Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...