Homeಮುಖಪುಟನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

- Advertisement -
- Advertisement -

ಬಾಲಿವುಡ್‌ ನಟ ಅಮೀರ್‌ ಖಾನ್‌ ಮತ್ತು ನಿರ್ಮಾಪಕಿ ಕಿರಣ್ ರಾವ್‌‌ ತಾವಿಬ್ಬರು ವಿಚ್ಛೇದಿತರಾಗಿದ್ದೇವೆ ಎಂದು ಘೋಷಿಸಿದ್ದಾರೆ. ವಿಚ್ಛೇದನೆಗೊಂಡರೂ ಮಗ ಆಜಾದ್ ರಾವ್ ಖಾನ್‌ಗೆ ಇಬ್ಬರೂ ಪೋಷಕರಾಗಿ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ. ಅವರಿಬ್ಬರೂ ಮದುವೆಯಾಗಿ 15 ವರ್ಷಗಳಾಗಿದೆ. ಶನಿವಾರ ಜಂಟಿ ಹೇಳಿಕೆ ನೀಡಿದ ಅವರು, “ತಮ್ಮ ಮಗ ಆಜಾದ್‌ಗೆ ಪೋಷಕರಾಗಿ ಮುಂದುವರೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಮೀರ್ ಮತ್ತು ಕಿರಣ್ ನೀಡಿದ ಜಂಟಿ ಹೇಳಿಕೆಯಲ್ಲಿ, “ಈ 15 ಸುಂದರ ವರ್ಷಗಳಲ್ಲಿ ನಾವು ಒಟ್ಟಿಗೆ ಜೀವಮಾನದ ಅನುಭವಗಳು, ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ. ಈಗ ನಾವು ನಮ್ಮ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ. ನಮ್ಮ ಜೀವನ ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರಾಗಿ ಮತ್ತು ಕುಟುಂಬವಾಗಿ ಇರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

“ನಾವು ಸ್ವಲ್ಪ ಸಮಯದ ಹಿಂದೆಯೆ ವಿಚ್ಛೇದನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೆವು. ನಾವು ಮಾಡಿಕೊಂಡಿರುವ ವ್ಯವಸ್ಥೆ ಪ್ರಕಾರ ನಾವಿಬ್ಬರೂ ಪ್ರತ್ಯೇಕವಾಗಿ ವಾಸಿಸಿದರೂ, ವಿಸ್ತೃತ ಕುಟುಂಬದ ರೀತಿಯಲ್ಲಿ ನಮ್ಮ ಜೀವನ ಹಂಚಿಕೊಳ್ಳಲಿದ್ದೇವೆ. ನಮ್ಮ ಮಗ ಆಜಾದ್​ಗೆ ನಾವಿಬ್ಬರೂ ಪೋಷಕರಾಗಿ ಉಳಿಯುತ್ತೇವೆ. ಅವನನ್ನು ನಾವು ಒಟ್ಟಿಗೆ ಪೋಷಿಸುತ್ತೇವೆ ಮತ್ತು ಬೆಳೆಸುತ್ತೇವೆ. ಚಲನಚಿತ್ರಗಳು, ಪಾನಿ ಫೌಂಡೇಶನ್ ಮತ್ತು ಇತರ ಯೋಜನೆಗಳ ಸಹಯೋಗಿಗಳಾಗಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರ ಜಂಟಿ ಹೇಳಿಕೆ ನೀಡಿದೆ.

“ನಮ್ಮ ಸಂಬಂಧದಲ್ಲಿ ಆಗಿರುವ ಈ ಪರಿವರ್ತನೆಯನ್ನು ಅರಿತು ನಮಗೆ ನಿರಂತರವಾಗಿ ಬೆಂಬಲ ನೀಡಿದ ನಮ್ಮ ಕುಟುಂಬವರ್ಗ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಇವರ ಬೆಂಬಲ ಇಲ್ಲದಿದ್ದರೆ ನಮ್ಮ ಈ ನಿರ್ಧಾರ ಬಹಳ ಕಷ್ಟಕರವಾಗುತ್ತಿತ್ತು. ನಮ್ಮ ಹಿತೈಷಿಗಳಿಂದ ನಾವು ಶುಭ ಹಾರೈಕೆ ಮತ್ತು ಆಶೀರ್ವಾದಗಳನ್ನ ನಿರೀಕ್ಷಿಸುತ್ತೇವೆ. ಈ ವಿಚ್ಛೇದನವನ್ನು ನೀವು ಅಂತ್ಯವಾಗಿ ನೋಡದೆ, ಹೊಸ ಪ್ರಯಾಣದ ಆರಂಭವಾಗಿ ನೋಡುತ್ತೀರಿ ಎಂದು ಭಾವಿಸುತ್ತೇವೆ” ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಕಿರಣ್ ರಾವ್‌‌ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ‘ಲಗಾನ್’ ಚಿತ್ರದ ಸೆಟ್‌ನಲ್ಲಿ ಭೇಟಿಯಾದ ಅವರಿಬ್ಬರು, ಡಿಸೆಂಬರ್ 28, 2005 ರಂದು ವಿವಾಹಿತರಾದರು. ಬಾಡಿಗೆ ತಾಯಿಯ ಮೂಲಕ ಅಜಾದ್‌ ಅವರನ್ನು ಪಡೆದಿದ್ದರು.

ಅಮೀರ್ ಖಾನ್‌ ಈ ಹಿಂದೆ ರೀನಾ ದತ್ತಾ ಅವರನ್ನು ಮದುವೆಯಾಗಿದ್ದರು. ಆದರೆ 2002 ರಲ್ಲಿ, ಮದುವೆಯಾಗಿ 16 ವರ್ಷಗಳ ನಂತರ ವಿಚ್ಛೇದನ ಪಡೆದಿದ್ದರು. ರೀನಾ ಅವರಿಂದ ಅಮೀರ್‌ಗೆ ಐರಾ ಮತ್ತು ಜುನೈದ್‌ ಎಂಬ ಇಬ್ಬರು ಮಕ್ಕಳಿದ್ದಾರೆ.

ಅಮೀರ್‌ ಖಾನ್‌ ತಮ್ಮ ‘ಲಾಲ್ ಸಿಂಗ್ ಚಾಧಾ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದು ಟಾಮ್ ಹ್ಯಾಂಕ್ಸ್ ಅಭಿನಯದ ‘ಫಾರೆಸ್ಟ್ ಗಂಪ್’ ಚಿತ್ರದ ಅಧಿಕೃತ ಹಿಂದಿ ರಿಮೇಕ್ ಆಗಿದೆ. ಅದ್ವೈತ್ ಚಂದನ್ ನಿರ್ದೇಶನದ ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ಮುಖ್ಯ ಪಾತ್ರದಲ್ಲಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಇದನ್ನೂ ಓದಿ: ಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...