Homeಮುಖಪುಟನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

ನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಹಿಂದಿ ಸುದ್ದಿವಾಹಿನಿ ‘ಆಜ್‌ತಖ್‌’ ರೂಪಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ನೆಹರೂ ವಿಡಿಯೊವನ್ನು ತಡೆಹಿಡಿದು (ಮುಚ್ಚಿಟ್ಟು) ಕಾರ್ಯಕ್ರಮ ಪ್ರಸಾರ ಮಾಡಿರುವುದು ಕಂಡುಬಂದಿದೆ.

“ಬಿಜೆಪಿ ನೆಹರೂ ಅವರಿಗೆ ಗೌರವವನ್ನು ಸಲ್ಲಿಸದಿರುವುದು ಏಕೆಂದು ಅರ್ಥ ಮಾಡಿಕೊಳ್ಳಬಹುದು. ಆದರೆ ಟಿ.ವಿ. ನ್ಯೂಸ್‌ ಚಾನೆಲ್‌ ಏಕೆ ಹೀಗೆ ಮಾಡುತ್ತಿವೆ?” ಎಂದು ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿದ್ದಾರೆ.

ಎರಡು ವಿಡಿಯೊ ತುಣುಕುಗಳನ್ನು ಹೋಲಿಕೆ ಮಾಡಿ ಅವರು ಮಾಡಿರುವ ಟ್ವೀಟ್ ಈಗ ಚರ್ಚೆಗೆ ಗ್ರಾಸವಾಗಿದೆ. ನೆಹರೂ ಅವರ ಕೊಡುಗೆಯನ್ನು ಬಿಜೆಪಿ ಮರೆಮಾಚುತ್ತಿರುವ ಹಿನ್ನೆಲೆಯಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಜನಾಕ್ರೋಶಕ್ಕೂ ಮೊದಲು ಹಾಗೂ ಆಕ್ರೋಶದ ನಂತರ ಆಜ್‌ತಖ್‌ ಪ್ರಸಾರ ಮಾಡಿರುವ ವಿಡಿಯೊವನ್ನು ಜುಬೈರ್‌ ಹೋಲಿಕೆ ಮಾಡಿದ್ದಾರೆ.

ಜನಾಕ್ರೋಶಕ್ಕೂ ಮೊದಲು ಪ್ರಸಾರ ಮಾಡಿರುವ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ನೆಹರೂ ಅವರಿದ್ದಾರೋ ಆ ವಿಡಿಯೊಗಳನ್ನೆಲ್ಲ ಹೈಡ್ ಮಾಡಿ ಪ್ರಸಾರ ಮಾಡಲಾಗಿದೆ. ಜನಾಕ್ರೋಶ ಬಂದ ಬಳಿಕ ಪ್ರಸಾರ ಮಾಡಲಾದ ವಿಡಿಯೊದಲ್ಲಿ ಹೈಡ್ ಮಾಡದೆ ವಿಡಿಯೊ ಹಾಕಲಾಗಿದೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯ ನೀಡದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ರಿಟಿಷರಲ್ಲಿ ಹಲವು ಭಾರಿ ಕ್ಷಮಾಪಣೆಗಳನ್ನು ಕೇಳಿದ ವಿ.ಡಿ.ಸಾವರ್ಕರ್‌ ಫೋಟೋ ಜೊತೆಗೆ ವಿವರಣೆಗಳನ್ನು ನೀಡಲಾಗಿದೆ. ಆದರೆ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಭಾರಿ ಜೈಲು ಸೇರಿದ್ದ ನೆಹರೂ ಅವರ ಕುರಿತು ಯಾವುದೇ ವಿವರಣೆಗಳು ಇಲ್ಲವಾಗಿವೆ.

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಕಿರುಪರಿಚಯವನ್ನು ನೀಡಲಾಗಿದೆ. ಹಾಗೆಯೇ ಸಾವರ್ಕರ್‌ ಫೋಟೋವನ್ನು ಹಾಕಿ, ‘ಕ್ರಾಂತಿಕಾರಿ’ ಎಂಬ ಬಿರುದನ್ನು ನೀಡಿ ಪರಿಚಯ ನೀಡಲಾಗಿದೆ.

ರೇಖಾ ಚಿತ್ರದ ರೀತಿಯಲ್ಲಿ ರಾಷ್ಟ್ರನಾಯಕರ ಚಿತ್ರಗಳನ್ನು ಬಳಸಲಾಗಿದ್ದು, ಅಲ್ಲಿ ಮಾತ್ರ ನೆಹರೂ ಅವರ ಚಿತ್ರವನ್ನು ಕಿರುದಾಗಿ ಬಳಸಲಾಗಿದೆ. ಸರ್ಕಾರದ ಸಣ್ಣತನವನ್ನು ಗಮನಿಸಿರುವ ನಾಡಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಹಿರಿಯ ಪತ್ರಕರ್ತ ಸನತ್‌ಕುಮಾರ್‌ ಬೆಳಗಲಿಯವರು ಪ್ರತಿಕ್ರಿಯಿಸಿ, “ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಗಳಿಗೆ ನೀಡಿದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪಟ ಇಲ್ಲ. ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ಅಪಾರ ತ್ಯಾಗ ಮಾಡಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಪಟ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು” ಎಂದಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಳ ಅವರು, “ನೆಹರೂವನ್ನು ಕಡೆಗಣಿಸುವುದರಿಂದ, ಅವಮಾನಿಸುವುದರಿಂದ ನೆಹರೂಗೆ ಏನೂ ಆಗುವುದಿಲ್ಲ. ಅವರಿಗೆ ಅದು ತಿಳಿಯುವುದೂ ಇಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿ, ಬದುಕು ಸಾರ್ಥಕಪಡಿಸಿ, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರು ದಾಖಲಿಸಿ ಹೊರಟು ಹೋಗಿದ್ದಾರೆ. ಸಣ್ಣವರಾಗುವುದು ಬದುಕಿರುವ ನೀವು. ನೀವು ಹೆಸರಾಗುವುದು, ಇತಿಹಾಸದ ಪುಟಗಳಲ್ಲಿ ಉಳಿಯುವುದು ನಿಮ್ಮ ಸಣ್ಣತನಕ್ಕಾಗಿ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....