Homeಮುಖಪುಟನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

- Advertisement -
- Advertisement -

ಬಾಲಿವುಡ್‌ ನಟ ಅಮೀರ್‌ ಖಾನ್‌ ಮತ್ತು ನಿರ್ಮಾಪಕಿ ಕಿರಣ್ ರಾವ್‌‌ ತಾವಿಬ್ಬರು ವಿಚ್ಛೇದಿತರಾಗಿದ್ದೇವೆ ಎಂದು ಘೋಷಿಸಿದ್ದಾರೆ. ವಿಚ್ಛೇದನೆಗೊಂಡರೂ ಮಗ ಆಜಾದ್ ರಾವ್ ಖಾನ್‌ಗೆ ಇಬ್ಬರೂ ಪೋಷಕರಾಗಿ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ. ಅವರಿಬ್ಬರೂ ಮದುವೆಯಾಗಿ 15 ವರ್ಷಗಳಾಗಿದೆ. ಶನಿವಾರ ಜಂಟಿ ಹೇಳಿಕೆ ನೀಡಿದ ಅವರು, “ತಮ್ಮ ಮಗ ಆಜಾದ್‌ಗೆ ಪೋಷಕರಾಗಿ ಮುಂದುವರೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಮೀರ್ ಮತ್ತು ಕಿರಣ್ ನೀಡಿದ ಜಂಟಿ ಹೇಳಿಕೆಯಲ್ಲಿ, “ಈ 15 ಸುಂದರ ವರ್ಷಗಳಲ್ಲಿ ನಾವು ಒಟ್ಟಿಗೆ ಜೀವಮಾನದ ಅನುಭವಗಳು, ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ. ಈಗ ನಾವು ನಮ್ಮ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ. ನಮ್ಮ ಜೀವನ ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರಾಗಿ ಮತ್ತು ಕುಟುಂಬವಾಗಿ ಇರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

“ನಾವು ಸ್ವಲ್ಪ ಸಮಯದ ಹಿಂದೆಯೆ ವಿಚ್ಛೇದನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೆವು. ನಾವು ಮಾಡಿಕೊಂಡಿರುವ ವ್ಯವಸ್ಥೆ ಪ್ರಕಾರ ನಾವಿಬ್ಬರೂ ಪ್ರತ್ಯೇಕವಾಗಿ ವಾಸಿಸಿದರೂ, ವಿಸ್ತೃತ ಕುಟುಂಬದ ರೀತಿಯಲ್ಲಿ ನಮ್ಮ ಜೀವನ ಹಂಚಿಕೊಳ್ಳಲಿದ್ದೇವೆ. ನಮ್ಮ ಮಗ ಆಜಾದ್​ಗೆ ನಾವಿಬ್ಬರೂ ಪೋಷಕರಾಗಿ ಉಳಿಯುತ್ತೇವೆ. ಅವನನ್ನು ನಾವು ಒಟ್ಟಿಗೆ ಪೋಷಿಸುತ್ತೇವೆ ಮತ್ತು ಬೆಳೆಸುತ್ತೇವೆ. ಚಲನಚಿತ್ರಗಳು, ಪಾನಿ ಫೌಂಡೇಶನ್ ಮತ್ತು ಇತರ ಯೋಜನೆಗಳ ಸಹಯೋಗಿಗಳಾಗಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರ ಜಂಟಿ ಹೇಳಿಕೆ ನೀಡಿದೆ.

“ನಮ್ಮ ಸಂಬಂಧದಲ್ಲಿ ಆಗಿರುವ ಈ ಪರಿವರ್ತನೆಯನ್ನು ಅರಿತು ನಮಗೆ ನಿರಂತರವಾಗಿ ಬೆಂಬಲ ನೀಡಿದ ನಮ್ಮ ಕುಟುಂಬವರ್ಗ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಇವರ ಬೆಂಬಲ ಇಲ್ಲದಿದ್ದರೆ ನಮ್ಮ ಈ ನಿರ್ಧಾರ ಬಹಳ ಕಷ್ಟಕರವಾಗುತ್ತಿತ್ತು. ನಮ್ಮ ಹಿತೈಷಿಗಳಿಂದ ನಾವು ಶುಭ ಹಾರೈಕೆ ಮತ್ತು ಆಶೀರ್ವಾದಗಳನ್ನ ನಿರೀಕ್ಷಿಸುತ್ತೇವೆ. ಈ ವಿಚ್ಛೇದನವನ್ನು ನೀವು ಅಂತ್ಯವಾಗಿ ನೋಡದೆ, ಹೊಸ ಪ್ರಯಾಣದ ಆರಂಭವಾಗಿ ನೋಡುತ್ತೀರಿ ಎಂದು ಭಾವಿಸುತ್ತೇವೆ” ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಕಿರಣ್ ರಾವ್‌‌ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ‘ಲಗಾನ್’ ಚಿತ್ರದ ಸೆಟ್‌ನಲ್ಲಿ ಭೇಟಿಯಾದ ಅವರಿಬ್ಬರು, ಡಿಸೆಂಬರ್ 28, 2005 ರಂದು ವಿವಾಹಿತರಾದರು. ಬಾಡಿಗೆ ತಾಯಿಯ ಮೂಲಕ ಅಜಾದ್‌ ಅವರನ್ನು ಪಡೆದಿದ್ದರು.

ಅಮೀರ್ ಖಾನ್‌ ಈ ಹಿಂದೆ ರೀನಾ ದತ್ತಾ ಅವರನ್ನು ಮದುವೆಯಾಗಿದ್ದರು. ಆದರೆ 2002 ರಲ್ಲಿ, ಮದುವೆಯಾಗಿ 16 ವರ್ಷಗಳ ನಂತರ ವಿಚ್ಛೇದನ ಪಡೆದಿದ್ದರು. ರೀನಾ ಅವರಿಂದ ಅಮೀರ್‌ಗೆ ಐರಾ ಮತ್ತು ಜುನೈದ್‌ ಎಂಬ ಇಬ್ಬರು ಮಕ್ಕಳಿದ್ದಾರೆ.

ಅಮೀರ್‌ ಖಾನ್‌ ತಮ್ಮ ‘ಲಾಲ್ ಸಿಂಗ್ ಚಾಧಾ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದು ಟಾಮ್ ಹ್ಯಾಂಕ್ಸ್ ಅಭಿನಯದ ‘ಫಾರೆಸ್ಟ್ ಗಂಪ್’ ಚಿತ್ರದ ಅಧಿಕೃತ ಹಿಂದಿ ರಿಮೇಕ್ ಆಗಿದೆ. ಅದ್ವೈತ್ ಚಂದನ್ ನಿರ್ದೇಶನದ ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ಮುಖ್ಯ ಪಾತ್ರದಲ್ಲಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಇದನ್ನೂ ಓದಿ: ಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...