Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

- Advertisement -
- Advertisement -

“ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ” ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್‌ ಅನ್ನು ಒತ್ತಾಯಿಸಿವೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಕೌರ್, ಚರ್ಚೆ ಕಾರಣವಾದ ಹೇಳಿಕೆ ನೀಡಿದ್ದಾರೆ.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

2027ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಪ್ರಸ್ತುತ ಅಲ್ಲಿ ಎಎಪಿ ಪಕ್ಷದ ಆಡಳಿತವಿದೆ.

ನವಜೋತ್ ಕೌರ್ ಸಿಧು “ಸತ್ಯವನ್ನೇ ಹೇಳಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ. ಕೌರ್ ಅವರ ಹೇಳಿಕೆಗಳು ಕಾಂಗ್ರೆಸ್ ದೇಶದ “ಅತ್ಯಂತ ಭ್ರಷ್ಟ ಪಕ್ಷ” ಎಂಬುದನ್ನು ಸ್ಪಷ್ಟವಾಗಿ ತೋರಿಸಿವೆ ಎಂದಿದ್ದಾರೆ.

“ಗೆಲ್ಲುವುದು ಬಿಡ, ಕನಿಷ್ಠ ಅಭ್ಯರ್ಥಿಯಾಗಲು 500 ಕೋಟಿ ರೂಪಾಯಿ ಕೊಡಬೇಕು. ಹೀಗಿರುವಾಗ ಆ ಪಕ್ಷದ (ಕಾಂಗ್ರೆಸ್) ಪರಿಸ್ಥಿತಿ ಊಹಿಸಿ. ಪಂಜಾಬ್ ಕಾಂಗ್ರೆಸ್‌ನಲ್ಲಿ ಐವರು ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ” ಎಂದು ಧಲಿವಾಲ್ ಟೀಕಿಸಿದ್ದಾರೆ.

“ರಾಜ್ಯದ ವಿರೋಧ ಪಕ್ಷ ಎಷ್ಟು ವಿಭಜಿತ ಮತ್ತು ದುರ್ಬಲವಾಗಿದೆ ಎಂಬುದನ್ನು ಇದು ತೋರಿಸಿದೆ. ಹಲವರು ಸಿಎಂ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿರುವುದರಿಂದ ಕಾಂಗ್ರೆಸ್‌ಗೆ ದೊಡ್ಡ ಹಾನಿ ಉಂಟಾಗಿದೆ” ಎಂದು ಧಲಿವಾಲ್ ಹೇಳಿದ್ದಾರೆ.

“ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತದೆ, ನಾಯಕತ್ವವನ್ನು ಹೇಗೆ ನಿರ್ಧರಿಸಲಾಗುತ್ತದೆ ಮತ್ತು ವೈಯಕ್ತಿಕ ಮಹತ್ವಾಕಾಂಕ್ಷೆಗಳು ಮತ್ತು ಹಣಕಾಸಿನ ವ್ಯವಹಾರಗಳಿಗಾಗಿ ಪಂಜಾಬ್‌ನ ಹಿತಾಸಕ್ತಿಗಳನ್ನು ಹೇಗೆ ಬದಿಗಿಡಲಾಗುತ್ತದೆ ಎಂಬುದರ ಕೊಳಕು ಸತ್ಯವನ್ನು ನವಜೋತ್ ಕೌರ್ ಸಿಧು ಅವರ ಹೇಳಿಕೆ ಬಹಿರಂಗಪಡಿಸಿದೆ” ಎಂದು ಆಮ್ ಆದ್ಮಿ ಪಕ್ಷದ ಪಂಜಾಬ್ ಪ್ರಧಾನ ಕಾರ್ಯದರ್ಶಿ ಬಲ್ತೇಜ್ ಪನ್ನು ಬರೆದುಕೊಂಡಿದ್ದಾರೆ.

“ಕೌರ್ ಅವರ ಹೇಳಿಕೆ ತೀವ್ರ ಗೊಂದಲ ಸೃಷ್ಟಿಸುವಂತದ್ದು. ಈ ಬಗ್ಗೆ ಕಾಂಗ್ರೆಸ್‌ನಿಂದ ಉತ್ತರ ಪಡೆಯಲು ಪಂಜಾಬ್‌ನ ಜನರು ಅರ್ಹರು ಎಂದಿದ್ದಾರೆ.

“ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಅದನ್ನು ಭರಿಸಲು ನನ್ನ ಪತಿ ನವಜೋತ್ ಸಿಂಗ್ ಸಿಧುಗೆ ಸಾಧ್ಯವಿಲ್ಲ” ಎಂದು ನವಜೋತ್ ಕೌರ್ ಸಿಧು ಸಾರ್ವಜನಿಕವಾಗಿ ಹೇಳುವ ಮೂಲಕ ಕಾಂಗ್ರೆಸ್‌ನಲ್ಲಿನ ‘ಹಣದ ಚೀಲ’ಗಳ ರಾಜಕೀಯವನ್ನು ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ನಾಯಕ ತರುಣ್ ಚುಗ್ ಹೇಳಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರ ಪತ್ನಿಯೇ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಂದದ ಮೂಲಕ ‘ಖರೀದಿಸಬಹುದು ಎಂದು ಹೇಳಿರುವುದು, ಪಕ್ಷದಲ್ಲಿ ಸಂಪೂರ್ಣ ನೈತಿಕ ಕುಸಿತವನ್ನು ತೋರಿಸಿದೆ ಎಂದು ತರುಣ್ ಚುಗ್ ಟೀಕಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಆಂತರಿಕ ಕಾರ್ಯಚಟುವಟಿಕೆಯು ಪಂಜಾಬ್‌ನ ರಾಜಕೀಯವನ್ನು ಪ್ರಜಾಪ್ರಭುತ್ವ ನಾಯಕತ್ವ ಪ್ರಕ್ರಿಯೆಯ ಬದಲು ಹಣ-ಚಾಲಿತ ಹರಾಜು ವ್ಯವಸ್ಥೆಗೆ ಇಳಿಸಿದೆ ಎಂಬುವುದನ್ನು ಕೌರ್ ಅವರ ಹೇಳಿಕೆ ತೋರಿಸಿದೆ ಎಂದು ತರುಣ್ ಚುಗ್ ಹೇಳಿದ್ದಾರೆ.

