HomeಮುಖಪುಟAaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

Aaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಅವರ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಹೊರನೋಟಕ್ಕೆ ಗೋಚರಿಸುತ್ತದೆ ಎಂದು ಹೈಕೋರ್ಟ್‌ ಇಂದು ಮೌಖಿಕವಾಗಿ ಹೇಳಿದೆ.

”ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳಿ ಶೋ ಒಂದನ್ನು ಸುಧೀರ್‌ ಚೌಧರಿ ಇತ್ತೀಚೆಗೆ ನಡೆಸಿದ್ದು ಅದರಲ್ಲಿ ಅವರು ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಕುಮಾರ್‌ ಎಸ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಚೌಧರಿ ವಿರುದ್ಧ ಐಪಿಸಿ ಸೆಕ್ಷನ್‌ 505 ಮತ್ತು 153ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ವಾಹಿನಿ ತನ್ನ ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳಿರುವ ಹೊರತಾಗಿಯೂ ಅದು ತನ್ನ ಹೇಳಿಕೆಗಳನ್ನು ವಾಪಸ್‌ ಪಡೆದಿಲ್ಲ ಎಂದು ಶುಕ್ರವಾರದ ವಿಚಾರಣೆ ವೇಳೆ ಜಸ್ಟಿಸ್‌ ಹೇಮಂತ್‌ ಚಂದನ್‌ಗೌಡರ್‌ ಹೇಳಿದರು.

”ಮಾಹಿತಿ ಒದಗಿಸುವುದು ಮಾಧ್ಯಮದ ಜವಾಬ್ದಾರಿ ಆದರೆ ಇದು ನೀಡಬೇಕಾದ ಮಾಹಿತಿಯಲ್ಲ. ಪ್ರಯೋಜನಗಳನ್ನು ಅಲ್ಪಸಂಖ್ಯಾತರಿಗೆ ಮಾತ್ರವೇ ನೀಡಲಾಗುತ್ತದೆ ಎಂದೇನಿಲ್ಲ, ಕಾರ್ಪೊರೇಟ್‌ ಸಂಸ್ಥೆಗಳಿಗೂ ನೀಡಲಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು ಇಂತಹುದೇ ಯೋಜನೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಇತ್ತು. ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆ ಒದಗಿಸುತ್ತಿದೆ ಹಿಂದೂಗಳನ್ನು ವಂಚಿತರನ್ನಾಗಿಸುತ್ತದೆ ಎಂಬ ಆರೋಪವನ್ನು ಚಾನೆಲ್‌ ಹೊರಿಸಿದೆ.

ಈ ಪ್ರಕರಣದಲ್ಲಿ ತನಿಖೆ ನಡೆಸಲು ಸೂಕ್ತ ಕಾರಣಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಸೆಪ್ಟೆಂಬರ್‌ 11ರಂದು ಚೌಧುರಿ ಪ್ರಸ್ತುತ ಪಡಿಸಿದ ಕಾರ್ಯಕ್ರಮವೊಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಾಹೀರಾತೊಂದರತ್ತ ಬೆಳಕು ಚೆಲ್ಲಿತ್ತು. ವಾಣಿಜ್ಯ ವಾಹನಗಳ ಖರೀದಿಗಾಗಿ ವಾರ್ಷಿಕ ರೂ. 4.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ ಧಾರ್ಮಿಕ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ಜನರಿಗೆ ರೂ 3 ಲಕ್ಷದ ತನಕ ಶೇ50 ಸಬ್ಸಿಡಿ ನೀಡುವ ಯೋಜನೆಯ ಕುರಿತ ಜಾಹೀರಾತು ಅದಾಗಿತ್ತು.

ಆದರೆ ಈ ಯೋಜನೆ ತಾರತಮ್ಯಕಾರಿ ಮತ್ತು ಈ ಯೋಜನೆ ಹಿಂದುಗಳಿಗೆ ಲಭ್ಯವಿಲ್ಲ ಎಂದು ಸುಧೀರ್‌ ಚೌಧರಿ ಅವರು ತಮ್ಮ ಶೋದಲ್ಲಿ ಹೇಳಿಕೊಂಡಿದ್ದರು.

ಆದರೆ ಇದೇ ಪ್ರಯೋಜನವನ್ನು ಪರಿಶಿಷ್ಟ ಜಾತಿ ಪಂಗಡಗಳ ಸದಸ್ಯರು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಪಡೆಯಬಹುದು ಮತ್ತು ಹಿಂದುಳಿದ ವರ್ಗಗಳು ರಾಜ್ಯ ಸರ್ಕಾರದಿಂದ ಪಡೆಯಬಹುದು ಎಂಬುದನ್ನು ಈ ಶೋ ಹೇಳಿಲ್ಲ.

ಈ ಮೂರೂ ಯೋಜನೆಗಳು ಜುಲೈ 2023ರ ಕರ್ನಾಟಕ ಬಜೆಟಿನಲ್ಲಿ ಉಲ್ಲೇಖಿಸಲಾಗಿತ್ತು. ಸ್ವಾವಲಂಬಿ ಸಾರಥಿ ಎಂಬ ವಾಹನ ಸಬ್ಸಿಡಿ ಯೋಜನೆಯಡಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ವರ್ಗದವರು ಮತ್ತು ಹಿಂದುಳಿದ ವರ್ಗಗಳವರು ಪ್ರಯೋಜನ ಪಡೆಯಬಹುದು ಎಂದು ಬಜೆಟ್‌ ಹೇಳಿತ್ತು.

”ಈ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳುವ ಮೂಲಕ ಚೌಧರಿ ಅವರು ಯೋಜನೆಗೆ ಮತೀಯ ಬಣ್ಣ ನೀಡಲು ಚೌಧರಿ ಯತ್ನಿಸಿದ್ದರು.

”ನೀವು ತುಂಬಾ ಬಡವರಾಗಿದ್ದರೆ, ನಿಮ್ಮಲ್ಲಿ ಹಣವಿಲ್ಲದೇ ಇದ್ದರೆ, ಆದರೆ ನೀವು ಹಿಂದು ಆಗಿದ್ದರೆ, ವಾಹನ ಖರೀದಿಸಲು ನಿಮಗೆ ಸಬ್ಸಿಡಿ ದೊರೆಯುವುದಿಲ್ಲ ಎಂದು ಹೇಳುವ ಪ್ರಯತ್ನ ಕರ್ನಾಟಕ ಸರ್ಕಾರ ಮಾಡುತ್ತಿದೆ. ಆದರೆ ಮುಸ್ಲಿಮರು, ಸಿಖರು, ಬೌದ್ಧರು ವಾಹನ ಖರೀದಿಗೆ ಸಬ್ಸಿಡಿ ಪಡೆಯಬಹುದು” ಎಂದು ಚೌಧರಿ ತಮ್ಮ ಶೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...