Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...