Homeಕರ್ನಾಟಕಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

- Advertisement -
- Advertisement -

ಕಳ್ಳರು ಜನರ ಗಮನವನ್ನು ಬೇರೆಡೆಗೆ ಸೆಳೆದು ಜೇಬಿಗೆ ಕತ್ತರಿ ಹಾಕುವಂತೆ ಬಿಜೆಪಿಯವರು ಜನರ ಗಮನವನ್ನು ದೇವಸ್ಥಾನ, ಪಾಕಿಸ್ತಾನದತ್ತ ಜನರ ಗಮನ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ. ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಎಎಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಿಲಿಂಡರ್‌ನ ಅಣಕು ಶವಯಾತ್ರೆ ನಡೆಸಲಾಗಿದೆ.

“ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಶೇ. 50 ರಷ್ಟು ಸಬ್ಸಿಡಿಯೊಂದಿಗೆ ಕೇವಲ 400 ರೂಪಾಯಿಗೆ ಅಡುಗೆ ಅನಿಲ ಸಿಲಿಂಡರ್‌ ಸಿಗುತ್ತಿತ್ತು. ಜನರು ಖರೀದಿಸುವಾಗಲೇ ಸಬ್ಸಿಡಿ ಮೊತ್ತವನ್ನು ಕಳೆದು ಮಾರಾಟ ಮಾಡಿದರೆ ಸಬ್ಸಿಡಿ ಕಡಿತಗೊಳಿಸುವುದು ಜನರ ಗಮನಕ್ಕೆ ಬರುತ್ತದೆ ಎಂದು ಯೋಚಿಸಿ ಮೋದಿ ಸರ್ಕಾರ, ಬ್ಯಾಂಕ್‌ ಖಾತೆಗೆ ಸಬ್ಸಿಡಿ ಮೊತ್ತವನ್ನು ಹಾಕಲು ಆರಂಭಿಸಿತು. ನಂತರ ಹಂತಹಂತವಾಗಿ ಸಬ್ಸಿಡಿ ಮೊತ್ತವನ್ನು 400 ರಿಂದ ಸೊನ್ನೆಗೆ ಇಳಿಸಿತು. ಈಗ ಪದೇ ಪದೇ ಸಿಲಿಂಡರ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆಯಲಾಗುತ್ತಿದೆ” ಎಂದು ಎಎಪಿ ನಾಯಕ ಜಗದೀಶ್‌ ವಿ. ಸದಂ ಬೇಸರ ವ್ಯಕ್ತಪಡಿಸಿದರು.

“ಬಡ ಹಾಗೂ ಮಧ್ಯಮ ವರ್ಗದವರು ಸಾಯುವಂತೆ ಮಾಡಿ, ಭಾರತದಲ್ಲಿ ಶ್ರೀಮಂತರನ್ನಷ್ಟೇ ಉಳಿಸಿಕೊಂಡು ಭಾರತವನ್ನು ವಿಶ್ವಗುರು ಮಾಡಲು ಬಿಜೆಪಿ ನಿರ್ಧರಿಸಿದಂತಿದೆ. ಆದ್ದರಿಂದಲೇ ಬೆಲೆ ಏರಿಕೆ ಮಾಡಿ ಸಾಮಾನ್ಯ ಜನರ ಬದುಕನ್ನು ಹೈರಾಣಾಗಿಸುತ್ತಿದೆ. ಕಳೆದ ಒಂದು ವರ್ಷದಲ್ಲಿ ಸಿಲಿಂಡರ್‌ ದರವನ್ನು ಬರೋಬ್ಬರಿ 265 ರೂಪಾಯಿ ಏರಿಕೆ ಮಾಡಲಾಗಿದೆ” ಎಂದರು.

ಕೋವಿಡ್‌, ಲಾಕ್‌ಡೌನ್‌ನಿಂದಾಗಿ ಹಲವು ತಿಂಗಳುಗಳ ಕಾಲ ದುಡಿಮೆಯಿಲ್ಲದೇ ಜನರು ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅಗತ್ಯ ವಸ್ತುಗಳಿಗೆ ಸಬ್ಸಿಡಿ ನೀಡಿ ಅವರಿಗೆ ನೆರವಾಗಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ ಈಗ ಬೆಲೆ ಏರಿಕೆ ಮಾಡಿ ಅವರ ಜೀವನದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಜಗದೀಶ್‌ ವಿ. ಸದಂ ಹೇಳಿದರು.

ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

’ಗ್ರಾಮೀಣ ಭಾಗದ ಬಡ ಜನರು ಕಟ್ಟಿಗೆ ಒಲೆ, ಇದ್ದಿಲು ಒಲೆ ಬಳಸಿ ಆರಾಮಾಗಿ ಜೀವನ ಸಾಗಿಸುತ್ತಿದ್ದರು. ಮೋದಿ ಸರ್ಕಾರ ಉಜ್ವಲ ಯೋಜನೆ ಹೆಸರಿನಲ್ಲಿ ಉಚಿತ ಗ್ಯಾಸ್‌ ಸಂಪರ್ಕ ನೀಡಿತು. ಸರ್ಕಾರವನ್ನು ನಂಬಿ ಅವರು ಕಟ್ಟಿಗೆ, ಇದ್ದಿಲು ಒಲೆಗಳಿಗೆ ವಿದಾಯ ಹೇಳಿದರು. ಈಗ ಗ್ಯಾಸ್‌ ಬೆಲೆಯನ್ನು ವಿಪರೀತ ಏರಿಕೆ ಮಾಡಿದರೆ ಅವರ ಗತಿ ಏನು?’ ಎಂದು ಪ್ರಶ್ನಿಸಿದ್ದಾರೆ.

“ಬೇರೆ ಪಕ್ಷಗಳ ಸರ್ಕಾರವಿದ್ದಾಗ ಎಲ್‌ಪಿಜಿ ಸಿಲಿಂಡರ್‌ ಬೆಲೆ ಒಂದು ರೂಪಾಯಿ ಏರಿಕೆಯಾದರೂ ಬಿಜೆಪಿ ನಾಯಕರು ಬೀದಿಗಿಳಿದು ಬಾಯಿ ಬಡಿದುಕೊಂಡು ಪ್ರತಿಭಟನೆ ಮಾಡುತ್ತಿದ್ದರು. ಈಗ ನೂರಾರು ರೂಪಾಯಿ ಏರಿಕೆಯಾಗಿದ್ದರೂ ಅವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಅಧಿಕಾರದಲ್ಲಿ ಇಲ್ಲದಿದ್ದಾಗ ಒಂದು ನಿಲುವು, ಅಧಿಕಾರ ಸಿಕ್ಕಾಗ ಮತ್ತೊಂದು ನಿಲುವು ತಳೆಯುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು’ ಎಂದು ಜಗದೀಶ್‌ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...