Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...

ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ​​ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, "ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್...

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...