Homeಮುಖಪುಟಉತ್ತರಾಖಂಡ: ನಿವೃತ್ತ ಸೇನಾಧಿಕಾರಿ ಅಜಯ್ ಕೊತಿಯಾಲ್ ಎಎಪಿಯ ಸಿಎಂ ಅಭ್ಯರ್ಥಿ

ಉತ್ತರಾಖಂಡ: ನಿವೃತ್ತ ಸೇನಾಧಿಕಾರಿ ಅಜಯ್ ಕೊತಿಯಾಲ್ ಎಎಪಿಯ ಸಿಎಂ ಅಭ್ಯರ್ಥಿ

- Advertisement -
- Advertisement -

ಉತ್ತರಾಖಂಡದಲ್ಲಿ 2002 ರ ವಿಧಾನಸಭಾ ಚುನಾವಣೆಗೆ ಎಎಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕರ್ನಲ್ ಅಜಯ್ ಕೊತಿಯಾಲ್ (ನಿವೃತ್ತ) ಅವರನ್ನು ಆಯ್ಕೆ ಮಾಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.

ಆಮ್ ಆದ್ಮಿ ಪಕ್ಷ ಉತ್ತರಾಖಂಡ ರಾಜ್ಯವನ್ನು ವಿಶ್ವದಲ್ಲಿನ ಹಿಂದೂಗಳ ಆಧ್ಯಾತ್ಮಿಕ ರಾಜಧಾನಿಯಾಗಿ ಪರಿವರ್ತಿಸುತ್ತದೆ ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ಒಂದು ದಿನದ ಡೆಹ್ರಾಡೂನ್‌ ಪ್ರವಾಸದಲ್ಲಿರುವ ಕೇಜ್ರಿವಾಲ್, “ಉತ್ತರಾಖಂಡದ ಜನರು ರಾಜಕಾರಣಿಗಳನ್ನು ಬಯಸುವುದಿಲ್ಲ ಆದರೆ ದೇಶಕ್ಕಾಗಿ ಹೋರಾಡಿದ ಅಜಯ್ ಕೊತಿಯಾಲ್ ಅವರಂತಹ ದೇಶಭಕ್ತರನ್ನು ಬಯಸುತ್ತಾರೆ. ಅವರ ದೇಹದಲ್ಲಿ ಇನ್ನೂ ಎರಡು ಗುಂಡುಗಳನ್ನು ಹೊತ್ತುಕೊಂಡಿದ್ದಾರೆ. 2013 ರ ದುರಂತದ ನಂತರ ಕೇದಾರನಾಥದ ಪುನರ್ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

“ಕೆಲ ಸಮಯದ ಹಿಂದೆ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಉತ್ಜತರಾಖಂಡದ ಜನರು ತಮ್ಮ ಮುಖ್ಯಮಂತ್ರಿಯಾಗಿ ಯಾರು ಬೇಕು ಎಂದು ತಿಳಿಯಲು ಇಲ್ಲಿಗೆ ಬಂದಿದ್ದರು. ನಮ್ಮ ಸಿಎಂ ಅಭ್ಯರ್ಥಿಗೆ ಸಂಬಂಧಿಸಿದಂತೆ ನಾವು ರಾಜ್ಯದಲ್ಲಿ ಸಮೀಕ್ಷೆಗಳನ್ನು ನಡೆಸಿದ್ದೇವೆ. ಹೀಗಾಗಿ ಕರ್ನಲ್ ಅಜಯ್ ಕೊತಿಯಾಲ್ ಅವರ ಬಗ್ಗೆ ಅದ್ಭುತ ಪ್ರತಿಕ್ರಿಯೆ ಪಡೆದಿದ್ದೇವೆ. ಆದ್ದರಿಂದ ಇದು ಉತ್ತರಾಖಂಡದ ಜನರ ಆಯ್ಕೆಯಾಗಿದೆ” ಎಂದು ಕ್ರೇಜ್ರಿವಾಲ್ ತಿಳಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನನಗೆನೀಡಿರುವುದು ಹೆಮ್ಮೆಯ ಸಂಗತಿ ಎಂದು ಕರ್ನಲ್ ಅಜಯ್ ಕೊತಿಯಾಲ್ (ನಿವೃತ್ತ) ಹೇಳಿದ್ದಾರೆ. ಕೇದಾರನಾಥದ ಪುನರ್ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ನೆನಪಿಸಿಕೊಂಡಿರುವ ಅವರು, ಸರಿಯಾದ ನಿರ್ಧಾರವಿದ್ದರೇ ಯಾವುದೂ ಅಸಾಧ್ಯವಲ್ಲ ಎಂದಿದ್ದಾರೆ.

“ನಾವು ರಾಜ್ಯದಲ್ಲಿ ಏನಾದರೂ ಒಳ್ಳೆಯದನ್ನು ಮಾಡಬೇಕಾದರೆ, ನಾವು ಎಎಪಿ ಮಾದರಿ ಆಡಳಿತವನ್ನು ತರಬೇಕು. ಎಎಪಿ ಮಾದರಿಯಿಂದ ನಾನು ಪ್ರಭಾವಿತನಾಗಿದ್ದೇನೆ. ಅದಕ್ಕಾಗಿಯೇ ನಾನು ಎಎಪಿಗೆ ಸೇರಿಕೊಂಡೆ” ಎಂದು ಹೇಳಿದ್ದಾರೆ.

ಉತ್ತರಾಖಂಡದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಹಲವು ಪ್ರಮುಖ ಚುನಾವಣಾ ಘೋಷಣೆಗಳನ್ನು ಮಾಡಿದ್ದಾರೆ. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್, ಹಿಂದಿನ ಬಿಲ್‌ಗಳನ್ನು ಮನ್ನಾ ಮಾಡುವುದು ಮತ್ತು ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ಈ ಘೋಷಣೆಗಳಲ್ಲಿ ಪ್ರಮುಖವಾಗಿವೆ.


ಇದನ್ನೂ ಓದಿ: ಉತ್ತರಾಖಂಡ: ಆರು ತಿಂಗಳಲ್ಲಿ ಮೂರು ಮುಖ್ಯಮಂತ್ರಿ; ಪುಷ್ಕರ್‌ ಸಿಂಗ್ ಧಾಮಿ ಮುಂದಿನ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...