Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...