Homeಮುಖಪುಟನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

ನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಹಿಂದಿ ಸುದ್ದಿವಾಹಿನಿ ‘ಆಜ್‌ತಖ್‌’ ರೂಪಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ನೆಹರೂ ವಿಡಿಯೊವನ್ನು ತಡೆಹಿಡಿದು (ಮುಚ್ಚಿಟ್ಟು) ಕಾರ್ಯಕ್ರಮ ಪ್ರಸಾರ ಮಾಡಿರುವುದು ಕಂಡುಬಂದಿದೆ.

“ಬಿಜೆಪಿ ನೆಹರೂ ಅವರಿಗೆ ಗೌರವವನ್ನು ಸಲ್ಲಿಸದಿರುವುದು ಏಕೆಂದು ಅರ್ಥ ಮಾಡಿಕೊಳ್ಳಬಹುದು. ಆದರೆ ಟಿ.ವಿ. ನ್ಯೂಸ್‌ ಚಾನೆಲ್‌ ಏಕೆ ಹೀಗೆ ಮಾಡುತ್ತಿವೆ?” ಎಂದು ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿದ್ದಾರೆ.

ಎರಡು ವಿಡಿಯೊ ತುಣುಕುಗಳನ್ನು ಹೋಲಿಕೆ ಮಾಡಿ ಅವರು ಮಾಡಿರುವ ಟ್ವೀಟ್ ಈಗ ಚರ್ಚೆಗೆ ಗ್ರಾಸವಾಗಿದೆ. ನೆಹರೂ ಅವರ ಕೊಡುಗೆಯನ್ನು ಬಿಜೆಪಿ ಮರೆಮಾಚುತ್ತಿರುವ ಹಿನ್ನೆಲೆಯಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಜನಾಕ್ರೋಶಕ್ಕೂ ಮೊದಲು ಹಾಗೂ ಆಕ್ರೋಶದ ನಂತರ ಆಜ್‌ತಖ್‌ ಪ್ರಸಾರ ಮಾಡಿರುವ ವಿಡಿಯೊವನ್ನು ಜುಬೈರ್‌ ಹೋಲಿಕೆ ಮಾಡಿದ್ದಾರೆ.

ಜನಾಕ್ರೋಶಕ್ಕೂ ಮೊದಲು ಪ್ರಸಾರ ಮಾಡಿರುವ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ನೆಹರೂ ಅವರಿದ್ದಾರೋ ಆ ವಿಡಿಯೊಗಳನ್ನೆಲ್ಲ ಹೈಡ್ ಮಾಡಿ ಪ್ರಸಾರ ಮಾಡಲಾಗಿದೆ. ಜನಾಕ್ರೋಶ ಬಂದ ಬಳಿಕ ಪ್ರಸಾರ ಮಾಡಲಾದ ವಿಡಿಯೊದಲ್ಲಿ ಹೈಡ್ ಮಾಡದೆ ವಿಡಿಯೊ ಹಾಕಲಾಗಿದೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯ ನೀಡದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ರಿಟಿಷರಲ್ಲಿ ಹಲವು ಭಾರಿ ಕ್ಷಮಾಪಣೆಗಳನ್ನು ಕೇಳಿದ ವಿ.ಡಿ.ಸಾವರ್ಕರ್‌ ಫೋಟೋ ಜೊತೆಗೆ ವಿವರಣೆಗಳನ್ನು ನೀಡಲಾಗಿದೆ. ಆದರೆ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಭಾರಿ ಜೈಲು ಸೇರಿದ್ದ ನೆಹರೂ ಅವರ ಕುರಿತು ಯಾವುದೇ ವಿವರಣೆಗಳು ಇಲ್ಲವಾಗಿವೆ.

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಕಿರುಪರಿಚಯವನ್ನು ನೀಡಲಾಗಿದೆ. ಹಾಗೆಯೇ ಸಾವರ್ಕರ್‌ ಫೋಟೋವನ್ನು ಹಾಕಿ, ‘ಕ್ರಾಂತಿಕಾರಿ’ ಎಂಬ ಬಿರುದನ್ನು ನೀಡಿ ಪರಿಚಯ ನೀಡಲಾಗಿದೆ.

ರೇಖಾ ಚಿತ್ರದ ರೀತಿಯಲ್ಲಿ ರಾಷ್ಟ್ರನಾಯಕರ ಚಿತ್ರಗಳನ್ನು ಬಳಸಲಾಗಿದ್ದು, ಅಲ್ಲಿ ಮಾತ್ರ ನೆಹರೂ ಅವರ ಚಿತ್ರವನ್ನು ಕಿರುದಾಗಿ ಬಳಸಲಾಗಿದೆ. ಸರ್ಕಾರದ ಸಣ್ಣತನವನ್ನು ಗಮನಿಸಿರುವ ನಾಡಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಹಿರಿಯ ಪತ್ರಕರ್ತ ಸನತ್‌ಕುಮಾರ್‌ ಬೆಳಗಲಿಯವರು ಪ್ರತಿಕ್ರಿಯಿಸಿ, “ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಗಳಿಗೆ ನೀಡಿದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪಟ ಇಲ್ಲ. ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ಅಪಾರ ತ್ಯಾಗ ಮಾಡಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಪಟ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು” ಎಂದಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಳ ಅವರು, “ನೆಹರೂವನ್ನು ಕಡೆಗಣಿಸುವುದರಿಂದ, ಅವಮಾನಿಸುವುದರಿಂದ ನೆಹರೂಗೆ ಏನೂ ಆಗುವುದಿಲ್ಲ. ಅವರಿಗೆ ಅದು ತಿಳಿಯುವುದೂ ಇಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿ, ಬದುಕು ಸಾರ್ಥಕಪಡಿಸಿ, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರು ದಾಖಲಿಸಿ ಹೊರಟು ಹೋಗಿದ್ದಾರೆ. ಸಣ್ಣವರಾಗುವುದು ಬದುಕಿರುವ ನೀವು. ನೀವು ಹೆಸರಾಗುವುದು, ಇತಿಹಾಸದ ಪುಟಗಳಲ್ಲಿ ಉಳಿಯುವುದು ನಿಮ್ಮ ಸಣ್ಣತನಕ್ಕಾಗಿ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...