Homeಮುಖಪುಟಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳು, ಬಿಜೆಪಿಗರಿಗೆ ಏಕಿಲ್ಲ?

- Advertisement -
- Advertisement -

ರಾಜ್ಯದ ಸಾವಿರಾರು ಜನರು ಕೋವಿಡ್‌ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೇ ಅವಿತು ಕುಳಿತು ಈಗ ದಿಢೀರ್‌ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಬದಲು ಹೆಣಾಶೀರ್ವಾದ ಯಾತ್ರೆ ಮಾಡುವುದು ಸೂಕ್ತ ಎಂದು ಆಪ್ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೋವಿಡ್‌ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್‌, ಆಕ್ಸಿಜನ್‌ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತು. ಪರಿಣಾಮವಾಗಿ, ಸಮೀಕ್ಷೆ ನಡೆಸಿದಾಗ ಹಾಗೂ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಜನಾಶೀರ್ವಾದ ಹೆಸರಿನಲ್ಲಿ ಸುಳ್ಳುಗಳನ್ನು ಪ್ರಚಾರ ಮಾಡುವ ಬದಲು ಹೆಣಾಶೀರ್ವಾದ ಹೆಸರಿನಲ್ಲಿ ಸ್ಮಶಾನಕ್ಕೆ ಹೋಗಿ, ನಿಜಕ್ಕೂ ಕೋವಿಡ್‌ನಿಂದ ಮೃತಪಟ್ಟ ಎಷ್ಟು ಶವಗಳು ಅಲ್ಲಿಗೆ ಬಂದಿವೆ ಎಂದು ವಿಚಾರಿಸಲಿ” ಎಂದು ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್‌, ಡೀಸೆಲ್‌ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‌ಪಿಜಿ) ಸಿಲೆಂಡರ್‌ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‌ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ದೇಶಪ್ರೇಮ, ಹಿಂದುತ್ವ ಕೇವಲ ಭಾಷಣಕ್ಕೆ ಹಾಗೂ ಗಲಭೆ ಸೃಷ್ಟಿಸುವುದಕ್ಕೆ ಸೀಮಿತ. “ಹಿಂದೂ ರಾಷ್ಟ್ರ” ಮಾಡುತ್ತೇವೆ ಎಂದು ಹೇಳಿದವರು “ಹಿಂದುಳಿದ ರಾಷ್ಟ್ರ” ಮಾಡುತ್ತಿದ್ದಾರೆ. ಕೃಷಿ ಕಾಯಿದೆ, ಸಿಎಎ, ಎನ್‌ಆರ್‌ಸಿ ಮುಂತಾದವುಗಳಿಗೆ ತಿದ್ದುಪಡಿ ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದೇ ಕೇಂದ್ರ ಸರ್ಕಾರದ ಸಾಧನೆ ಎಂದು ಜಗದೀಶ್ ಸದಂ ವ್ಯಂಗ್ಯವಾಡಿದ್ದಾರೆ.

ಆಪ್ ಕಚೇರಿ ಕಾರ್ಯದರ್ಶಿ ವೀಣಾ ಸೆರ್ರಾವ್‌ರವರು ಮಾತನಾಡಿ, “ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳನ್ನು ಜಾರಿಗೆ ತಂದು, ಸಚಿವರು ಮಾತ್ರ ಸ್ವೇಚ್ಛಾಚಾರದಿಂದ ಸಾವಿರಾರು ಬೆಂಬಲಿಗರನ್ನು ಸೇರಿಸುವುದು ಎಷ್ಟು ಸರಿ? ರಾಜ್ಯದಲ್ಲಿ ಬಿಜೆಪಿ ಸಚಿವರಿಗೇ ಒಂದು ಕಾನೂನು, ಸಾಮಾನ್ಯ ಜನರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದರೂ ಸಚಿವರುಗಳು ತಮ್ಮ ನಡೆಯನ್ನು ಬದಲಿಸಿಕೊಳ್ಳದಿರುವುದು ದುರಂತ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರು ಸಂಭ್ರಮಿಸಿದಂತೆ ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ಅಭಿಮಾನಿಗಳು ಬಂದೂಕಿನಿಂದ ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ಕೂಡ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಖಂಡಿಸಿದೆ. ರಾಜ್ಯದಲ್ಲಿ ಕರೋನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ? ಇದು ಕರೋನಾಶಿರ್ವಾದಯಾತ್ರೆ ಎಂದು ಕಿಡಿಕಾರಿದೆ.


ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...