Homeಮುಖಪುಟನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

ನೆಹರೂ ವಿಡಿಯೊ ಮರೆಮಾಚಿ ಕಾರ್ಯಕ್ರಮ ಪ್ರಸಾರ ಮಾಡಿದ ಆಜ್‌ತಖ್‌ ಸುದ್ದಿವಾಹಿನಿ!

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಹಿಂದಿ ಸುದ್ದಿವಾಹಿನಿ ‘ಆಜ್‌ತಖ್‌’ ರೂಪಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ನೆಹರೂ ವಿಡಿಯೊವನ್ನು ತಡೆಹಿಡಿದು (ಮುಚ್ಚಿಟ್ಟು) ಕಾರ್ಯಕ್ರಮ ಪ್ರಸಾರ ಮಾಡಿರುವುದು ಕಂಡುಬಂದಿದೆ.

“ಬಿಜೆಪಿ ನೆಹರೂ ಅವರಿಗೆ ಗೌರವವನ್ನು ಸಲ್ಲಿಸದಿರುವುದು ಏಕೆಂದು ಅರ್ಥ ಮಾಡಿಕೊಳ್ಳಬಹುದು. ಆದರೆ ಟಿ.ವಿ. ನ್ಯೂಸ್‌ ಚಾನೆಲ್‌ ಏಕೆ ಹೀಗೆ ಮಾಡುತ್ತಿವೆ?” ಎಂದು ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿದ್ದಾರೆ.

ಎರಡು ವಿಡಿಯೊ ತುಣುಕುಗಳನ್ನು ಹೋಲಿಕೆ ಮಾಡಿ ಅವರು ಮಾಡಿರುವ ಟ್ವೀಟ್ ಈಗ ಚರ್ಚೆಗೆ ಗ್ರಾಸವಾಗಿದೆ. ನೆಹರೂ ಅವರ ಕೊಡುಗೆಯನ್ನು ಬಿಜೆಪಿ ಮರೆಮಾಚುತ್ತಿರುವ ಹಿನ್ನೆಲೆಯಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಜನಾಕ್ರೋಶಕ್ಕೂ ಮೊದಲು ಹಾಗೂ ಆಕ್ರೋಶದ ನಂತರ ಆಜ್‌ತಖ್‌ ಪ್ರಸಾರ ಮಾಡಿರುವ ವಿಡಿಯೊವನ್ನು ಜುಬೈರ್‌ ಹೋಲಿಕೆ ಮಾಡಿದ್ದಾರೆ.

ಜನಾಕ್ರೋಶಕ್ಕೂ ಮೊದಲು ಪ್ರಸಾರ ಮಾಡಿರುವ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ನೆಹರೂ ಅವರಿದ್ದಾರೋ ಆ ವಿಡಿಯೊಗಳನ್ನೆಲ್ಲ ಹೈಡ್ ಮಾಡಿ ಪ್ರಸಾರ ಮಾಡಲಾಗಿದೆ. ಜನಾಕ್ರೋಶ ಬಂದ ಬಳಿಕ ಪ್ರಸಾರ ಮಾಡಲಾದ ವಿಡಿಯೊದಲ್ಲಿ ಹೈಡ್ ಮಾಡದೆ ವಿಡಿಯೊ ಹಾಕಲಾಗಿದೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯ ನೀಡದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ರಿಟಿಷರಲ್ಲಿ ಹಲವು ಭಾರಿ ಕ್ಷಮಾಪಣೆಗಳನ್ನು ಕೇಳಿದ ವಿ.ಡಿ.ಸಾವರ್ಕರ್‌ ಫೋಟೋ ಜೊತೆಗೆ ವಿವರಣೆಗಳನ್ನು ನೀಡಲಾಗಿದೆ. ಆದರೆ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಭಾರಿ ಜೈಲು ಸೇರಿದ್ದ ನೆಹರೂ ಅವರ ಕುರಿತು ಯಾವುದೇ ವಿವರಣೆಗಳು ಇಲ್ಲವಾಗಿವೆ.

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಕಿರುಪರಿಚಯವನ್ನು ನೀಡಲಾಗಿದೆ. ಹಾಗೆಯೇ ಸಾವರ್ಕರ್‌ ಫೋಟೋವನ್ನು ಹಾಕಿ, ‘ಕ್ರಾಂತಿಕಾರಿ’ ಎಂಬ ಬಿರುದನ್ನು ನೀಡಿ ಪರಿಚಯ ನೀಡಲಾಗಿದೆ.

ರೇಖಾ ಚಿತ್ರದ ರೀತಿಯಲ್ಲಿ ರಾಷ್ಟ್ರನಾಯಕರ ಚಿತ್ರಗಳನ್ನು ಬಳಸಲಾಗಿದ್ದು, ಅಲ್ಲಿ ಮಾತ್ರ ನೆಹರೂ ಅವರ ಚಿತ್ರವನ್ನು ಕಿರುದಾಗಿ ಬಳಸಲಾಗಿದೆ. ಸರ್ಕಾರದ ಸಣ್ಣತನವನ್ನು ಗಮನಿಸಿರುವ ನಾಡಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಹಿರಿಯ ಪತ್ರಕರ್ತ ಸನತ್‌ಕುಮಾರ್‌ ಬೆಳಗಲಿಯವರು ಪ್ರತಿಕ್ರಿಯಿಸಿ, “ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಗಳಿಗೆ ನೀಡಿದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪಟ ಇಲ್ಲ. ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ಅಪಾರ ತ್ಯಾಗ ಮಾಡಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಪಟ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು” ಎಂದಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಳ ಅವರು, “ನೆಹರೂವನ್ನು ಕಡೆಗಣಿಸುವುದರಿಂದ, ಅವಮಾನಿಸುವುದರಿಂದ ನೆಹರೂಗೆ ಏನೂ ಆಗುವುದಿಲ್ಲ. ಅವರಿಗೆ ಅದು ತಿಳಿಯುವುದೂ ಇಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿ, ಬದುಕು ಸಾರ್ಥಕಪಡಿಸಿ, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರು ದಾಖಲಿಸಿ ಹೊರಟು ಹೋಗಿದ್ದಾರೆ. ಸಣ್ಣವರಾಗುವುದು ಬದುಕಿರುವ ನೀವು. ನೀವು ಹೆಸರಾಗುವುದು, ಇತಿಹಾಸದ ಪುಟಗಳಲ್ಲಿ ಉಳಿಯುವುದು ನಿಮ್ಮ ಸಣ್ಣತನಕ್ಕಾಗಿ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...