Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...