Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಆಪ್‌ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

“ಬಿಜೆಪಿ ಸಹವಾಸ, ಜನಸಾಮಾನ್ಯರಿಗೆ ಉಪವಾಸ.. ಕಾರು, ಬೈಕು ಮ್ಯೂಸಿಯಂನಲ್ಲಿ, ಸೈಕಲ್‌ ಬಂಡಿ ರೋಡಿನಲ್ಲಿ, ಬಿಜೆಪಿ ನಿನ್ನ ಕಾಲದಲ್ಲಿ” ಎಂಬಂತಹ ಬ್ಯಾನರ್‌ ಫ್ಲೆಕಾರ್ಡುಗಳನ್ನಿಡಿದು, ಸೈಕಲ್‌ ಮತ್ತು ಕುದುರೆ ಬಂಡಿ ಮೇಲೆ ಸವಾರಿ ಮಾಡುವ ಮೂಲಕ ಆಪ್‌ ಕಾರ್ಯಕರ್ತರು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಆನಂದ್ ರಾವ್ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕ್ರಮವಾಗಿ ₹ 1.59 ಹಾಗೂ 1.60 ಕ್ಕೆ ಏರಿಸಿರುವುದನ್ನು ಖಂಡಿಸಿ ಧಿಕ್ಕಾರ ಕೂಗಿದರು.

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಕಾರ್ಯಕರ್ತರು ಪ್ರಶ್ನಿಸಿದರು.


ಈ ಹಿಂದಿನ ಸಮ್ಮಿಶ್ರ ಸರ್ಕಾರ ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕೇವಲ 10 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಆಕಾಶ ಭೂಮಿ ಒಂದಾಗುವಂತೆ ಕೂಗಾಡಿದ್ದ ಇದೇ ಬಿಜೆಪಿ ಮಂದಿ ಇಂದು ಬಾಯಿಗೆ ಕಡುಬು ತುರುಕಿ ಕೊಂಡಿರುವುದನ್ನು ನೋಡಿದರೆ, ‘ತಾನು ಕಳ್ಳ ಪರರನ್ನು ನಂಬ’ ಎನ್ನುವ ಸ್ಥಿತಿಯನ್ನು ಬಿಜೆಪಿಯವರು ತಲುಪಿದ್ದಾರೆ ಎನ್ನಬಹುದು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ಕಿಡಿಕಾರಿದರು.

15 ನೇ ಹಣಕಾಸು ಆಯೋಗದ ಅನುದಾನ ಹಾಗೂ ಕೇಂದ್ರದ ತೆರಿಗೆಯಲ್ಲಿ ರಾಜ್ಯಕ್ಕೆ ಬರುವ ಪಾಲು ಕಡಿತ ಆಗಿದೆ. ಜಿಎಸ್‌ಟಿ ಪರಿಹಾರವೂ ಸಹ ಕಡಿಮೆ ಆಗಿದ್ದು ಇದರಿಂದ ರಾಜ್ಯಕ್ಕೆ ಸುಮಾರು ₹ 15 ಸಾವಿರ ಕೋಟಿ ನಷ್ಟವಾಗಿದೆ. ಇದರ ಪರಿಣಾಮ, ಸಾರ್ವಜನಿಕರು ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಮೇಲೆ ಸಾಗಾಣೆ ವೆಚ್ಚ ಹೆಚ್ಚಾಗಿ, ಇವುಗಳ ಬೆಲೆ ಗಗನಕ್ಕೆ ಏರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿಯೂ ಬಿಜೆಪಿ, ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯವನ್ನು ‘ಸ್ವರ್ಗ’ ಮಾಡಲಾಗುವುದು, ‘ಸಿಂಗಾಪುರ’ ಮಾಡಲಾಗುವುದು ಎನ್ನುತ್ತಿದ್ದ ಜನ ಪ್ರತಿನಿಧಿಗಳ ಗಾಢ ನಿದ್ದೆಯಿಂದ ಇನ್ನೂ ಎಚ್ಚರಗೊಂಡಂತೆ ಕಾಣುತ್ತಿಲ್ಲ ಎಂದು ಟೀಕಿಸಿದರು.

ನೀ ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎನ್ನುವ ಒಪ್ಪಂದಕ್ಕೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಬಂದಂತೆ ಕಾಣುತ್ತಿದೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದರೂ ಇದುವರೆಗೂ ಸಹ ಈ ಎರಡೂ ಪಕ್ಷಗಳು ದಿವ್ಯ ಮೌನವಹಿಸಿರುವುದು ನೋಡಿದರೆ ಯಾರಿಗೂ ಜನರ ಹಿತಾಸಕ್ತಿ ಇಲ್ಲವೇ ಇಲ್ಲ ಎನ್ನಬಹುದು ಎಂದರು.

ಪ್ರಪಂಚದ 4ನೇ ಅತೀದೊಡ್ಡ ಗುಜುರಾತಿನ ತೈಲ ಘಟಕವನ್ನು ಸಂಪೂರ್ಣವಾಗಿ ರಿಲಯನ್ಸ್ ಕಂಪೆನಿಗೆ ಸಬ್ಸಿಡಿ ಆಧಾರದಲ್ಲಿ ನಡೆಸಲು ಅನುಮತಿ ನೀಡಿರುವ ಮೋದಿ ಸರ್ಕಾರ, ದೇಶದ ಬಡ ಜನರ ಬೆನ್ನಿನ ಮೇಲೆ ಬಾರ ಹಾಕಿ, ಹಾಕಿ ಗೂನಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ತೆರಿಗೆ ಹೆಚ್ಚಳದ ಮೂಲಕ ತೈಲ ಕಂಪನಿಗಳ ಒಡೆಯರ ಜೇಬು ತುಂಬಿಸುತ್ತಿರುವ ಈ ಕ್ರಮವನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಬಡ ಮತ್ತು ಮಧ್ಯಮ ವರ್ಗದ ಜನರ ಬಗ್ಗೆ ನೈಜ ಕಾಳಜಿ ಇದ್ದರೆ ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳು ಈ ಬಜೆಟ್‌ಗೆ ಅನುಮೋದನೆ ನೀಡಬಾರದು ಎಂದು ಅವರು ಆಗ್ರಹಿಸಿದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಪಕ್ಷದ ಸ್ಥಳಿಯ ಮುಖಂಡರಾದ ಸೀತಾರಂ ಗುಂಡಪ್ಪ, ಆಯೂಬ್‌ ಖಾನ್, ಜಗದೀಶ್ ಚಂದ್ರ, ಲಕ್ಷ್ಮಿಕಾಂತ್ ರಾವ್, ಶರತ್ ಖಾದ್ರಿ, ಚನ್ನಪ್ಪ ಗೌಡ, ರವಿಚಂದ್ತ, ಫೀರೋಜ್ ಖಾನ್ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...