Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...

“ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು

"ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. "ಕೇಂದ್ರ ಸಚಿವರು...

ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ (ಆ.19) ಉತ್ತರ ಪ್ರದೇಶದ ರಾಂಪುರ, ಸಹಾರನ್‌ಪುರ ಮತ್ತು ದೆಹಲಿಯಲ್ಲಿ ಶೋಧ ನಡೆಸಿದೆ. ವರದಿಗಳ ಪ್ರಕಾರ, ಹಣ ಅಕ್ರಮ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...

‘ಮಹಾತ್ಮ ಗಾಂಧಿ – ವಾಜಪೇಯಿ ಹಾಡಿದ್ದನ್ನೇ ನಾವು ಹಾಡಿದ್ದೇವೆ..’; ವಂದೇ ಮಾತರಂ ವಿವಾದದ ಕುರಿತು ಖರ್ಗೆ ಸ್ಪಷ್ಟನೆ

ಪಕ್ಷದ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡಿದ ಬಗ್ಗೆ ನಡೆಯುತ್ತಿರುವ ವಿವಾದದ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್...