Homeಮುಖಪುಟ‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI - ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

‘ಆಧಾರ್ ಪೌರತ್ವದ ದಾಖಲೆಯಲ್ಲ,’ UIDAI – ಪೊಲೀಸರ ಗೊಂದಲ: ಈಗಲೇ ಹೀಗೆ, NRC ಬಂದರೆ ಇನ್ಹೇಗೆ?

- Advertisement -
- Advertisement -

ಬುಧವಾರ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತರಾತುರಿಯಲ್ಲಿ ಒಂದು ಹೇಳಿಕೆ ಬಿಡುಗಡೆ ಮಾಡಿ, ಆಧಾರ್ ಪೌರತ್ವ ದಾಖಲೆಯಲ್ಲ ಮತ್ತು ಪೌರತ್ವದ ಕುರಿತಾಗಿ ತನಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ತನ್ನ ಅಧಿಕಾರದ ವ್ಯಾಪ್ತಿ ಮೀರಿ ವರ್ತಿಸಲು ಹೋದ ಯುಐಡಿಎಐ, ಈ ಎಲ್ಲ ಗೊಂದಲಕ್ಕೆ ಕಾರಣವಾಗಿದೆ. ಹೈದರಾಬಾದಿನ ಪೊಲೀಸರು, 127 ಜನರನ್ನು (ಎಲ್ಲರೂ ಮುಸ್ಲಿಮರು) ಅಕ್ರಮ ವಲಸೆಗಾರರು ಎಂದು ಗುರುತಿಸಿ, ಇವರೆಲ್ಲರ ಆಧಾರ್ ಕಾರ್ಡ್‌ಗೆ ಕ್ರಮಬದ್ಧವಾದ ದಾಖಲೆ ಇವೆಯೇ? ಇಲ್ಲದಿದ್ದರೆ ಇವರ ಆಧಾರ್ ಕಾರ್ಡ್ ರದ್ದು ಮಾಡಿ ಎಂದು ಯುಐಡಿಎಐಗೆ ಪತ್ರ ಬರೆದಿದ್ದರು.

127 ಜನರು ಆಧಾರ್ ಪಡೆಯಲು ಸೂಕ್ತ ದಾಖಲೆ ನೀಡಿದ್ದಾರೋ ಇಲ್ಲವೋ, ಅದರಲ್ಲಿ ಫೋರ್ಜರಿ ಆಗಿದೆಯಾ ಅಥವಾ ಅನಧಿಕೃತ ಮೂಲಗಳಿಂದ ದಾಖಲೆ ಪಡೆದಿರುವರಾ ಎಂದು ಚೆಕ್ ಮಾಡಿ, ಅಲ್ಲಿ ಅಕ್ರಮ ಕಂಡು ಬಂದಿದ್ದರೆ ಅವರ ಆಧಾರ್ ಕಾರ್ಡ್ ಅನ್ನು ರದ್ದು ಮಾಡಬೇಕಾಗಿತ್ತು.

ಆದರೆ, ತನ್ನ ಅಧಿಕಾರ ವ್ಯಾಪ್ತಿ ಮೀರಿದ ಯುಐಡಿಎಐ, ನೀವು ಭಾರತೀಯ ಪೌರತ್ವ ಹೊಂದಿದ್ದೀರಾ? ಅಕ್ರಮ ವಲಸೆ ಬಂದಿದ್ದೀರಾ ಎಂದೆಲ್ಲ ನೋಟಿಸ್ ನೀಡುವ ಮೂಲಕ ಈಗಾಗಲೇ ಪೌರತ್ವದ ದಾಖಲೆಗಳ ಕುರಿತು ಎದ್ದಿರುವ ಗೊಂದಲವನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ. ಯುಐಡಿಎಐ ಮತ್ತು ಹೈದರಾಬಾದ್ ಪೊಲೀಸರ ನಡೆ 127 ಜನರ ಕುಟುಂಬಗಳಿಗೆ ಮಾರಕವಾಗಿ ಪರಿಣಮಿಸಿದೆ.

2016ರ ಆಧಾರ್‌ ಆ್ಯಕ್ಟ್ ಯುಐಡಿಎಐಗೆ ನೀಡಿರುವ ಅಧಿಕಾರ ಸಿಮೀತ ಸ್ವರೂಪದ್ದು ಅಷ್ಟೇ. ಈ ಆ್ಯಕ್ಟ್‌ನ 9ನೇ ಸೆಕ್ಷನ್ ಪ್ರಕಾರ, ಆಧಾರ್ ಯಾವುದೇ ಬಗೆಯ ಪೌರತ್ವ ಅಥವಾ ವಲಸೆಗೆ ಸಂಬಂಧಿಸಿದ ದಾಖಲೆಯಲ್ಲ. ಆಧಾರ್ ಪಡೆಯಲು ನೀಡಿದ ದಾಖಲೆಗಳು ಅಸಮರ್ಪಕ ಅಥವಾ ನಕಲಿಯಾಗಿದ್ದಾಗ ಮಾತ್ರ ಯುಐಡಿಎಐ ಅಂತಹ ಆಧಾರ್ ಸಂಖ್ಯೆಯನ್ನು ರದ್ದು ಮಾಡಬಹುದು ಅಷ್ಟೇ. ಸೆಕ್ಷನ್ 3ರ ಪ್ರಕಾರ, ವಾಸದ ವಿಳಾಸದ ದಾಖಲೆ ಇದ್ದರೆ ಸಾಕು, ಆಧಾರ್ ಪಡೆಯಬಹುದು. ವಿದೇಶದಿಂದ ಬಂದು ಇಲ್ಲಿ ಆರು ತಿಂಗಳು ನೆಲೆಸಿದವರಿಗೂ ಆಧಾರ್ ಸಿಗುತ್ತದೆ. ಹೀಗಿರುವಾಗ ಯುಐಡಿಐಎ ಅಕ್ಟ್‌ ವಲಸೆ ವಿಚಾರದಲ್ಲಿ ಮೂಗು ತೂರಿಸಿ, ಜನರ ಪೌರತ್ವವನ್ನು ಪ್ರಶ್ನಿಸಲು ಹೊರಟಿದೆ.

