Homeಮುಖಪುಟಉತ್ತರಾಖಂಡ: ನಿವೃತ್ತ ಸೇನಾಧಿಕಾರಿ ಅಜಯ್ ಕೊತಿಯಾಲ್ ಎಎಪಿಯ ಸಿಎಂ ಅಭ್ಯರ್ಥಿ

ಉತ್ತರಾಖಂಡ: ನಿವೃತ್ತ ಸೇನಾಧಿಕಾರಿ ಅಜಯ್ ಕೊತಿಯಾಲ್ ಎಎಪಿಯ ಸಿಎಂ ಅಭ್ಯರ್ಥಿ

- Advertisement -
- Advertisement -

ಉತ್ತರಾಖಂಡದಲ್ಲಿ 2002 ರ ವಿಧಾನಸಭಾ ಚುನಾವಣೆಗೆ ಎಎಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕರ್ನಲ್ ಅಜಯ್ ಕೊತಿಯಾಲ್ (ನಿವೃತ್ತ) ಅವರನ್ನು ಆಯ್ಕೆ ಮಾಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.

ಆಮ್ ಆದ್ಮಿ ಪಕ್ಷ ಉತ್ತರಾಖಂಡ ರಾಜ್ಯವನ್ನು ವಿಶ್ವದಲ್ಲಿನ ಹಿಂದೂಗಳ ಆಧ್ಯಾತ್ಮಿಕ ರಾಜಧಾನಿಯಾಗಿ ಪರಿವರ್ತಿಸುತ್ತದೆ ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ಒಂದು ದಿನದ ಡೆಹ್ರಾಡೂನ್‌ ಪ್ರವಾಸದಲ್ಲಿರುವ ಕೇಜ್ರಿವಾಲ್, “ಉತ್ತರಾಖಂಡದ ಜನರು ರಾಜಕಾರಣಿಗಳನ್ನು ಬಯಸುವುದಿಲ್ಲ ಆದರೆ ದೇಶಕ್ಕಾಗಿ ಹೋರಾಡಿದ ಅಜಯ್ ಕೊತಿಯಾಲ್ ಅವರಂತಹ ದೇಶಭಕ್ತರನ್ನು ಬಯಸುತ್ತಾರೆ. ಅವರ ದೇಹದಲ್ಲಿ ಇನ್ನೂ ಎರಡು ಗುಂಡುಗಳನ್ನು ಹೊತ್ತುಕೊಂಡಿದ್ದಾರೆ. 2013 ರ ದುರಂತದ ನಂತರ ಕೇದಾರನಾಥದ ಪುನರ್ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

“ಕೆಲ ಸಮಯದ ಹಿಂದೆ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಉತ್ಜತರಾಖಂಡದ ಜನರು ತಮ್ಮ ಮುಖ್ಯಮಂತ್ರಿಯಾಗಿ ಯಾರು ಬೇಕು ಎಂದು ತಿಳಿಯಲು ಇಲ್ಲಿಗೆ ಬಂದಿದ್ದರು. ನಮ್ಮ ಸಿಎಂ ಅಭ್ಯರ್ಥಿಗೆ ಸಂಬಂಧಿಸಿದಂತೆ ನಾವು ರಾಜ್ಯದಲ್ಲಿ ಸಮೀಕ್ಷೆಗಳನ್ನು ನಡೆಸಿದ್ದೇವೆ. ಹೀಗಾಗಿ ಕರ್ನಲ್ ಅಜಯ್ ಕೊತಿಯಾಲ್ ಅವರ ಬಗ್ಗೆ ಅದ್ಭುತ ಪ್ರತಿಕ್ರಿಯೆ ಪಡೆದಿದ್ದೇವೆ. ಆದ್ದರಿಂದ ಇದು ಉತ್ತರಾಖಂಡದ ಜನರ ಆಯ್ಕೆಯಾಗಿದೆ” ಎಂದು ಕ್ರೇಜ್ರಿವಾಲ್ ತಿಳಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನನಗೆನೀಡಿರುವುದು ಹೆಮ್ಮೆಯ ಸಂಗತಿ ಎಂದು ಕರ್ನಲ್ ಅಜಯ್ ಕೊತಿಯಾಲ್ (ನಿವೃತ್ತ) ಹೇಳಿದ್ದಾರೆ. ಕೇದಾರನಾಥದ ಪುನರ್ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ನೆನಪಿಸಿಕೊಂಡಿರುವ ಅವರು, ಸರಿಯಾದ ನಿರ್ಧಾರವಿದ್ದರೇ ಯಾವುದೂ ಅಸಾಧ್ಯವಲ್ಲ ಎಂದಿದ್ದಾರೆ.

“ನಾವು ರಾಜ್ಯದಲ್ಲಿ ಏನಾದರೂ ಒಳ್ಳೆಯದನ್ನು ಮಾಡಬೇಕಾದರೆ, ನಾವು ಎಎಪಿ ಮಾದರಿ ಆಡಳಿತವನ್ನು ತರಬೇಕು. ಎಎಪಿ ಮಾದರಿಯಿಂದ ನಾನು ಪ್ರಭಾವಿತನಾಗಿದ್ದೇನೆ. ಅದಕ್ಕಾಗಿಯೇ ನಾನು ಎಎಪಿಗೆ ಸೇರಿಕೊಂಡೆ” ಎಂದು ಹೇಳಿದ್ದಾರೆ.

ಉತ್ತರಾಖಂಡದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಹಲವು ಪ್ರಮುಖ ಚುನಾವಣಾ ಘೋಷಣೆಗಳನ್ನು ಮಾಡಿದ್ದಾರೆ. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್, ಹಿಂದಿನ ಬಿಲ್‌ಗಳನ್ನು ಮನ್ನಾ ಮಾಡುವುದು ಮತ್ತು ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ಈ ಘೋಷಣೆಗಳಲ್ಲಿ ಪ್ರಮುಖವಾಗಿವೆ.


ಇದನ್ನೂ ಓದಿ: ಉತ್ತರಾಖಂಡ: ಆರು ತಿಂಗಳಲ್ಲಿ ಮೂರು ಮುಖ್ಯಮಂತ್ರಿ; ಪುಷ್ಕರ್‌ ಸಿಂಗ್ ಧಾಮಿ ಮುಂದಿನ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...