Homeಮುಖಪುಟನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

- Advertisement -
- Advertisement -

ಬಾಲಿವುಡ್‌ ನಟ ಅಮೀರ್‌ ಖಾನ್‌ ಮತ್ತು ನಿರ್ಮಾಪಕಿ ಕಿರಣ್ ರಾವ್‌‌ ತಾವಿಬ್ಬರು ವಿಚ್ಛೇದಿತರಾಗಿದ್ದೇವೆ ಎಂದು ಘೋಷಿಸಿದ್ದಾರೆ. ವಿಚ್ಛೇದನೆಗೊಂಡರೂ ಮಗ ಆಜಾದ್ ರಾವ್ ಖಾನ್‌ಗೆ ಇಬ್ಬರೂ ಪೋಷಕರಾಗಿ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ. ಅವರಿಬ್ಬರೂ ಮದುವೆಯಾಗಿ 15 ವರ್ಷಗಳಾಗಿದೆ. ಶನಿವಾರ ಜಂಟಿ ಹೇಳಿಕೆ ನೀಡಿದ ಅವರು, “ತಮ್ಮ ಮಗ ಆಜಾದ್‌ಗೆ ಪೋಷಕರಾಗಿ ಮುಂದುವರೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಮೀರ್ ಮತ್ತು ಕಿರಣ್ ನೀಡಿದ ಜಂಟಿ ಹೇಳಿಕೆಯಲ್ಲಿ, “ಈ 15 ಸುಂದರ ವರ್ಷಗಳಲ್ಲಿ ನಾವು ಒಟ್ಟಿಗೆ ಜೀವಮಾನದ ಅನುಭವಗಳು, ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ. ಈಗ ನಾವು ನಮ್ಮ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ. ನಮ್ಮ ಜೀವನ ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರಾಗಿ ಮತ್ತು ಕುಟುಂಬವಾಗಿ ಇರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

“ನಾವು ಸ್ವಲ್ಪ ಸಮಯದ ಹಿಂದೆಯೆ ವಿಚ್ಛೇದನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೆವು. ನಾವು ಮಾಡಿಕೊಂಡಿರುವ ವ್ಯವಸ್ಥೆ ಪ್ರಕಾರ ನಾವಿಬ್ಬರೂ ಪ್ರತ್ಯೇಕವಾಗಿ ವಾಸಿಸಿದರೂ, ವಿಸ್ತೃತ ಕುಟುಂಬದ ರೀತಿಯಲ್ಲಿ ನಮ್ಮ ಜೀವನ ಹಂಚಿಕೊಳ್ಳಲಿದ್ದೇವೆ. ನಮ್ಮ ಮಗ ಆಜಾದ್​ಗೆ ನಾವಿಬ್ಬರೂ ಪೋಷಕರಾಗಿ ಉಳಿಯುತ್ತೇವೆ. ಅವನನ್ನು ನಾವು ಒಟ್ಟಿಗೆ ಪೋಷಿಸುತ್ತೇವೆ ಮತ್ತು ಬೆಳೆಸುತ್ತೇವೆ. ಚಲನಚಿತ್ರಗಳು, ಪಾನಿ ಫೌಂಡೇಶನ್ ಮತ್ತು ಇತರ ಯೋಜನೆಗಳ ಸಹಯೋಗಿಗಳಾಗಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರ ಜಂಟಿ ಹೇಳಿಕೆ ನೀಡಿದೆ.

“ನಮ್ಮ ಸಂಬಂಧದಲ್ಲಿ ಆಗಿರುವ ಈ ಪರಿವರ್ತನೆಯನ್ನು ಅರಿತು ನಮಗೆ ನಿರಂತರವಾಗಿ ಬೆಂಬಲ ನೀಡಿದ ನಮ್ಮ ಕುಟುಂಬವರ್ಗ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಇವರ ಬೆಂಬಲ ಇಲ್ಲದಿದ್ದರೆ ನಮ್ಮ ಈ ನಿರ್ಧಾರ ಬಹಳ ಕಷ್ಟಕರವಾಗುತ್ತಿತ್ತು. ನಮ್ಮ ಹಿತೈಷಿಗಳಿಂದ ನಾವು ಶುಭ ಹಾರೈಕೆ ಮತ್ತು ಆಶೀರ್ವಾದಗಳನ್ನ ನಿರೀಕ್ಷಿಸುತ್ತೇವೆ. ಈ ವಿಚ್ಛೇದನವನ್ನು ನೀವು ಅಂತ್ಯವಾಗಿ ನೋಡದೆ, ಹೊಸ ಪ್ರಯಾಣದ ಆರಂಭವಾಗಿ ನೋಡುತ್ತೀರಿ ಎಂದು ಭಾವಿಸುತ್ತೇವೆ” ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಕಿರಣ್ ರಾವ್‌‌ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ‘ಲಗಾನ್’ ಚಿತ್ರದ ಸೆಟ್‌ನಲ್ಲಿ ಭೇಟಿಯಾದ ಅವರಿಬ್ಬರು, ಡಿಸೆಂಬರ್ 28, 2005 ರಂದು ವಿವಾಹಿತರಾದರು. ಬಾಡಿಗೆ ತಾಯಿಯ ಮೂಲಕ ಅಜಾದ್‌ ಅವರನ್ನು ಪಡೆದಿದ್ದರು.

ಅಮೀರ್ ಖಾನ್‌ ಈ ಹಿಂದೆ ರೀನಾ ದತ್ತಾ ಅವರನ್ನು ಮದುವೆಯಾಗಿದ್ದರು. ಆದರೆ 2002 ರಲ್ಲಿ, ಮದುವೆಯಾಗಿ 16 ವರ್ಷಗಳ ನಂತರ ವಿಚ್ಛೇದನ ಪಡೆದಿದ್ದರು. ರೀನಾ ಅವರಿಂದ ಅಮೀರ್‌ಗೆ ಐರಾ ಮತ್ತು ಜುನೈದ್‌ ಎಂಬ ಇಬ್ಬರು ಮಕ್ಕಳಿದ್ದಾರೆ.

ಅಮೀರ್‌ ಖಾನ್‌ ತಮ್ಮ ‘ಲಾಲ್ ಸಿಂಗ್ ಚಾಧಾ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದು ಟಾಮ್ ಹ್ಯಾಂಕ್ಸ್ ಅಭಿನಯದ ‘ಫಾರೆಸ್ಟ್ ಗಂಪ್’ ಚಿತ್ರದ ಅಧಿಕೃತ ಹಿಂದಿ ರಿಮೇಕ್ ಆಗಿದೆ. ಅದ್ವೈತ್ ಚಂದನ್ ನಿರ್ದೇಶನದ ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ಮುಖ್ಯ ಪಾತ್ರದಲ್ಲಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಇದನ್ನೂ ಓದಿ: ಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...