HomeಮುಖಪುಟAaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

Aaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಅವರ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಹೊರನೋಟಕ್ಕೆ ಗೋಚರಿಸುತ್ತದೆ ಎಂದು ಹೈಕೋರ್ಟ್‌ ಇಂದು ಮೌಖಿಕವಾಗಿ ಹೇಳಿದೆ.

”ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳಿ ಶೋ ಒಂದನ್ನು ಸುಧೀರ್‌ ಚೌಧರಿ ಇತ್ತೀಚೆಗೆ ನಡೆಸಿದ್ದು ಅದರಲ್ಲಿ ಅವರು ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಕುಮಾರ್‌ ಎಸ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಚೌಧರಿ ವಿರುದ್ಧ ಐಪಿಸಿ ಸೆಕ್ಷನ್‌ 505 ಮತ್ತು 153ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ವಾಹಿನಿ ತನ್ನ ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳಿರುವ ಹೊರತಾಗಿಯೂ ಅದು ತನ್ನ ಹೇಳಿಕೆಗಳನ್ನು ವಾಪಸ್‌ ಪಡೆದಿಲ್ಲ ಎಂದು ಶುಕ್ರವಾರದ ವಿಚಾರಣೆ ವೇಳೆ ಜಸ್ಟಿಸ್‌ ಹೇಮಂತ್‌ ಚಂದನ್‌ಗೌಡರ್‌ ಹೇಳಿದರು.

”ಮಾಹಿತಿ ಒದಗಿಸುವುದು ಮಾಧ್ಯಮದ ಜವಾಬ್ದಾರಿ ಆದರೆ ಇದು ನೀಡಬೇಕಾದ ಮಾಹಿತಿಯಲ್ಲ. ಪ್ರಯೋಜನಗಳನ್ನು ಅಲ್ಪಸಂಖ್ಯಾತರಿಗೆ ಮಾತ್ರವೇ ನೀಡಲಾಗುತ್ತದೆ ಎಂದೇನಿಲ್ಲ, ಕಾರ್ಪೊರೇಟ್‌ ಸಂಸ್ಥೆಗಳಿಗೂ ನೀಡಲಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು ಇಂತಹುದೇ ಯೋಜನೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಇತ್ತು. ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆ ಒದಗಿಸುತ್ತಿದೆ ಹಿಂದೂಗಳನ್ನು ವಂಚಿತರನ್ನಾಗಿಸುತ್ತದೆ ಎಂಬ ಆರೋಪವನ್ನು ಚಾನೆಲ್‌ ಹೊರಿಸಿದೆ.

ಈ ಪ್ರಕರಣದಲ್ಲಿ ತನಿಖೆ ನಡೆಸಲು ಸೂಕ್ತ ಕಾರಣಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಸೆಪ್ಟೆಂಬರ್‌ 11ರಂದು ಚೌಧುರಿ ಪ್ರಸ್ತುತ ಪಡಿಸಿದ ಕಾರ್ಯಕ್ರಮವೊಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಾಹೀರಾತೊಂದರತ್ತ ಬೆಳಕು ಚೆಲ್ಲಿತ್ತು. ವಾಣಿಜ್ಯ ವಾಹನಗಳ ಖರೀದಿಗಾಗಿ ವಾರ್ಷಿಕ ರೂ. 4.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ ಧಾರ್ಮಿಕ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ಜನರಿಗೆ ರೂ 3 ಲಕ್ಷದ ತನಕ ಶೇ50 ಸಬ್ಸಿಡಿ ನೀಡುವ ಯೋಜನೆಯ ಕುರಿತ ಜಾಹೀರಾತು ಅದಾಗಿತ್ತು.

ಆದರೆ ಈ ಯೋಜನೆ ತಾರತಮ್ಯಕಾರಿ ಮತ್ತು ಈ ಯೋಜನೆ ಹಿಂದುಗಳಿಗೆ ಲಭ್ಯವಿಲ್ಲ ಎಂದು ಸುಧೀರ್‌ ಚೌಧರಿ ಅವರು ತಮ್ಮ ಶೋದಲ್ಲಿ ಹೇಳಿಕೊಂಡಿದ್ದರು.

ಆದರೆ ಇದೇ ಪ್ರಯೋಜನವನ್ನು ಪರಿಶಿಷ್ಟ ಜಾತಿ ಪಂಗಡಗಳ ಸದಸ್ಯರು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಪಡೆಯಬಹುದು ಮತ್ತು ಹಿಂದುಳಿದ ವರ್ಗಗಳು ರಾಜ್ಯ ಸರ್ಕಾರದಿಂದ ಪಡೆಯಬಹುದು ಎಂಬುದನ್ನು ಈ ಶೋ ಹೇಳಿಲ್ಲ.

ಈ ಮೂರೂ ಯೋಜನೆಗಳು ಜುಲೈ 2023ರ ಕರ್ನಾಟಕ ಬಜೆಟಿನಲ್ಲಿ ಉಲ್ಲೇಖಿಸಲಾಗಿತ್ತು. ಸ್ವಾವಲಂಬಿ ಸಾರಥಿ ಎಂಬ ವಾಹನ ಸಬ್ಸಿಡಿ ಯೋಜನೆಯಡಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ವರ್ಗದವರು ಮತ್ತು ಹಿಂದುಳಿದ ವರ್ಗಗಳವರು ಪ್ರಯೋಜನ ಪಡೆಯಬಹುದು ಎಂದು ಬಜೆಟ್‌ ಹೇಳಿತ್ತು.

”ಈ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳುವ ಮೂಲಕ ಚೌಧರಿ ಅವರು ಯೋಜನೆಗೆ ಮತೀಯ ಬಣ್ಣ ನೀಡಲು ಚೌಧರಿ ಯತ್ನಿಸಿದ್ದರು.

”ನೀವು ತುಂಬಾ ಬಡವರಾಗಿದ್ದರೆ, ನಿಮ್ಮಲ್ಲಿ ಹಣವಿಲ್ಲದೇ ಇದ್ದರೆ, ಆದರೆ ನೀವು ಹಿಂದು ಆಗಿದ್ದರೆ, ವಾಹನ ಖರೀದಿಸಲು ನಿಮಗೆ ಸಬ್ಸಿಡಿ ದೊರೆಯುವುದಿಲ್ಲ ಎಂದು ಹೇಳುವ ಪ್ರಯತ್ನ ಕರ್ನಾಟಕ ಸರ್ಕಾರ ಮಾಡುತ್ತಿದೆ. ಆದರೆ ಮುಸ್ಲಿಮರು, ಸಿಖರು, ಬೌದ್ಧರು ವಾಹನ ಖರೀದಿಗೆ ಸಬ್ಸಿಡಿ ಪಡೆಯಬಹುದು” ಎಂದು ಚೌಧರಿ ತಮ್ಮ ಶೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...