Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಆಪ್‌ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

“ಬಿಜೆಪಿ ಸಹವಾಸ, ಜನಸಾಮಾನ್ಯರಿಗೆ ಉಪವಾಸ.. ಕಾರು, ಬೈಕು ಮ್ಯೂಸಿಯಂನಲ್ಲಿ, ಸೈಕಲ್‌ ಬಂಡಿ ರೋಡಿನಲ್ಲಿ, ಬಿಜೆಪಿ ನಿನ್ನ ಕಾಲದಲ್ಲಿ” ಎಂಬಂತಹ ಬ್ಯಾನರ್‌ ಫ್ಲೆಕಾರ್ಡುಗಳನ್ನಿಡಿದು, ಸೈಕಲ್‌ ಮತ್ತು ಕುದುರೆ ಬಂಡಿ ಮೇಲೆ ಸವಾರಿ ಮಾಡುವ ಮೂಲಕ ಆಪ್‌ ಕಾರ್ಯಕರ್ತರು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಆನಂದ್ ರಾವ್ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕ್ರಮವಾಗಿ ₹ 1.59 ಹಾಗೂ 1.60 ಕ್ಕೆ ಏರಿಸಿರುವುದನ್ನು ಖಂಡಿಸಿ ಧಿಕ್ಕಾರ ಕೂಗಿದರು.

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಕಾರ್ಯಕರ್ತರು ಪ್ರಶ್ನಿಸಿದರು.


ಈ ಹಿಂದಿನ ಸಮ್ಮಿಶ್ರ ಸರ್ಕಾರ ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕೇವಲ 10 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಆಕಾಶ ಭೂಮಿ ಒಂದಾಗುವಂತೆ ಕೂಗಾಡಿದ್ದ ಇದೇ ಬಿಜೆಪಿ ಮಂದಿ ಇಂದು ಬಾಯಿಗೆ ಕಡುಬು ತುರುಕಿ ಕೊಂಡಿರುವುದನ್ನು ನೋಡಿದರೆ, ‘ತಾನು ಕಳ್ಳ ಪರರನ್ನು ನಂಬ’ ಎನ್ನುವ ಸ್ಥಿತಿಯನ್ನು ಬಿಜೆಪಿಯವರು ತಲುಪಿದ್ದಾರೆ ಎನ್ನಬಹುದು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ಕಿಡಿಕಾರಿದರು.

15 ನೇ ಹಣಕಾಸು ಆಯೋಗದ ಅನುದಾನ ಹಾಗೂ ಕೇಂದ್ರದ ತೆರಿಗೆಯಲ್ಲಿ ರಾಜ್ಯಕ್ಕೆ ಬರುವ ಪಾಲು ಕಡಿತ ಆಗಿದೆ. ಜಿಎಸ್‌ಟಿ ಪರಿಹಾರವೂ ಸಹ ಕಡಿಮೆ ಆಗಿದ್ದು ಇದರಿಂದ ರಾಜ್ಯಕ್ಕೆ ಸುಮಾರು ₹ 15 ಸಾವಿರ ಕೋಟಿ ನಷ್ಟವಾಗಿದೆ. ಇದರ ಪರಿಣಾಮ, ಸಾರ್ವಜನಿಕರು ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಮೇಲೆ ಸಾಗಾಣೆ ವೆಚ್ಚ ಹೆಚ್ಚಾಗಿ, ಇವುಗಳ ಬೆಲೆ ಗಗನಕ್ಕೆ ಏರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿಯೂ ಬಿಜೆಪಿ, ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯವನ್ನು ‘ಸ್ವರ್ಗ’ ಮಾಡಲಾಗುವುದು, ‘ಸಿಂಗಾಪುರ’ ಮಾಡಲಾಗುವುದು ಎನ್ನುತ್ತಿದ್ದ ಜನ ಪ್ರತಿನಿಧಿಗಳ ಗಾಢ ನಿದ್ದೆಯಿಂದ ಇನ್ನೂ ಎಚ್ಚರಗೊಂಡಂತೆ ಕಾಣುತ್ತಿಲ್ಲ ಎಂದು ಟೀಕಿಸಿದರು.

ನೀ ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎನ್ನುವ ಒಪ್ಪಂದಕ್ಕೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಬಂದಂತೆ ಕಾಣುತ್ತಿದೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದರೂ ಇದುವರೆಗೂ ಸಹ ಈ ಎರಡೂ ಪಕ್ಷಗಳು ದಿವ್ಯ ಮೌನವಹಿಸಿರುವುದು ನೋಡಿದರೆ ಯಾರಿಗೂ ಜನರ ಹಿತಾಸಕ್ತಿ ಇಲ್ಲವೇ ಇಲ್ಲ ಎನ್ನಬಹುದು ಎಂದರು.

ಪ್ರಪಂಚದ 4ನೇ ಅತೀದೊಡ್ಡ ಗುಜುರಾತಿನ ತೈಲ ಘಟಕವನ್ನು ಸಂಪೂರ್ಣವಾಗಿ ರಿಲಯನ್ಸ್ ಕಂಪೆನಿಗೆ ಸಬ್ಸಿಡಿ ಆಧಾರದಲ್ಲಿ ನಡೆಸಲು ಅನುಮತಿ ನೀಡಿರುವ ಮೋದಿ ಸರ್ಕಾರ, ದೇಶದ ಬಡ ಜನರ ಬೆನ್ನಿನ ಮೇಲೆ ಬಾರ ಹಾಕಿ, ಹಾಕಿ ಗೂನಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ತೆರಿಗೆ ಹೆಚ್ಚಳದ ಮೂಲಕ ತೈಲ ಕಂಪನಿಗಳ ಒಡೆಯರ ಜೇಬು ತುಂಬಿಸುತ್ತಿರುವ ಈ ಕ್ರಮವನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಬಡ ಮತ್ತು ಮಧ್ಯಮ ವರ್ಗದ ಜನರ ಬಗ್ಗೆ ನೈಜ ಕಾಳಜಿ ಇದ್ದರೆ ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳು ಈ ಬಜೆಟ್‌ಗೆ ಅನುಮೋದನೆ ನೀಡಬಾರದು ಎಂದು ಅವರು ಆಗ್ರಹಿಸಿದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಪಕ್ಷದ ಸ್ಥಳಿಯ ಮುಖಂಡರಾದ ಸೀತಾರಂ ಗುಂಡಪ್ಪ, ಆಯೂಬ್‌ ಖಾನ್, ಜಗದೀಶ್ ಚಂದ್ರ, ಲಕ್ಷ್ಮಿಕಾಂತ್ ರಾವ್, ಶರತ್ ಖಾದ್ರಿ, ಚನ್ನಪ್ಪ ಗೌಡ, ರವಿಚಂದ್ತ, ಫೀರೋಜ್ ಖಾನ್ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...