Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...