HomeಮುಖಪುಟAaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

Aaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಅವರ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಹೊರನೋಟಕ್ಕೆ ಗೋಚರಿಸುತ್ತದೆ ಎಂದು ಹೈಕೋರ್ಟ್‌ ಇಂದು ಮೌಖಿಕವಾಗಿ ಹೇಳಿದೆ.

”ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳಿ ಶೋ ಒಂದನ್ನು ಸುಧೀರ್‌ ಚೌಧರಿ ಇತ್ತೀಚೆಗೆ ನಡೆಸಿದ್ದು ಅದರಲ್ಲಿ ಅವರು ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಕುಮಾರ್‌ ಎಸ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಚೌಧರಿ ವಿರುದ್ಧ ಐಪಿಸಿ ಸೆಕ್ಷನ್‌ 505 ಮತ್ತು 153ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ವಾಹಿನಿ ತನ್ನ ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳಿರುವ ಹೊರತಾಗಿಯೂ ಅದು ತನ್ನ ಹೇಳಿಕೆಗಳನ್ನು ವಾಪಸ್‌ ಪಡೆದಿಲ್ಲ ಎಂದು ಶುಕ್ರವಾರದ ವಿಚಾರಣೆ ವೇಳೆ ಜಸ್ಟಿಸ್‌ ಹೇಮಂತ್‌ ಚಂದನ್‌ಗೌಡರ್‌ ಹೇಳಿದರು.

”ಮಾಹಿತಿ ಒದಗಿಸುವುದು ಮಾಧ್ಯಮದ ಜವಾಬ್ದಾರಿ ಆದರೆ ಇದು ನೀಡಬೇಕಾದ ಮಾಹಿತಿಯಲ್ಲ. ಪ್ರಯೋಜನಗಳನ್ನು ಅಲ್ಪಸಂಖ್ಯಾತರಿಗೆ ಮಾತ್ರವೇ ನೀಡಲಾಗುತ್ತದೆ ಎಂದೇನಿಲ್ಲ, ಕಾರ್ಪೊರೇಟ್‌ ಸಂಸ್ಥೆಗಳಿಗೂ ನೀಡಲಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು ಇಂತಹುದೇ ಯೋಜನೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಇತ್ತು. ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆ ಒದಗಿಸುತ್ತಿದೆ ಹಿಂದೂಗಳನ್ನು ವಂಚಿತರನ್ನಾಗಿಸುತ್ತದೆ ಎಂಬ ಆರೋಪವನ್ನು ಚಾನೆಲ್‌ ಹೊರಿಸಿದೆ.

ಈ ಪ್ರಕರಣದಲ್ಲಿ ತನಿಖೆ ನಡೆಸಲು ಸೂಕ್ತ ಕಾರಣಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಸೆಪ್ಟೆಂಬರ್‌ 11ರಂದು ಚೌಧುರಿ ಪ್ರಸ್ತುತ ಪಡಿಸಿದ ಕಾರ್ಯಕ್ರಮವೊಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಾಹೀರಾತೊಂದರತ್ತ ಬೆಳಕು ಚೆಲ್ಲಿತ್ತು. ವಾಣಿಜ್ಯ ವಾಹನಗಳ ಖರೀದಿಗಾಗಿ ವಾರ್ಷಿಕ ರೂ. 4.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ ಧಾರ್ಮಿಕ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ಜನರಿಗೆ ರೂ 3 ಲಕ್ಷದ ತನಕ ಶೇ50 ಸಬ್ಸಿಡಿ ನೀಡುವ ಯೋಜನೆಯ ಕುರಿತ ಜಾಹೀರಾತು ಅದಾಗಿತ್ತು.

ಆದರೆ ಈ ಯೋಜನೆ ತಾರತಮ್ಯಕಾರಿ ಮತ್ತು ಈ ಯೋಜನೆ ಹಿಂದುಗಳಿಗೆ ಲಭ್ಯವಿಲ್ಲ ಎಂದು ಸುಧೀರ್‌ ಚೌಧರಿ ಅವರು ತಮ್ಮ ಶೋದಲ್ಲಿ ಹೇಳಿಕೊಂಡಿದ್ದರು.

ಆದರೆ ಇದೇ ಪ್ರಯೋಜನವನ್ನು ಪರಿಶಿಷ್ಟ ಜಾತಿ ಪಂಗಡಗಳ ಸದಸ್ಯರು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಪಡೆಯಬಹುದು ಮತ್ತು ಹಿಂದುಳಿದ ವರ್ಗಗಳು ರಾಜ್ಯ ಸರ್ಕಾರದಿಂದ ಪಡೆಯಬಹುದು ಎಂಬುದನ್ನು ಈ ಶೋ ಹೇಳಿಲ್ಲ.

ಈ ಮೂರೂ ಯೋಜನೆಗಳು ಜುಲೈ 2023ರ ಕರ್ನಾಟಕ ಬಜೆಟಿನಲ್ಲಿ ಉಲ್ಲೇಖಿಸಲಾಗಿತ್ತು. ಸ್ವಾವಲಂಬಿ ಸಾರಥಿ ಎಂಬ ವಾಹನ ಸಬ್ಸಿಡಿ ಯೋಜನೆಯಡಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ವರ್ಗದವರು ಮತ್ತು ಹಿಂದುಳಿದ ವರ್ಗಗಳವರು ಪ್ರಯೋಜನ ಪಡೆಯಬಹುದು ಎಂದು ಬಜೆಟ್‌ ಹೇಳಿತ್ತು.

”ಈ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳುವ ಮೂಲಕ ಚೌಧರಿ ಅವರು ಯೋಜನೆಗೆ ಮತೀಯ ಬಣ್ಣ ನೀಡಲು ಚೌಧರಿ ಯತ್ನಿಸಿದ್ದರು.

”ನೀವು ತುಂಬಾ ಬಡವರಾಗಿದ್ದರೆ, ನಿಮ್ಮಲ್ಲಿ ಹಣವಿಲ್ಲದೇ ಇದ್ದರೆ, ಆದರೆ ನೀವು ಹಿಂದು ಆಗಿದ್ದರೆ, ವಾಹನ ಖರೀದಿಸಲು ನಿಮಗೆ ಸಬ್ಸಿಡಿ ದೊರೆಯುವುದಿಲ್ಲ ಎಂದು ಹೇಳುವ ಪ್ರಯತ್ನ ಕರ್ನಾಟಕ ಸರ್ಕಾರ ಮಾಡುತ್ತಿದೆ. ಆದರೆ ಮುಸ್ಲಿಮರು, ಸಿಖರು, ಬೌದ್ಧರು ವಾಹನ ಖರೀದಿಗೆ ಸಬ್ಸಿಡಿ ಪಡೆಯಬಹುದು” ಎಂದು ಚೌಧರಿ ತಮ್ಮ ಶೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...