Homeಮುಖಪುಟನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

ನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಹಿಂದಿ ಸುದ್ದಿವಾಹಿನಿ ‘ಆಜ್‌ತಖ್‌’ ರೂಪಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ನೆಹರೂ ವಿಡಿಯೊವನ್ನು ತಡೆಹಿಡಿದು (ಮುಚ್ಚಿಟ್ಟು) ಕಾರ್ಯಕ್ರಮ ಪ್ರಸಾರ ಮಾಡಿರುವುದು ಕಂಡುಬಂದಿದೆ.

“ಬಿಜೆಪಿ ನೆಹರೂ ಅವರಿಗೆ ಗೌರವವನ್ನು ಸಲ್ಲಿಸದಿರುವುದು ಏಕೆಂದು ಅರ್ಥ ಮಾಡಿಕೊಳ್ಳಬಹುದು. ಆದರೆ ಟಿ.ವಿ. ನ್ಯೂಸ್‌ ಚಾನೆಲ್‌ ಏಕೆ ಹೀಗೆ ಮಾಡುತ್ತಿವೆ?” ಎಂದು ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿದ್ದಾರೆ.

ಎರಡು ವಿಡಿಯೊ ತುಣುಕುಗಳನ್ನು ಹೋಲಿಕೆ ಮಾಡಿ ಅವರು ಮಾಡಿರುವ ಟ್ವೀಟ್ ಈಗ ಚರ್ಚೆಗೆ ಗ್ರಾಸವಾಗಿದೆ. ನೆಹರೂ ಅವರ ಕೊಡುಗೆಯನ್ನು ಬಿಜೆಪಿ ಮರೆಮಾಚುತ್ತಿರುವ ಹಿನ್ನೆಲೆಯಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಜನಾಕ್ರೋಶಕ್ಕೂ ಮೊದಲು ಹಾಗೂ ಆಕ್ರೋಶದ ನಂತರ ಆಜ್‌ತಖ್‌ ಪ್ರಸಾರ ಮಾಡಿರುವ ವಿಡಿಯೊವನ್ನು ಜುಬೈರ್‌ ಹೋಲಿಕೆ ಮಾಡಿದ್ದಾರೆ.

ಜನಾಕ್ರೋಶಕ್ಕೂ ಮೊದಲು ಪ್ರಸಾರ ಮಾಡಿರುವ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ನೆಹರೂ ಅವರಿದ್ದಾರೋ ಆ ವಿಡಿಯೊಗಳನ್ನೆಲ್ಲ ಹೈಡ್ ಮಾಡಿ ಪ್ರಸಾರ ಮಾಡಲಾಗಿದೆ. ಜನಾಕ್ರೋಶ ಬಂದ ಬಳಿಕ ಪ್ರಸಾರ ಮಾಡಲಾದ ವಿಡಿಯೊದಲ್ಲಿ ಹೈಡ್ ಮಾಡದೆ ವಿಡಿಯೊ ಹಾಕಲಾಗಿದೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯ ನೀಡದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ರಿಟಿಷರಲ್ಲಿ ಹಲವು ಭಾರಿ ಕ್ಷಮಾಪಣೆಗಳನ್ನು ಕೇಳಿದ ವಿ.ಡಿ.ಸಾವರ್ಕರ್‌ ಫೋಟೋ ಜೊತೆಗೆ ವಿವರಣೆಗಳನ್ನು ನೀಡಲಾಗಿದೆ. ಆದರೆ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಭಾರಿ ಜೈಲು ಸೇರಿದ್ದ ನೆಹರೂ ಅವರ ಕುರಿತು ಯಾವುದೇ ವಿವರಣೆಗಳು ಇಲ್ಲವಾಗಿವೆ.

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಕಿರುಪರಿಚಯವನ್ನು ನೀಡಲಾಗಿದೆ. ಹಾಗೆಯೇ ಸಾವರ್ಕರ್‌ ಫೋಟೋವನ್ನು ಹಾಕಿ, ‘ಕ್ರಾಂತಿಕಾರಿ’ ಎಂಬ ಬಿರುದನ್ನು ನೀಡಿ ಪರಿಚಯ ನೀಡಲಾಗಿದೆ.

ರೇಖಾ ಚಿತ್ರದ ರೀತಿಯಲ್ಲಿ ರಾಷ್ಟ್ರನಾಯಕರ ಚಿತ್ರಗಳನ್ನು ಬಳಸಲಾಗಿದ್ದು, ಅಲ್ಲಿ ಮಾತ್ರ ನೆಹರೂ ಅವರ ಚಿತ್ರವನ್ನು ಕಿರುದಾಗಿ ಬಳಸಲಾಗಿದೆ. ಸರ್ಕಾರದ ಸಣ್ಣತನವನ್ನು ಗಮನಿಸಿರುವ ನಾಡಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಹಿರಿಯ ಪತ್ರಕರ್ತ ಸನತ್‌ಕುಮಾರ್‌ ಬೆಳಗಲಿಯವರು ಪ್ರತಿಕ್ರಿಯಿಸಿ, “ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಗಳಿಗೆ ನೀಡಿದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪಟ ಇಲ್ಲ. ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ಅಪಾರ ತ್ಯಾಗ ಮಾಡಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಪಟ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು” ಎಂದಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಳ ಅವರು, “ನೆಹರೂವನ್ನು ಕಡೆಗಣಿಸುವುದರಿಂದ, ಅವಮಾನಿಸುವುದರಿಂದ ನೆಹರೂಗೆ ಏನೂ ಆಗುವುದಿಲ್ಲ. ಅವರಿಗೆ ಅದು ತಿಳಿಯುವುದೂ ಇಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿ, ಬದುಕು ಸಾರ್ಥಕಪಡಿಸಿ, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರು ದಾಖಲಿಸಿ ಹೊರಟು ಹೋಗಿದ್ದಾರೆ. ಸಣ್ಣವರಾಗುವುದು ಬದುಕಿರುವ ನೀವು. ನೀವು ಹೆಸರಾಗುವುದು, ಇತಿಹಾಸದ ಪುಟಗಳಲ್ಲಿ ಉಳಿಯುವುದು ನಿಮ್ಮ ಸಣ್ಣತನಕ್ಕಾಗಿ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...