Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...