Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...