ಸಿಧು ಕುಟುಂಬವು ಯಾವುದೋ ಉದ್ದೇಶಕ್ಕಾಗಿ ಪಕ್ಷಕ್ಕೆ ಸೇರಿದೆ ಎಂದು ತೋರುತ್ತಿದೆ. ಈಗ ಅವರು ತಮ್ಮ ಉದ್ದೇಶ ಪೂರ್ಣಗೊಂಡಿದೆ ಎಂದು ನಂಬಿದ್ದಾರೆ. ಪಂಜಾಬ್‌ನ ಜನರಿಗೆ ಸಿಧು ಕುಟುಂಬದ ಕ್ರಮಗಳು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಸುಖಜಿಂದರ್ ಸಿಂಗ್ ರಾಂಧವ ತಿಳಿಸಿದ್ದಾರೆ.

“ಅವರು [ಸಿಧು ಕುಟುಂಬ] ಮುಖ್ಯಮಂತ್ರಿಯ ಸ್ಥಾನಕ್ಕೆ ಸಮಾನವಾದ ಹುದ್ದೆಯಾದ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಾಗ, ಯಾರಿಗೆ ಅವರು ಸೂಟ್‌ಕೇಸ್ ಹಸ್ತಾಂತರಿಸಿದ್ದರು ಮತ್ತು ಎಷ್ಟು ಬೆಲೆಗೆ?” ಎಂದು ರಾಂಧವ ಪ್ರಶ್ನಿಸಿದ್ದಾರೆ.

“ಯಾರಾದರೂ ಹಿಂತಿರುಗಿ ಹೋಗಿ ಈ ಕುಟುಂಬದ ಹಳೆಯ ಸಂದರ್ಶನಗಳು ಮತ್ತು ಪತ್ರಿಕೆಗಳ ಹೇಳಿಕೆಗಳನ್ನು ಓದಿದರೆ, ಅವರು ಕಾಂಗ್ರೆಸ್ ಅನ್ನು ಉಳಿಸಲು ಬಂದಿದ್ದಾರೋ ಅಥವಾ ಅದನ್ನು ಸಂಪೂರ್ಣವಾಗಿ ನಾಶಮಾಡಲು ಬಂದಿದ್ದಾರೋ ಎಂಬುದು ಸ್ಪಷ್ಟವಾಗುತ್ತದೆ ಎಂದು” ಎಂದು ರಾಂಧವ ಕಿಡಿಕಾರಿದ್ದಾರೆ.

“ಅವರು ಬೇರೆ ಪಕ್ಷದ ಶಾಖೆಯಲ್ಲಿ ಕುಳಿತುಕೊಂಡು ಇಂತಹ ಹೇಳಿಕೆಗಳನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಜನರು ನಾಟಕವನ್ನು ಇನ್ನಷ್ಟು ಆನಂದಿಸಬಹುದಿತ್ತು. ಆದರೆ ಈಗ, ಅವರು ಹೊರಡುವಾಗ ಪಕ್ಷದ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ” ಎಂದು ರಾಂಧವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನವಜೋತ್ ಸಿಂಗ್ ಸಿಧು ಸ್ವತಃ [ಬಿಜೆಪಿಗೆ] ಮನೆಗೆ ಮರಳುವ ಮುನ್ನ, ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಸಂತೋಷದಿಂದ ವಿದಾಯ ಹೇಳಿ ಆ ಕಡೆಯ ಬಾಗಿಲು ತೋರಿಸಬೇಕು” ಎಂದು ರಾಂಧವ ಹೇಳಿದ್ದಾರೆ.

ನವಜೋತ್ ಸಿಂಗ್ ಸಿಧು 2004ರಲ್ಲಿ ಬಿಜೆಪಿಯೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಆದರೆ 2016 ರಲ್ಲಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಒಂದು ವರ್ಷದ ನಂತರ ಅವರು ಕಾಂಗ್ರೆಸ್ ಸೇರಿದರು.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಎಪಿ ವಿರುದ್ಧ ಸೋತ ನಂತರ, ಸಿಧು ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ಅವರು ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಜೀವನ್ ಜ್ಯೋತ್ ಕೌರ್ ವಿರುದ್ಧ ಸೋತಿದ್ದರು.

ತನ್ನ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾದ ಬಳಿಕ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನವಜೋತ್ ಕೌರ್ ಸಿಧು “ನಮ್ಮ ಕಾಂಗ್ರೆಸ್ ಪಕ್ಷ ನಮ್ಮಿಂದ ಎಂದಿಗೂ ಏನನ್ನೂ ಕೇಳಿಲ್ಲ ಎಂಬ ನನ್ನ ಹೇಳಿಕೆಯನ್ನು ತಿರುಚಿದ್ದು ನೋಡಿ ನನಗೆ ಆಘಾತವಾಯಿತು” ಎಂದಿದ್ದಾರೆ.

“ನವಜೋತ್ ಸಿಂಗ್ ಸಿಂಧು ಬೇರೆ ಯಾವುದೇ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿ ಹುದ್ದೆಗೆ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾನು ಹೇಳಿದ್ದೆ. ಎಚ್ಚರಿಕೆಯಿಂದ ಆಲಿಸಿ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...