Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...