ಇಲ್ಲಿ ಒಂದಿಷ್ಟು ಪ್ರಶ್ನೆಗಳು ಏಳುತ್ತವೆ: 2018ರ ಜೂನ್‌ನಲ್ಲಿ ಯುಐಡಿಎಐ ಸ್ಪಷ್ಟಪಡಿಸಿದಂತೆ, ಒಟ್ಟು ಆಧಾರ್ ನೋಂದಣಿ ಪೈಕಿ ಶೇ.38ರಷ್ಟು ನೋಂದಣಿ ವಿವರಗಳು (ಗುರುತು ಮತ್ತು ವಿಳಾಸದ ದಾಖಲೆ) ತನಗೆ ಲಭ್ಯ (access) ಆಗುತ್ತಿಲ್ಲ ಎಂದಿತ್ತು. ಈ 127 ಜನರು ‘ಆ ಲಭ್ಯವಿಲ್ಲದ’ ನೋಂದಣಿಯಲ್ಲಿರಬಹುದೇ ಎಂದು ಹೇಗೆ ದೃಢೀಕರಿಸುತ್ತಾರೆ? ನಿಮ್ಮ ದಾಖಲೆಗಳನ್ನು ಸಲ್ಲಿಸಿ ಅವು ಅಸಲಿ ಎಂದು ರುಜುವಾತು ಮಾಡಿ ಎಂದಷ್ಟೇ 127 ಜನರಿಗೆ ಸೂಚಿಸಿದ್ದರೆ ಸಾಕಿತ್ತು. ಆದರೆ ಒಂದು ಹೆಜ್ಜೆ ಮುಂದೆ ಹೋದ ಯುಐಡಿಎಐ, ವಲಸೆ, ಪೌರತ್ವದ ಪ್ರಶ್ನೆ ಎತ್ತಿ ವಿವಾದಕ್ಕೆ ಈಡಾಗಿದೆ.

ಹೈದರಾಬಾದ್ ಪೊಲೀಸರಿಗೆ 127 ಜನ ಅಕ್ರಮ ವಲಸೆಗಾರರು ಎಂಬ ಸಂಶಯ ಬಂದಿದ್ದರೆ, ಅವರು ವಿವರಣೆ ಪಡೆಯಬೇಕಾದುದು ಆಧಾರ್ ಕುರಿತಲ್ಲ ಮತ್ತು ಯುಐಡಿಎಐನಿಂದಲ್ಲ. ಅವರು ವಲಸೆ ವಿಭಾಗವನ್ನು ಸಂಪರ್ಕಿಸಿ, ವಿದೇಶಿಗರ ಆ್ಯಕ್ಟ್ ಅಡಿ 127 ಜನ ಅಕ್ರಮ ವಲಸಿಗರೇ ಎಂಬುದನ್ನು ಪರೀಕ್ಷಿಸಿ ಎಂದು ಕೇಳಬೇಕಿತ್ತು. ಆಮೇಲೆ ಆಧಾರ್ ರದ್ದಿನ ವಿಷಯ ನೋಡಬೇಕಿತ್ತು.

ಈಗ ನೋಡಿ, ಸರಿಯಾದ ವಿಚಾರಣೆಯಿಲ್ಲದೇ ಅಥವಾ ವಿಚಾರಣೆ ಮುಗಿಯುವವರೆಗೆ ಕಾಯದೆ 127 ಜನರ ಆಧಾರ್ ಕಿತ್ತುಕೊಂಡು ಬಿಟ್ಟರೆ, 127 ಕುಟುಂಬಗಳು ರೇಷನ್‌ನಿಂದ ಹಿಡಿದು ಚಿಕಿತ್ಸೆವರೆಗೆ ಎಲ್ಲ ಸೌಲಭ್ಯ ಕಳೆದುಕೊಳ್ಳಲಿವೆ.

ಅಕ್ರಮ ವಲಸಿಗರಾ ಎಂದು ಕೇಳಲು ಈ ಯುಐಡಿಎಐ ಯಾರು? ಅಕ್ರಮ ವಲಸೆಗಾರರ ವಿಷಯವನ್ನು ವಲಸೆ ವಿಭಾಗಕ್ಕೆ ತಲುಪಿಸಬೇಕಿದ್ದ ಪೊಲೀಸರು, ಯುಐಡಿಎಐ ಮೊರೆ ಹೋದರೇಕೆ? ಈಗಲೇ ಹೀಗೆ, ಈ ಎನ್‌ಪಿಆರ್, ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ಬಂದರೆ ಪರಿಸ್ಥಿತಿ ಎಷ್ಟು ಭೀಕರವಾಗಿರಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...