Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...