HomeಮುಖಪುಟAaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

Aaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಅವರ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಹೊರನೋಟಕ್ಕೆ ಗೋಚರಿಸುತ್ತದೆ ಎಂದು ಹೈಕೋರ್ಟ್‌ ಇಂದು ಮೌಖಿಕವಾಗಿ ಹೇಳಿದೆ.

”ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳಿ ಶೋ ಒಂದನ್ನು ಸುಧೀರ್‌ ಚೌಧರಿ ಇತ್ತೀಚೆಗೆ ನಡೆಸಿದ್ದು ಅದರಲ್ಲಿ ಅವರು ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಕುಮಾರ್‌ ಎಸ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಚೌಧರಿ ವಿರುದ್ಧ ಐಪಿಸಿ ಸೆಕ್ಷನ್‌ 505 ಮತ್ತು 153ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ವಾಹಿನಿ ತನ್ನ ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳಿರುವ ಹೊರತಾಗಿಯೂ ಅದು ತನ್ನ ಹೇಳಿಕೆಗಳನ್ನು ವಾಪಸ್‌ ಪಡೆದಿಲ್ಲ ಎಂದು ಶುಕ್ರವಾರದ ವಿಚಾರಣೆ ವೇಳೆ ಜಸ್ಟಿಸ್‌ ಹೇಮಂತ್‌ ಚಂದನ್‌ಗೌಡರ್‌ ಹೇಳಿದರು.

”ಮಾಹಿತಿ ಒದಗಿಸುವುದು ಮಾಧ್ಯಮದ ಜವಾಬ್ದಾರಿ ಆದರೆ ಇದು ನೀಡಬೇಕಾದ ಮಾಹಿತಿಯಲ್ಲ. ಪ್ರಯೋಜನಗಳನ್ನು ಅಲ್ಪಸಂಖ್ಯಾತರಿಗೆ ಮಾತ್ರವೇ ನೀಡಲಾಗುತ್ತದೆ ಎಂದೇನಿಲ್ಲ, ಕಾರ್ಪೊರೇಟ್‌ ಸಂಸ್ಥೆಗಳಿಗೂ ನೀಡಲಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು ಇಂತಹುದೇ ಯೋಜನೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಇತ್ತು. ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆ ಒದಗಿಸುತ್ತಿದೆ ಹಿಂದೂಗಳನ್ನು ವಂಚಿತರನ್ನಾಗಿಸುತ್ತದೆ ಎಂಬ ಆರೋಪವನ್ನು ಚಾನೆಲ್‌ ಹೊರಿಸಿದೆ.

ಈ ಪ್ರಕರಣದಲ್ಲಿ ತನಿಖೆ ನಡೆಸಲು ಸೂಕ್ತ ಕಾರಣಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಸೆಪ್ಟೆಂಬರ್‌ 11ರಂದು ಚೌಧುರಿ ಪ್ರಸ್ತುತ ಪಡಿಸಿದ ಕಾರ್ಯಕ್ರಮವೊಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಾಹೀರಾತೊಂದರತ್ತ ಬೆಳಕು ಚೆಲ್ಲಿತ್ತು. ವಾಣಿಜ್ಯ ವಾಹನಗಳ ಖರೀದಿಗಾಗಿ ವಾರ್ಷಿಕ ರೂ. 4.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ ಧಾರ್ಮಿಕ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ಜನರಿಗೆ ರೂ 3 ಲಕ್ಷದ ತನಕ ಶೇ50 ಸಬ್ಸಿಡಿ ನೀಡುವ ಯೋಜನೆಯ ಕುರಿತ ಜಾಹೀರಾತು ಅದಾಗಿತ್ತು.

ಆದರೆ ಈ ಯೋಜನೆ ತಾರತಮ್ಯಕಾರಿ ಮತ್ತು ಈ ಯೋಜನೆ ಹಿಂದುಗಳಿಗೆ ಲಭ್ಯವಿಲ್ಲ ಎಂದು ಸುಧೀರ್‌ ಚೌಧರಿ ಅವರು ತಮ್ಮ ಶೋದಲ್ಲಿ ಹೇಳಿಕೊಂಡಿದ್ದರು.

ಆದರೆ ಇದೇ ಪ್ರಯೋಜನವನ್ನು ಪರಿಶಿಷ್ಟ ಜಾತಿ ಪಂಗಡಗಳ ಸದಸ್ಯರು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಪಡೆಯಬಹುದು ಮತ್ತು ಹಿಂದುಳಿದ ವರ್ಗಗಳು ರಾಜ್ಯ ಸರ್ಕಾರದಿಂದ ಪಡೆಯಬಹುದು ಎಂಬುದನ್ನು ಈ ಶೋ ಹೇಳಿಲ್ಲ.

ಈ ಮೂರೂ ಯೋಜನೆಗಳು ಜುಲೈ 2023ರ ಕರ್ನಾಟಕ ಬಜೆಟಿನಲ್ಲಿ ಉಲ್ಲೇಖಿಸಲಾಗಿತ್ತು. ಸ್ವಾವಲಂಬಿ ಸಾರಥಿ ಎಂಬ ವಾಹನ ಸಬ್ಸಿಡಿ ಯೋಜನೆಯಡಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ವರ್ಗದವರು ಮತ್ತು ಹಿಂದುಳಿದ ವರ್ಗಗಳವರು ಪ್ರಯೋಜನ ಪಡೆಯಬಹುದು ಎಂದು ಬಜೆಟ್‌ ಹೇಳಿತ್ತು.

”ಈ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳುವ ಮೂಲಕ ಚೌಧರಿ ಅವರು ಯೋಜನೆಗೆ ಮತೀಯ ಬಣ್ಣ ನೀಡಲು ಚೌಧರಿ ಯತ್ನಿಸಿದ್ದರು.

”ನೀವು ತುಂಬಾ ಬಡವರಾಗಿದ್ದರೆ, ನಿಮ್ಮಲ್ಲಿ ಹಣವಿಲ್ಲದೇ ಇದ್ದರೆ, ಆದರೆ ನೀವು ಹಿಂದು ಆಗಿದ್ದರೆ, ವಾಹನ ಖರೀದಿಸಲು ನಿಮಗೆ ಸಬ್ಸಿಡಿ ದೊರೆಯುವುದಿಲ್ಲ ಎಂದು ಹೇಳುವ ಪ್ರಯತ್ನ ಕರ್ನಾಟಕ ಸರ್ಕಾರ ಮಾಡುತ್ತಿದೆ. ಆದರೆ ಮುಸ್ಲಿಮರು, ಸಿಖರು, ಬೌದ್ಧರು ವಾಹನ ಖರೀದಿಗೆ ಸಬ್ಸಿಡಿ ಪಡೆಯಬಹುದು” ಎಂದು ಚೌಧರಿ ತಮ್ಮ ಶೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...