Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...