Homeಮುಖಪುಟಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳು, ಬಿಜೆಪಿಗರಿಗೆ ಏಕಿಲ್ಲ?

- Advertisement -
- Advertisement -

ರಾಜ್ಯದ ಸಾವಿರಾರು ಜನರು ಕೋವಿಡ್‌ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೇ ಅವಿತು ಕುಳಿತು ಈಗ ದಿಢೀರ್‌ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಬದಲು ಹೆಣಾಶೀರ್ವಾದ ಯಾತ್ರೆ ಮಾಡುವುದು ಸೂಕ್ತ ಎಂದು ಆಪ್ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೋವಿಡ್‌ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್‌, ಆಕ್ಸಿಜನ್‌ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತು. ಪರಿಣಾಮವಾಗಿ, ಸಮೀಕ್ಷೆ ನಡೆಸಿದಾಗ ಹಾಗೂ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಜನಾಶೀರ್ವಾದ ಹೆಸರಿನಲ್ಲಿ ಸುಳ್ಳುಗಳನ್ನು ಪ್ರಚಾರ ಮಾಡುವ ಬದಲು ಹೆಣಾಶೀರ್ವಾದ ಹೆಸರಿನಲ್ಲಿ ಸ್ಮಶಾನಕ್ಕೆ ಹೋಗಿ, ನಿಜಕ್ಕೂ ಕೋವಿಡ್‌ನಿಂದ ಮೃತಪಟ್ಟ ಎಷ್ಟು ಶವಗಳು ಅಲ್ಲಿಗೆ ಬಂದಿವೆ ಎಂದು ವಿಚಾರಿಸಲಿ” ಎಂದು ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್‌, ಡೀಸೆಲ್‌ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‌ಪಿಜಿ) ಸಿಲೆಂಡರ್‌ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‌ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ದೇಶಪ್ರೇಮ, ಹಿಂದುತ್ವ ಕೇವಲ ಭಾಷಣಕ್ಕೆ ಹಾಗೂ ಗಲಭೆ ಸೃಷ್ಟಿಸುವುದಕ್ಕೆ ಸೀಮಿತ. “ಹಿಂದೂ ರಾಷ್ಟ್ರ” ಮಾಡುತ್ತೇವೆ ಎಂದು ಹೇಳಿದವರು “ಹಿಂದುಳಿದ ರಾಷ್ಟ್ರ” ಮಾಡುತ್ತಿದ್ದಾರೆ. ಕೃಷಿ ಕಾಯಿದೆ, ಸಿಎಎ, ಎನ್‌ಆರ್‌ಸಿ ಮುಂತಾದವುಗಳಿಗೆ ತಿದ್ದುಪಡಿ ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದೇ ಕೇಂದ್ರ ಸರ್ಕಾರದ ಸಾಧನೆ ಎಂದು ಜಗದೀಶ್ ಸದಂ ವ್ಯಂಗ್ಯವಾಡಿದ್ದಾರೆ.

ಆಪ್ ಕಚೇರಿ ಕಾರ್ಯದರ್ಶಿ ವೀಣಾ ಸೆರ್ರಾವ್‌ರವರು ಮಾತನಾಡಿ, “ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳನ್ನು ಜಾರಿಗೆ ತಂದು, ಸಚಿವರು ಮಾತ್ರ ಸ್ವೇಚ್ಛಾಚಾರದಿಂದ ಸಾವಿರಾರು ಬೆಂಬಲಿಗರನ್ನು ಸೇರಿಸುವುದು ಎಷ್ಟು ಸರಿ? ರಾಜ್ಯದಲ್ಲಿ ಬಿಜೆಪಿ ಸಚಿವರಿಗೇ ಒಂದು ಕಾನೂನು, ಸಾಮಾನ್ಯ ಜನರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದರೂ ಸಚಿವರುಗಳು ತಮ್ಮ ನಡೆಯನ್ನು ಬದಲಿಸಿಕೊಳ್ಳದಿರುವುದು ದುರಂತ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರು ಸಂಭ್ರಮಿಸಿದಂತೆ ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ಅಭಿಮಾನಿಗಳು ಬಂದೂಕಿನಿಂದ ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ಕೂಡ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಖಂಡಿಸಿದೆ. ರಾಜ್ಯದಲ್ಲಿ ಕರೋನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ? ಇದು ಕರೋನಾಶಿರ್ವಾದಯಾತ್ರೆ ಎಂದು ಕಿಡಿಕಾರಿದೆ.


ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...