Homeಮುಖಪುಟಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳು, ಬಿಜೆಪಿಗರಿಗೆ ಏಕಿಲ್ಲ?

- Advertisement -
- Advertisement -

ರಾಜ್ಯದ ಸಾವಿರಾರು ಜನರು ಕೋವಿಡ್‌ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೇ ಅವಿತು ಕುಳಿತು ಈಗ ದಿಢೀರ್‌ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಬದಲು ಹೆಣಾಶೀರ್ವಾದ ಯಾತ್ರೆ ಮಾಡುವುದು ಸೂಕ್ತ ಎಂದು ಆಪ್ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೋವಿಡ್‌ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್‌, ಆಕ್ಸಿಜನ್‌ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತು. ಪರಿಣಾಮವಾಗಿ, ಸಮೀಕ್ಷೆ ನಡೆಸಿದಾಗ ಹಾಗೂ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಜನಾಶೀರ್ವಾದ ಹೆಸರಿನಲ್ಲಿ ಸುಳ್ಳುಗಳನ್ನು ಪ್ರಚಾರ ಮಾಡುವ ಬದಲು ಹೆಣಾಶೀರ್ವಾದ ಹೆಸರಿನಲ್ಲಿ ಸ್ಮಶಾನಕ್ಕೆ ಹೋಗಿ, ನಿಜಕ್ಕೂ ಕೋವಿಡ್‌ನಿಂದ ಮೃತಪಟ್ಟ ಎಷ್ಟು ಶವಗಳು ಅಲ್ಲಿಗೆ ಬಂದಿವೆ ಎಂದು ವಿಚಾರಿಸಲಿ” ಎಂದು ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್‌, ಡೀಸೆಲ್‌ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‌ಪಿಜಿ) ಸಿಲೆಂಡರ್‌ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‌ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ದೇಶಪ್ರೇಮ, ಹಿಂದುತ್ವ ಕೇವಲ ಭಾಷಣಕ್ಕೆ ಹಾಗೂ ಗಲಭೆ ಸೃಷ್ಟಿಸುವುದಕ್ಕೆ ಸೀಮಿತ. “ಹಿಂದೂ ರಾಷ್ಟ್ರ” ಮಾಡುತ್ತೇವೆ ಎಂದು ಹೇಳಿದವರು “ಹಿಂದುಳಿದ ರಾಷ್ಟ್ರ” ಮಾಡುತ್ತಿದ್ದಾರೆ. ಕೃಷಿ ಕಾಯಿದೆ, ಸಿಎಎ, ಎನ್‌ಆರ್‌ಸಿ ಮುಂತಾದವುಗಳಿಗೆ ತಿದ್ದುಪಡಿ ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದೇ ಕೇಂದ್ರ ಸರ್ಕಾರದ ಸಾಧನೆ ಎಂದು ಜಗದೀಶ್ ಸದಂ ವ್ಯಂಗ್ಯವಾಡಿದ್ದಾರೆ.

ಆಪ್ ಕಚೇರಿ ಕಾರ್ಯದರ್ಶಿ ವೀಣಾ ಸೆರ್ರಾವ್‌ರವರು ಮಾತನಾಡಿ, “ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳನ್ನು ಜಾರಿಗೆ ತಂದು, ಸಚಿವರು ಮಾತ್ರ ಸ್ವೇಚ್ಛಾಚಾರದಿಂದ ಸಾವಿರಾರು ಬೆಂಬಲಿಗರನ್ನು ಸೇರಿಸುವುದು ಎಷ್ಟು ಸರಿ? ರಾಜ್ಯದಲ್ಲಿ ಬಿಜೆಪಿ ಸಚಿವರಿಗೇ ಒಂದು ಕಾನೂನು, ಸಾಮಾನ್ಯ ಜನರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದರೂ ಸಚಿವರುಗಳು ತಮ್ಮ ನಡೆಯನ್ನು ಬದಲಿಸಿಕೊಳ್ಳದಿರುವುದು ದುರಂತ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರು ಸಂಭ್ರಮಿಸಿದಂತೆ ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ಅಭಿಮಾನಿಗಳು ಬಂದೂಕಿನಿಂದ ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ಕೂಡ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಖಂಡಿಸಿದೆ. ರಾಜ್ಯದಲ್ಲಿ ಕರೋನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ? ಇದು ಕರೋನಾಶಿರ್ವಾದಯಾತ್ರೆ ಎಂದು ಕಿಡಿಕಾರಿದೆ.


ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...