Homeಮುಖಪುಟನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

ನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಹಿಂದಿ ಸುದ್ದಿವಾಹಿನಿ ‘ಆಜ್‌ತಖ್‌’ ರೂಪಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ನೆಹರೂ ವಿಡಿಯೊವನ್ನು ತಡೆಹಿಡಿದು (ಮುಚ್ಚಿಟ್ಟು) ಕಾರ್ಯಕ್ರಮ ಪ್ರಸಾರ ಮಾಡಿರುವುದು ಕಂಡುಬಂದಿದೆ.

“ಬಿಜೆಪಿ ನೆಹರೂ ಅವರಿಗೆ ಗೌರವವನ್ನು ಸಲ್ಲಿಸದಿರುವುದು ಏಕೆಂದು ಅರ್ಥ ಮಾಡಿಕೊಳ್ಳಬಹುದು. ಆದರೆ ಟಿ.ವಿ. ನ್ಯೂಸ್‌ ಚಾನೆಲ್‌ ಏಕೆ ಹೀಗೆ ಮಾಡುತ್ತಿವೆ?” ಎಂದು ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿದ್ದಾರೆ.

ಎರಡು ವಿಡಿಯೊ ತುಣುಕುಗಳನ್ನು ಹೋಲಿಕೆ ಮಾಡಿ ಅವರು ಮಾಡಿರುವ ಟ್ವೀಟ್ ಈಗ ಚರ್ಚೆಗೆ ಗ್ರಾಸವಾಗಿದೆ. ನೆಹರೂ ಅವರ ಕೊಡುಗೆಯನ್ನು ಬಿಜೆಪಿ ಮರೆಮಾಚುತ್ತಿರುವ ಹಿನ್ನೆಲೆಯಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಜನಾಕ್ರೋಶಕ್ಕೂ ಮೊದಲು ಹಾಗೂ ಆಕ್ರೋಶದ ನಂತರ ಆಜ್‌ತಖ್‌ ಪ್ರಸಾರ ಮಾಡಿರುವ ವಿಡಿಯೊವನ್ನು ಜುಬೈರ್‌ ಹೋಲಿಕೆ ಮಾಡಿದ್ದಾರೆ.

ಜನಾಕ್ರೋಶಕ್ಕೂ ಮೊದಲು ಪ್ರಸಾರ ಮಾಡಿರುವ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ನೆಹರೂ ಅವರಿದ್ದಾರೋ ಆ ವಿಡಿಯೊಗಳನ್ನೆಲ್ಲ ಹೈಡ್ ಮಾಡಿ ಪ್ರಸಾರ ಮಾಡಲಾಗಿದೆ. ಜನಾಕ್ರೋಶ ಬಂದ ಬಳಿಕ ಪ್ರಸಾರ ಮಾಡಲಾದ ವಿಡಿಯೊದಲ್ಲಿ ಹೈಡ್ ಮಾಡದೆ ವಿಡಿಯೊ ಹಾಕಲಾಗಿದೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯ ನೀಡದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ರಿಟಿಷರಲ್ಲಿ ಹಲವು ಭಾರಿ ಕ್ಷಮಾಪಣೆಗಳನ್ನು ಕೇಳಿದ ವಿ.ಡಿ.ಸಾವರ್ಕರ್‌ ಫೋಟೋ ಜೊತೆಗೆ ವಿವರಣೆಗಳನ್ನು ನೀಡಲಾಗಿದೆ. ಆದರೆ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಭಾರಿ ಜೈಲು ಸೇರಿದ್ದ ನೆಹರೂ ಅವರ ಕುರಿತು ಯಾವುದೇ ವಿವರಣೆಗಳು ಇಲ್ಲವಾಗಿವೆ.

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಕಿರುಪರಿಚಯವನ್ನು ನೀಡಲಾಗಿದೆ. ಹಾಗೆಯೇ ಸಾವರ್ಕರ್‌ ಫೋಟೋವನ್ನು ಹಾಕಿ, ‘ಕ್ರಾಂತಿಕಾರಿ’ ಎಂಬ ಬಿರುದನ್ನು ನೀಡಿ ಪರಿಚಯ ನೀಡಲಾಗಿದೆ.

ರೇಖಾ ಚಿತ್ರದ ರೀತಿಯಲ್ಲಿ ರಾಷ್ಟ್ರನಾಯಕರ ಚಿತ್ರಗಳನ್ನು ಬಳಸಲಾಗಿದ್ದು, ಅಲ್ಲಿ ಮಾತ್ರ ನೆಹರೂ ಅವರ ಚಿತ್ರವನ್ನು ಕಿರುದಾಗಿ ಬಳಸಲಾಗಿದೆ. ಸರ್ಕಾರದ ಸಣ್ಣತನವನ್ನು ಗಮನಿಸಿರುವ ನಾಡಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಹಿರಿಯ ಪತ್ರಕರ್ತ ಸನತ್‌ಕುಮಾರ್‌ ಬೆಳಗಲಿಯವರು ಪ್ರತಿಕ್ರಿಯಿಸಿ, “ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಗಳಿಗೆ ನೀಡಿದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪಟ ಇಲ್ಲ. ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ಅಪಾರ ತ್ಯಾಗ ಮಾಡಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಪಟ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು” ಎಂದಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಳ ಅವರು, “ನೆಹರೂವನ್ನು ಕಡೆಗಣಿಸುವುದರಿಂದ, ಅವಮಾನಿಸುವುದರಿಂದ ನೆಹರೂಗೆ ಏನೂ ಆಗುವುದಿಲ್ಲ. ಅವರಿಗೆ ಅದು ತಿಳಿಯುವುದೂ ಇಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿ, ಬದುಕು ಸಾರ್ಥಕಪಡಿಸಿ, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರು ದಾಖಲಿಸಿ ಹೊರಟು ಹೋಗಿದ್ದಾರೆ. ಸಣ್ಣವರಾಗುವುದು ಬದುಕಿರುವ ನೀವು. ನೀವು ಹೆಸರಾಗುವುದು, ಇತಿಹಾಸದ ಪುಟಗಳಲ್ಲಿ ಉಳಿಯುವುದು ನಿಮ್ಮ ಸಣ್ಣತನಕ್ಕಾಗಿ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...