HomeಮುಖಪುಟAaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

Aaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಅವರ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಹೊರನೋಟಕ್ಕೆ ಗೋಚರಿಸುತ್ತದೆ ಎಂದು ಹೈಕೋರ್ಟ್‌ ಇಂದು ಮೌಖಿಕವಾಗಿ ಹೇಳಿದೆ.

”ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳಿ ಶೋ ಒಂದನ್ನು ಸುಧೀರ್‌ ಚೌಧರಿ ಇತ್ತೀಚೆಗೆ ನಡೆಸಿದ್ದು ಅದರಲ್ಲಿ ಅವರು ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಕುಮಾರ್‌ ಎಸ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಚೌಧರಿ ವಿರುದ್ಧ ಐಪಿಸಿ ಸೆಕ್ಷನ್‌ 505 ಮತ್ತು 153ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ವಾಹಿನಿ ತನ್ನ ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳಿರುವ ಹೊರತಾಗಿಯೂ ಅದು ತನ್ನ ಹೇಳಿಕೆಗಳನ್ನು ವಾಪಸ್‌ ಪಡೆದಿಲ್ಲ ಎಂದು ಶುಕ್ರವಾರದ ವಿಚಾರಣೆ ವೇಳೆ ಜಸ್ಟಿಸ್‌ ಹೇಮಂತ್‌ ಚಂದನ್‌ಗೌಡರ್‌ ಹೇಳಿದರು.

”ಮಾಹಿತಿ ಒದಗಿಸುವುದು ಮಾಧ್ಯಮದ ಜವಾಬ್ದಾರಿ ಆದರೆ ಇದು ನೀಡಬೇಕಾದ ಮಾಹಿತಿಯಲ್ಲ. ಪ್ರಯೋಜನಗಳನ್ನು ಅಲ್ಪಸಂಖ್ಯಾತರಿಗೆ ಮಾತ್ರವೇ ನೀಡಲಾಗುತ್ತದೆ ಎಂದೇನಿಲ್ಲ, ಕಾರ್ಪೊರೇಟ್‌ ಸಂಸ್ಥೆಗಳಿಗೂ ನೀಡಲಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು ಇಂತಹುದೇ ಯೋಜನೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಇತ್ತು. ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆ ಒದಗಿಸುತ್ತಿದೆ ಹಿಂದೂಗಳನ್ನು ವಂಚಿತರನ್ನಾಗಿಸುತ್ತದೆ ಎಂಬ ಆರೋಪವನ್ನು ಚಾನೆಲ್‌ ಹೊರಿಸಿದೆ.

ಈ ಪ್ರಕರಣದಲ್ಲಿ ತನಿಖೆ ನಡೆಸಲು ಸೂಕ್ತ ಕಾರಣಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಸೆಪ್ಟೆಂಬರ್‌ 11ರಂದು ಚೌಧುರಿ ಪ್ರಸ್ತುತ ಪಡಿಸಿದ ಕಾರ್ಯಕ್ರಮವೊಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಾಹೀರಾತೊಂದರತ್ತ ಬೆಳಕು ಚೆಲ್ಲಿತ್ತು. ವಾಣಿಜ್ಯ ವಾಹನಗಳ ಖರೀದಿಗಾಗಿ ವಾರ್ಷಿಕ ರೂ. 4.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ ಧಾರ್ಮಿಕ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ಜನರಿಗೆ ರೂ 3 ಲಕ್ಷದ ತನಕ ಶೇ50 ಸಬ್ಸಿಡಿ ನೀಡುವ ಯೋಜನೆಯ ಕುರಿತ ಜಾಹೀರಾತು ಅದಾಗಿತ್ತು.

ಆದರೆ ಈ ಯೋಜನೆ ತಾರತಮ್ಯಕಾರಿ ಮತ್ತು ಈ ಯೋಜನೆ ಹಿಂದುಗಳಿಗೆ ಲಭ್ಯವಿಲ್ಲ ಎಂದು ಸುಧೀರ್‌ ಚೌಧರಿ ಅವರು ತಮ್ಮ ಶೋದಲ್ಲಿ ಹೇಳಿಕೊಂಡಿದ್ದರು.

ಆದರೆ ಇದೇ ಪ್ರಯೋಜನವನ್ನು ಪರಿಶಿಷ್ಟ ಜಾತಿ ಪಂಗಡಗಳ ಸದಸ್ಯರು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಪಡೆಯಬಹುದು ಮತ್ತು ಹಿಂದುಳಿದ ವರ್ಗಗಳು ರಾಜ್ಯ ಸರ್ಕಾರದಿಂದ ಪಡೆಯಬಹುದು ಎಂಬುದನ್ನು ಈ ಶೋ ಹೇಳಿಲ್ಲ.

ಈ ಮೂರೂ ಯೋಜನೆಗಳು ಜುಲೈ 2023ರ ಕರ್ನಾಟಕ ಬಜೆಟಿನಲ್ಲಿ ಉಲ್ಲೇಖಿಸಲಾಗಿತ್ತು. ಸ್ವಾವಲಂಬಿ ಸಾರಥಿ ಎಂಬ ವಾಹನ ಸಬ್ಸಿಡಿ ಯೋಜನೆಯಡಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ವರ್ಗದವರು ಮತ್ತು ಹಿಂದುಳಿದ ವರ್ಗಗಳವರು ಪ್ರಯೋಜನ ಪಡೆಯಬಹುದು ಎಂದು ಬಜೆಟ್‌ ಹೇಳಿತ್ತು.

”ಈ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳುವ ಮೂಲಕ ಚೌಧರಿ ಅವರು ಯೋಜನೆಗೆ ಮತೀಯ ಬಣ್ಣ ನೀಡಲು ಚೌಧರಿ ಯತ್ನಿಸಿದ್ದರು.

”ನೀವು ತುಂಬಾ ಬಡವರಾಗಿದ್ದರೆ, ನಿಮ್ಮಲ್ಲಿ ಹಣವಿಲ್ಲದೇ ಇದ್ದರೆ, ಆದರೆ ನೀವು ಹಿಂದು ಆಗಿದ್ದರೆ, ವಾಹನ ಖರೀದಿಸಲು ನಿಮಗೆ ಸಬ್ಸಿಡಿ ದೊರೆಯುವುದಿಲ್ಲ ಎಂದು ಹೇಳುವ ಪ್ರಯತ್ನ ಕರ್ನಾಟಕ ಸರ್ಕಾರ ಮಾಡುತ್ತಿದೆ. ಆದರೆ ಮುಸ್ಲಿಮರು, ಸಿಖರು, ಬೌದ್ಧರು ವಾಹನ ಖರೀದಿಗೆ ಸಬ್ಸಿಡಿ ಪಡೆಯಬಹುದು” ಎಂದು ಚೌಧರಿ ತಮ್ಮ ಶೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...