Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...