Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...