Homeಮುಖಪುಟಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳು, ಬಿಜೆಪಿಗರಿಗೆ ಏಕಿಲ್ಲ?

- Advertisement -
- Advertisement -

ರಾಜ್ಯದ ಸಾವಿರಾರು ಜನರು ಕೋವಿಡ್‌ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೇ ಅವಿತು ಕುಳಿತು ಈಗ ದಿಢೀರ್‌ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಬದಲು ಹೆಣಾಶೀರ್ವಾದ ಯಾತ್ರೆ ಮಾಡುವುದು ಸೂಕ್ತ ಎಂದು ಆಪ್ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೋವಿಡ್‌ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್‌, ಆಕ್ಸಿಜನ್‌ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತು. ಪರಿಣಾಮವಾಗಿ, ಸಮೀಕ್ಷೆ ನಡೆಸಿದಾಗ ಹಾಗೂ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಜನಾಶೀರ್ವಾದ ಹೆಸರಿನಲ್ಲಿ ಸುಳ್ಳುಗಳನ್ನು ಪ್ರಚಾರ ಮಾಡುವ ಬದಲು ಹೆಣಾಶೀರ್ವಾದ ಹೆಸರಿನಲ್ಲಿ ಸ್ಮಶಾನಕ್ಕೆ ಹೋಗಿ, ನಿಜಕ್ಕೂ ಕೋವಿಡ್‌ನಿಂದ ಮೃತಪಟ್ಟ ಎಷ್ಟು ಶವಗಳು ಅಲ್ಲಿಗೆ ಬಂದಿವೆ ಎಂದು ವಿಚಾರಿಸಲಿ” ಎಂದು ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್‌, ಡೀಸೆಲ್‌ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‌ಪಿಜಿ) ಸಿಲೆಂಡರ್‌ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‌ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ದೇಶಪ್ರೇಮ, ಹಿಂದುತ್ವ ಕೇವಲ ಭಾಷಣಕ್ಕೆ ಹಾಗೂ ಗಲಭೆ ಸೃಷ್ಟಿಸುವುದಕ್ಕೆ ಸೀಮಿತ. “ಹಿಂದೂ ರಾಷ್ಟ್ರ” ಮಾಡುತ್ತೇವೆ ಎಂದು ಹೇಳಿದವರು “ಹಿಂದುಳಿದ ರಾಷ್ಟ್ರ” ಮಾಡುತ್ತಿದ್ದಾರೆ. ಕೃಷಿ ಕಾಯಿದೆ, ಸಿಎಎ, ಎನ್‌ಆರ್‌ಸಿ ಮುಂತಾದವುಗಳಿಗೆ ತಿದ್ದುಪಡಿ ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದೇ ಕೇಂದ್ರ ಸರ್ಕಾರದ ಸಾಧನೆ ಎಂದು ಜಗದೀಶ್ ಸದಂ ವ್ಯಂಗ್ಯವಾಡಿದ್ದಾರೆ.

ಆಪ್ ಕಚೇರಿ ಕಾರ್ಯದರ್ಶಿ ವೀಣಾ ಸೆರ್ರಾವ್‌ರವರು ಮಾತನಾಡಿ, “ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳನ್ನು ಜಾರಿಗೆ ತಂದು, ಸಚಿವರು ಮಾತ್ರ ಸ್ವೇಚ್ಛಾಚಾರದಿಂದ ಸಾವಿರಾರು ಬೆಂಬಲಿಗರನ್ನು ಸೇರಿಸುವುದು ಎಷ್ಟು ಸರಿ? ರಾಜ್ಯದಲ್ಲಿ ಬಿಜೆಪಿ ಸಚಿವರಿಗೇ ಒಂದು ಕಾನೂನು, ಸಾಮಾನ್ಯ ಜನರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದರೂ ಸಚಿವರುಗಳು ತಮ್ಮ ನಡೆಯನ್ನು ಬದಲಿಸಿಕೊಳ್ಳದಿರುವುದು ದುರಂತ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರು ಸಂಭ್ರಮಿಸಿದಂತೆ ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ಅಭಿಮಾನಿಗಳು ಬಂದೂಕಿನಿಂದ ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ಕೂಡ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಖಂಡಿಸಿದೆ. ರಾಜ್ಯದಲ್ಲಿ ಕರೋನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ? ಇದು ಕರೋನಾಶಿರ್ವಾದಯಾತ್ರೆ ಎಂದು ಕಿಡಿಕಾರಿದೆ.


ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...