ಇಂಡಿಯಾ ಮೈತ್ರಿಕೂಟವನ್ನು ತೊರೆಯಿರಿ. ಇಲ್ಲವಾದಲ್ಲಿ ಬಂಧನವಾಗುತ್ತೀರಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆದರಿಕೆ ಹಾಕುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ, “ಅರವಿಂದ್ ಕೇಜ್ರಿವಾಲ್ ಅವರು ಇಂಡಿಯಾ ಮೈತ್ರಿಕೂಟ ತೊರೆಯದಿದ್ದರೆ ಇನ್ನೆರಡು ದಿನಗಳಲ್ಲಿ ಅವರ ಬಂಧನವಾಗಲಿದೆ. ಸಿಆರ್ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ಕೇಜ್ರಿವಾಲ್ ಅವರನ್ನು ಇಡಿ ಮತ್ತು ಸಿಬಿಐ ಬಂಧಿಸಲಿದೆ ಎಂದು ನಮಗೆ ಬೆದರಿಕೆ ಬಂದಿದೆ” ಎಂದು ಆರೋಪಿಸಿದ್ದಾರೆ.
INDIA Alliance की एकता से डरे Modi और BJP🫨
जब से Media में ख़बर चल रही है कि INDIA Alliance की Seat Sharing Final हो गई है
तब से AAP नेताओं को Message आया है कि अगर AAP ने इंडिया गठबंधन नहीं छोड़ा तो मुख्यमंत्री जी को दो दिनों में CBI से CrPC के Section 41 A का notice आएगा… pic.twitter.com/zAcgdOWWBs
— AAP (@AamAadmiParty) February 22, 2024
“ಅರವಿಂದ್ ಕೇಜ್ರಿವಾಲ್ ಅವರಾಗಲಿ, ನಾವಾಗಲಿ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಬಿಜೆಪಿಗೆ ಹೇಳಲು ಬಯಸುತ್ತೇನೆ. ಬಿಜೆಪಿಯವರು ಎಲ್ಲಾ ಎಎಪಿ ನಾಯಕರು ಮತ್ತು ಶಾಸಕರನ್ನು ಜೈಲಿಗಟ್ಟಿದರೂ, ಪ್ರತಿಯೊಬ್ಬ ಎಎಪಿ ಕಾರ್ಯಕರ್ತ ನಾಯಕನಾಗಿ ನಿಲ್ಲಲಿದ್ದಾನೆ ಮತ್ತು ಪ್ರಜಾಪ್ರಭುತ್ವ, ಸಂವಿಧಾನವನ್ನು ಹಾಗೂ ದೇಶವನ್ನು ರಕ್ಷಿಸಲಿದ್ದಾನೆ” ಎಂದು ಅತಿಶಿ ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಏಳನೇ ಬಾರಿ ಸಮನ್ಸ್ ನೀಡಿದೆ. ಇದುವರೆಗೆ ಆರು ಸಮನ್ಸ್ಗಳನ್ನು ಕೇಜ್ರಿವಾಲ್ ತಿರಸ್ಕರಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಸೀಟ್ ಹಂಚಿಕೆ ಮಾಡಿಕೊಂಡಿದೆ. ವರದಿಗಳ ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಇದನ್ನೂ ಓದಿ: ಪ್ರತಿಭಟನಾ ನಿರತ ರೈತರ ವಿರುದ್ಧ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