Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....