Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

- Advertisement -
- Advertisement -

“ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ” ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್‌ ಅನ್ನು ಒತ್ತಾಯಿಸಿವೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಕೌರ್, ಚರ್ಚೆ ಕಾರಣವಾದ ಹೇಳಿಕೆ ನೀಡಿದ್ದಾರೆ.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

2027ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಪ್ರಸ್ತುತ ಅಲ್ಲಿ ಎಎಪಿ ಪಕ್ಷದ ಆಡಳಿತವಿದೆ.

ನವಜೋತ್ ಕೌರ್ ಸಿಧು “ಸತ್ಯವನ್ನೇ ಹೇಳಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ. ಕೌರ್ ಅವರ ಹೇಳಿಕೆಗಳು ಕಾಂಗ್ರೆಸ್ ದೇಶದ “ಅತ್ಯಂತ ಭ್ರಷ್ಟ ಪಕ್ಷ” ಎಂಬುದನ್ನು ಸ್ಪಷ್ಟವಾಗಿ ತೋರಿಸಿವೆ ಎಂದಿದ್ದಾರೆ.

“ಗೆಲ್ಲುವುದು ಬಿಡ, ಕನಿಷ್ಠ ಅಭ್ಯರ್ಥಿಯಾಗಲು 500 ಕೋಟಿ ರೂಪಾಯಿ ಕೊಡಬೇಕು. ಹೀಗಿರುವಾಗ ಆ ಪಕ್ಷದ (ಕಾಂಗ್ರೆಸ್) ಪರಿಸ್ಥಿತಿ ಊಹಿಸಿ. ಪಂಜಾಬ್ ಕಾಂಗ್ರೆಸ್‌ನಲ್ಲಿ ಐವರು ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ” ಎಂದು ಧಲಿವಾಲ್ ಟೀಕಿಸಿದ್ದಾರೆ.

“ರಾಜ್ಯದ ವಿರೋಧ ಪಕ್ಷ ಎಷ್ಟು ವಿಭಜಿತ ಮತ್ತು ದುರ್ಬಲವಾಗಿದೆ ಎಂಬುದನ್ನು ಇದು ತೋರಿಸಿದೆ. ಹಲವರು ಸಿಎಂ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿರುವುದರಿಂದ ಕಾಂಗ್ರೆಸ್‌ಗೆ ದೊಡ್ಡ ಹಾನಿ ಉಂಟಾಗಿದೆ” ಎಂದು ಧಲಿವಾಲ್ ಹೇಳಿದ್ದಾರೆ.

“ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತದೆ, ನಾಯಕತ್ವವನ್ನು ಹೇಗೆ ನಿರ್ಧರಿಸಲಾಗುತ್ತದೆ ಮತ್ತು ವೈಯಕ್ತಿಕ ಮಹತ್ವಾಕಾಂಕ್ಷೆಗಳು ಮತ್ತು ಹಣಕಾಸಿನ ವ್ಯವಹಾರಗಳಿಗಾಗಿ ಪಂಜಾಬ್‌ನ ಹಿತಾಸಕ್ತಿಗಳನ್ನು ಹೇಗೆ ಬದಿಗಿಡಲಾಗುತ್ತದೆ ಎಂಬುದರ ಕೊಳಕು ಸತ್ಯವನ್ನು ನವಜೋತ್ ಕೌರ್ ಸಿಧು ಅವರ ಹೇಳಿಕೆ ಬಹಿರಂಗಪಡಿಸಿದೆ” ಎಂದು ಆಮ್ ಆದ್ಮಿ ಪಕ್ಷದ ಪಂಜಾಬ್ ಪ್ರಧಾನ ಕಾರ್ಯದರ್ಶಿ ಬಲ್ತೇಜ್ ಪನ್ನು ಬರೆದುಕೊಂಡಿದ್ದಾರೆ.

“ಕೌರ್ ಅವರ ಹೇಳಿಕೆ ತೀವ್ರ ಗೊಂದಲ ಸೃಷ್ಟಿಸುವಂತದ್ದು. ಈ ಬಗ್ಗೆ ಕಾಂಗ್ರೆಸ್‌ನಿಂದ ಉತ್ತರ ಪಡೆಯಲು ಪಂಜಾಬ್‌ನ ಜನರು ಅರ್ಹರು ಎಂದಿದ್ದಾರೆ.

“ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಅದನ್ನು ಭರಿಸಲು ನನ್ನ ಪತಿ ನವಜೋತ್ ಸಿಂಗ್ ಸಿಧುಗೆ ಸಾಧ್ಯವಿಲ್ಲ” ಎಂದು ನವಜೋತ್ ಕೌರ್ ಸಿಧು ಸಾರ್ವಜನಿಕವಾಗಿ ಹೇಳುವ ಮೂಲಕ ಕಾಂಗ್ರೆಸ್‌ನಲ್ಲಿನ ‘ಹಣದ ಚೀಲ’ಗಳ ರಾಜಕೀಯವನ್ನು ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ನಾಯಕ ತರುಣ್ ಚುಗ್ ಹೇಳಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರ ಪತ್ನಿಯೇ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಂದದ ಮೂಲಕ ‘ಖರೀದಿಸಬಹುದು ಎಂದು ಹೇಳಿರುವುದು, ಪಕ್ಷದಲ್ಲಿ ಸಂಪೂರ್ಣ ನೈತಿಕ ಕುಸಿತವನ್ನು ತೋರಿಸಿದೆ ಎಂದು ತರುಣ್ ಚುಗ್ ಟೀಕಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಆಂತರಿಕ ಕಾರ್ಯಚಟುವಟಿಕೆಯು ಪಂಜಾಬ್‌ನ ರಾಜಕೀಯವನ್ನು ಪ್ರಜಾಪ್ರಭುತ್ವ ನಾಯಕತ್ವ ಪ್ರಕ್ರಿಯೆಯ ಬದಲು ಹಣ-ಚಾಲಿತ ಹರಾಜು ವ್ಯವಸ್ಥೆಗೆ ಇಳಿಸಿದೆ ಎಂಬುವುದನ್ನು ಕೌರ್ ಅವರ ಹೇಳಿಕೆ ತೋರಿಸಿದೆ ಎಂದು ತರುಣ್ ಚುಗ್ ಹೇಳಿದ್ದಾರೆ.

