Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...