Homeಕರ್ನಾಟಕಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಯೋಜನೆಯ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ  Aaj Tak ವಿಡಿಯೋವನ್ನು ಡಿಲಿಟ್‌ ಮಾಡಿರುವುದು ಕಂಡು ಬಂದಿದೆ.

ಕರ್ನಾಟಕ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಬಗ್ಗೆ ಬೆಂಗಳೂರಿನಲ್ಲಿ ಕೆಎಂಡಿಸಿ ಅಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ.

ಎಫ್ಐಆರ್ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆಯೇ ಆಜ್‌ ತಕ್ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಯೂಟ್ಯೂಬ್‌ ಹಾಗೂ ಸೋಷಿಯಲ್ ಮೀಡಿಯಾದಿಂದ ವಿಡಿಯೋ ‘ಡಿಲೀಟ್’ ಮಾಡಿದ್ದಾರೆ.

ಎಫ್ಐಆರ್ ದಾಖಲಾಗುತ್ತಿದ್ದಂತೆ ವಿಡಿಯೋ ‘ಡಿಲೀಟ್’ ಮಾಡಿರುವ ಹಿನ್ನೆಲೆಯಲ್ಲಿ ‘ಆಜ್‌ ತಕ್’ ಮತ್ತು ಸುಧೀರ್ ಚೌಧರಿಯನ್ನು ಪ್ರಶ್ನಿಸಿರುವ ನೆಟ್ಟಿಗರು, ನೀವು ತಪ್ಪು ಮಾಡಿಲ್ಲ ಎಂದಾದರೆ, ಯೂಟ್ಯೂಬ್‌ ಮತ್ತು ಟ್ವಿಟ್ಟರ್‌ನಿಂದ ವಿಡಿಯೋ ಯಾಕೆ ಡಿಲೀಟ್ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

Aaj Tak ಪತ್ರಕರ್ತ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದಾರೆ. Aaj Tak ವರದಿಯಲ್ಲಿ ಕರ್ನಾಟಕದಲ್ಲಿ ಅಲ್ಪಸಂಖ್ಯಾತರಿಗೆ ಸಬ್ಸಿಡಿ ನೀಡಿದ್ದು, ಹಿಂದೂಗಳಿಗೆ ಇಲ್ಲ ಎಂದು ವರದಿಗೆ ತಲೆ ಬರಹವನ್ನು ನೀಡಿತ್ತು.

ವರದಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಬಡ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಮಾತ್ರ ಆಟೋರಿಕ್ಷಾ ಅಥವಾ ಟ್ಯಾಕ್ಸಿ ಖರೀದಿಯಲ್ಲಿ 50% ಸಬ್ಸಿಡಿ ನೀಡುತ್ತದೆ. ಕರ್ನಾಟಕದಲ್ಲಿ ಯಾರಾದರೂ ಅಲ್ಪಸಂಖ್ಯಾತ ಸಮುದಾಯದವರಲ್ಲದ ಬಹುಸಂಖ್ಯಾತ ಸಮಾಜದಲ್ಲಿ ಜನ್ಮ ಪಡೆದರೆ ಅವರು ಎಷ್ಟೆ ಬಡವರಾಗಿದ್ದರೂ ಅವರಿಗೆ ಸಿಗುವುದಿಲ್ಲ. ಈ ಯೋಜನೆ ಹಿಂದೂಗಳಿಗೆ ಇಲ್ಲ. ಅವರೆಷ್ಟೇ ಬಡವರೇ ಆಗಿರಲಿ, ಅವರ ಬಳಿ ಹಣವೇ ಇಲ್ಲದಿರಲಿ,  ಅವರಿಗೆ ಸಬ್ಸಿಡಿ ಸಿಗುವುದಿಲ್ಲ. ಆದರೆ ಯೋಜನೆಯಲ್ಲಿ ಇತರ ಮುಸ್ಲಿಂ, ಬೌದ್ಧ ,ಜೈನ ಇತರ ಅಲ್ಪಸಂಖ್ಯಾತರಿಗೆ 50% ಸಬ್ಸಿಡಿ ನೀಡಲಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ಕಾರ್ಯಕ್ರಮದಿಂದ ಕರ್ನಾಟಕದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮಾತ್ರ ಪ್ರಯೋಜನವಾಗಿದೆ ಎಂದು ಅವರ ವರದಿ ಹೇಳಿದೆ. ಆದರೆ ಇದು ಸುಳ್ಳಾಗಿದೆ. ಈ ಕಾರ್ಯಕ್ರಮವು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸದಸ್ಯರಿಗೂ ಲಭ್ಯವಿದೆ ಎಂಬುವುದನ್ನು ಇಲಾಖೆಯ ವೆಬ್‌ಸೈಟ್ ನಲ್ಲಿ ತಿಳಿಸಲಾಗಿದೆ. ಕರ್ನಾಟಕ ಸ್ವಾವಲಂಬಿ ಸಾರಥಿ ಯೋಜನೆ 2023ರ ಪ್ರಕಾರ ಯೋಜನೆಯು ಅಲ್ಪಸಂಖ್ಯಾತರಿಗೆ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸದಸ್ಯರಿಗೆ 4 ಲಕ್ಷ ಸಬ್ಸಿಡಿ ಸಿಗಲಿದೆ.

ಸ್ವಾವಲಂಬಿ ಸಾರಥಿ ಯೋಜನೆಯನ್ನು ಕರ್ನಾಟಕ ಸರ್ಕಾರವು ರಾಜ್ಯದ ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ಪ್ರಾರಂಭಿಸಿದೆ. ರಾಜ್ಯದ ನಿರುದ್ಯೋಗಿ ಯುವಕರು ಈ ಕಾರ್ಯಕ್ರಮದಡಿಯಲ್ಲಿ ನಾಲ್ಕು ಚಕ್ರಗಳ ವಾಹನಗಳ ಖರೀದಿಗೆ 50% ರಿಂದ 75% ವರೆಗೆ ಸಹಾಯಧನವನ್ನು ನೀಡಲಿದೆ. ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ನೇರ ಠೇವಣಿ ಮೂಲಕ ಈ ಮೊತ್ತವನ್ನು ಪಡೆಯುತ್ತಾರೆ. ಸ್ವಾವಲಂಬಿ ಸಾರಥಿ ಯೋಜನೆಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

ಇದನ್ನು ಓದಿ: ತಪ್ಪು ಮಾಹಿತಿ ಹರಡಿದ ಆರೋಪ: Aaj Takನ ಸುಧೀರ್ ಚೌಧರಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...