Homeಮುಖಪುಟನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

ನಟ ಅಮೀರ್‌ ಖಾನ್‌ ಮತ್ತು ಕಿರಣ್ ರಾವ್‌ ವಿಚ್ಛೇದನ ಘೋಷಣೆ!

- Advertisement -
- Advertisement -

ಬಾಲಿವುಡ್‌ ನಟ ಅಮೀರ್‌ ಖಾನ್‌ ಮತ್ತು ನಿರ್ಮಾಪಕಿ ಕಿರಣ್ ರಾವ್‌‌ ತಾವಿಬ್ಬರು ವಿಚ್ಛೇದಿತರಾಗಿದ್ದೇವೆ ಎಂದು ಘೋಷಿಸಿದ್ದಾರೆ. ವಿಚ್ಛೇದನೆಗೊಂಡರೂ ಮಗ ಆಜಾದ್ ರಾವ್ ಖಾನ್‌ಗೆ ಇಬ್ಬರೂ ಪೋಷಕರಾಗಿ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ. ಅವರಿಬ್ಬರೂ ಮದುವೆಯಾಗಿ 15 ವರ್ಷಗಳಾಗಿದೆ. ಶನಿವಾರ ಜಂಟಿ ಹೇಳಿಕೆ ನೀಡಿದ ಅವರು, “ತಮ್ಮ ಮಗ ಆಜಾದ್‌ಗೆ ಪೋಷಕರಾಗಿ ಮುಂದುವರೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಮೀರ್ ಮತ್ತು ಕಿರಣ್ ನೀಡಿದ ಜಂಟಿ ಹೇಳಿಕೆಯಲ್ಲಿ, “ಈ 15 ಸುಂದರ ವರ್ಷಗಳಲ್ಲಿ ನಾವು ಒಟ್ಟಿಗೆ ಜೀವಮಾನದ ಅನುಭವಗಳು, ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ. ಈಗ ನಾವು ನಮ್ಮ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಬಯಸುತ್ತೇವೆ. ನಮ್ಮ ಜೀವನ ಇನ್ನು ಮುಂದೆ ಗಂಡ ಮತ್ತು ಹೆಂಡತಿಯಾಗಿ ಅಲ್ಲ, ಆದರೆ ಪರಸ್ಪರ ಪೋಷಕರಾಗಿ ಮತ್ತು ಕುಟುಂಬವಾಗಿ ಇರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

“ನಾವು ಸ್ವಲ್ಪ ಸಮಯದ ಹಿಂದೆಯೆ ವಿಚ್ಛೇದನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೆವು. ನಾವು ಮಾಡಿಕೊಂಡಿರುವ ವ್ಯವಸ್ಥೆ ಪ್ರಕಾರ ನಾವಿಬ್ಬರೂ ಪ್ರತ್ಯೇಕವಾಗಿ ವಾಸಿಸಿದರೂ, ವಿಸ್ತೃತ ಕುಟುಂಬದ ರೀತಿಯಲ್ಲಿ ನಮ್ಮ ಜೀವನ ಹಂಚಿಕೊಳ್ಳಲಿದ್ದೇವೆ. ನಮ್ಮ ಮಗ ಆಜಾದ್​ಗೆ ನಾವಿಬ್ಬರೂ ಪೋಷಕರಾಗಿ ಉಳಿಯುತ್ತೇವೆ. ಅವನನ್ನು ನಾವು ಒಟ್ಟಿಗೆ ಪೋಷಿಸುತ್ತೇವೆ ಮತ್ತು ಬೆಳೆಸುತ್ತೇವೆ. ಚಲನಚಿತ್ರಗಳು, ಪಾನಿ ಫೌಂಡೇಶನ್ ಮತ್ತು ಇತರ ಯೋಜನೆಗಳ ಸಹಯೋಗಿಗಳಾಗಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರ ಜಂಟಿ ಹೇಳಿಕೆ ನೀಡಿದೆ.

“ನಮ್ಮ ಸಂಬಂಧದಲ್ಲಿ ಆಗಿರುವ ಈ ಪರಿವರ್ತನೆಯನ್ನು ಅರಿತು ನಮಗೆ ನಿರಂತರವಾಗಿ ಬೆಂಬಲ ನೀಡಿದ ನಮ್ಮ ಕುಟುಂಬವರ್ಗ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಇವರ ಬೆಂಬಲ ಇಲ್ಲದಿದ್ದರೆ ನಮ್ಮ ಈ ನಿರ್ಧಾರ ಬಹಳ ಕಷ್ಟಕರವಾಗುತ್ತಿತ್ತು. ನಮ್ಮ ಹಿತೈಷಿಗಳಿಂದ ನಾವು ಶುಭ ಹಾರೈಕೆ ಮತ್ತು ಆಶೀರ್ವಾದಗಳನ್ನ ನಿರೀಕ್ಷಿಸುತ್ತೇವೆ. ಈ ವಿಚ್ಛೇದನವನ್ನು ನೀವು ಅಂತ್ಯವಾಗಿ ನೋಡದೆ, ಹೊಸ ಪ್ರಯಾಣದ ಆರಂಭವಾಗಿ ನೋಡುತ್ತೀರಿ ಎಂದು ಭಾವಿಸುತ್ತೇವೆ” ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಕಿರಣ್ ರಾವ್‌‌ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ‘ಲಗಾನ್’ ಚಿತ್ರದ ಸೆಟ್‌ನಲ್ಲಿ ಭೇಟಿಯಾದ ಅವರಿಬ್ಬರು, ಡಿಸೆಂಬರ್ 28, 2005 ರಂದು ವಿವಾಹಿತರಾದರು. ಬಾಡಿಗೆ ತಾಯಿಯ ಮೂಲಕ ಅಜಾದ್‌ ಅವರನ್ನು ಪಡೆದಿದ್ದರು.

ಅಮೀರ್ ಖಾನ್‌ ಈ ಹಿಂದೆ ರೀನಾ ದತ್ತಾ ಅವರನ್ನು ಮದುವೆಯಾಗಿದ್ದರು. ಆದರೆ 2002 ರಲ್ಲಿ, ಮದುವೆಯಾಗಿ 16 ವರ್ಷಗಳ ನಂತರ ವಿಚ್ಛೇದನ ಪಡೆದಿದ್ದರು. ರೀನಾ ಅವರಿಂದ ಅಮೀರ್‌ಗೆ ಐರಾ ಮತ್ತು ಜುನೈದ್‌ ಎಂಬ ಇಬ್ಬರು ಮಕ್ಕಳಿದ್ದಾರೆ.

ಅಮೀರ್‌ ಖಾನ್‌ ತಮ್ಮ ‘ಲಾಲ್ ಸಿಂಗ್ ಚಾಧಾ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದು ಟಾಮ್ ಹ್ಯಾಂಕ್ಸ್ ಅಭಿನಯದ ‘ಫಾರೆಸ್ಟ್ ಗಂಪ್’ ಚಿತ್ರದ ಅಧಿಕೃತ ಹಿಂದಿ ರಿಮೇಕ್ ಆಗಿದೆ. ಅದ್ವೈತ್ ಚಂದನ್ ನಿರ್ದೇಶನದ ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ಮುಖ್ಯ ಪಾತ್ರದಲ್ಲಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಇದನ್ನೂ ಓದಿ: ಸಂಪಾದಕೀಯ; ಸಾಂವಿಧಾನಿಕ ನೈತಿಕತೆಯಲ್ಲಿ ಕಮಾನು ಕಟ್ಟಬೇಕಿದೆ ಬಣ್ಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....