ಸಿಧು ಕುಟುಂಬವು ಯಾವುದೋ ಉದ್ದೇಶಕ್ಕಾಗಿ ಪಕ್ಷಕ್ಕೆ ಸೇರಿದೆ ಎಂದು ತೋರುತ್ತಿದೆ. ಈಗ ಅವರು ತಮ್ಮ ಉದ್ದೇಶ ಪೂರ್ಣಗೊಂಡಿದೆ ಎಂದು ನಂಬಿದ್ದಾರೆ. ಪಂಜಾಬ್‌ನ ಜನರಿಗೆ ಸಿಧು ಕುಟುಂಬದ ಕ್ರಮಗಳು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಸುಖಜಿಂದರ್ ಸಿಂಗ್ ರಾಂಧವ ತಿಳಿಸಿದ್ದಾರೆ.

“ಅವರು [ಸಿಧು ಕುಟುಂಬ] ಮುಖ್ಯಮಂತ್ರಿಯ ಸ್ಥಾನಕ್ಕೆ ಸಮಾನವಾದ ಹುದ್ದೆಯಾದ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಾಗ, ಯಾರಿಗೆ ಅವರು ಸೂಟ್‌ಕೇಸ್ ಹಸ್ತಾಂತರಿಸಿದ್ದರು ಮತ್ತು ಎಷ್ಟು ಬೆಲೆಗೆ?” ಎಂದು ರಾಂಧವ ಪ್ರಶ್ನಿಸಿದ್ದಾರೆ.

“ಯಾರಾದರೂ ಹಿಂತಿರುಗಿ ಹೋಗಿ ಈ ಕುಟುಂಬದ ಹಳೆಯ ಸಂದರ್ಶನಗಳು ಮತ್ತು ಪತ್ರಿಕೆಗಳ ಹೇಳಿಕೆಗಳನ್ನು ಓದಿದರೆ, ಅವರು ಕಾಂಗ್ರೆಸ್ ಅನ್ನು ಉಳಿಸಲು ಬಂದಿದ್ದಾರೋ ಅಥವಾ ಅದನ್ನು ಸಂಪೂರ್ಣವಾಗಿ ನಾಶಮಾಡಲು ಬಂದಿದ್ದಾರೋ ಎಂಬುದು ಸ್ಪಷ್ಟವಾಗುತ್ತದೆ ಎಂದು” ಎಂದು ರಾಂಧವ ಕಿಡಿಕಾರಿದ್ದಾರೆ.

“ಅವರು ಬೇರೆ ಪಕ್ಷದ ಶಾಖೆಯಲ್ಲಿ ಕುಳಿತುಕೊಂಡು ಇಂತಹ ಹೇಳಿಕೆಗಳನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಜನರು ನಾಟಕವನ್ನು ಇನ್ನಷ್ಟು ಆನಂದಿಸಬಹುದಿತ್ತು. ಆದರೆ ಈಗ, ಅವರು ಹೊರಡುವಾಗ ಪಕ್ಷದ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ” ಎಂದು ರಾಂಧವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನವಜೋತ್ ಸಿಂಗ್ ಸಿಧು ಸ್ವತಃ [ಬಿಜೆಪಿಗೆ] ಮನೆಗೆ ಮರಳುವ ಮುನ್ನ, ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಸಂತೋಷದಿಂದ ವಿದಾಯ ಹೇಳಿ ಆ ಕಡೆಯ ಬಾಗಿಲು ತೋರಿಸಬೇಕು” ಎಂದು ರಾಂಧವ ಹೇಳಿದ್ದಾರೆ.

ನವಜೋತ್ ಸಿಂಗ್ ಸಿಧು 2004ರಲ್ಲಿ ಬಿಜೆಪಿಯೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಆದರೆ 2016 ರಲ್ಲಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಒಂದು ವರ್ಷದ ನಂತರ ಅವರು ಕಾಂಗ್ರೆಸ್ ಸೇರಿದರು.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಎಪಿ ವಿರುದ್ಧ ಸೋತ ನಂತರ, ಸಿಧು ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ಅವರು ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಜೀವನ್ ಜ್ಯೋತ್ ಕೌರ್ ವಿರುದ್ಧ ಸೋತಿದ್ದರು.

ತನ್ನ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾದ ಬಳಿಕ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನವಜೋತ್ ಕೌರ್ ಸಿಧು “ನಮ್ಮ ಕಾಂಗ್ರೆಸ್ ಪಕ್ಷ ನಮ್ಮಿಂದ ಎಂದಿಗೂ ಏನನ್ನೂ ಕೇಳಿಲ್ಲ ಎಂಬ ನನ್ನ ಹೇಳಿಕೆಯನ್ನು ತಿರುಚಿದ್ದು ನೋಡಿ ನನಗೆ ಆಘಾತವಾಯಿತು” ಎಂದಿದ್ದಾರೆ.

“ನವಜೋತ್ ಸಿಂಗ್ ಸಿಂಧು ಬೇರೆ ಯಾವುದೇ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿ ಹುದ್ದೆಗೆ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾನು ಹೇಳಿದ್ದೆ. ಎಚ್ಚರಿಕೆಯಿಂದ ಆಲಿಸಿ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...