬೇಕಿತ್ತು.

ಈಗ ನೋಡಿ, ಸರಿಯಾದ ವಿಚಾರಣೆಯಿಲ್ಲದೇ ಅಥವಾ ವಿಚಾರಣೆ ಮುಗಿಯುವವರೆಗೆ ಕಾಯದೆ 127 ಜನರ ಆಧಾರ್ ಕಿತ್ತುಕೊಂಡು ಬಿಟ್ಟರೆ, 127 ಕುಟುಂಬಗಳು ರೇಷನ್‌ನಿಂದ ಹಿಡಿದು ಚಿಕಿತ್ಸೆವರೆಗೆ ಎಲ್ಲ ಸೌಲಭ್ಯ ಕಳೆದುಕೊಳ್ಳಲಿವೆ.

ಅಕ್ರಮ ವಲಸಿಗರಾ ಎಂದು ಕೇಳಲು ಈ ಯುಐಡಿಎಐ ಯಾರು? ಅಕ್ರಮ ವಲಸೆಗಾರರ ವಿಷಯವನ್ನು ವಲಸೆ ವಿಭಾಗಕ್ಕೆ ತಲುಪಿಸಬೇಕಿದ್ದ ಪೊಲೀಸರು, ಯುಐಡಿಎಐ ಮೊರೆ ಹೋದರೇಕೆ? ಈಗಲೇ ಹೀಗೆ, ಈ ಎನ್‌ಪಿಆರ್, ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ಬಂದರೆ ಪರಿಸ್ಥಿತಿ ಎಷ್ಟು ಭೀಕರವಾಗಿರಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...