Homeಮುಖಪುಟಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

- Advertisement -
- Advertisement -

ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದ್ದಾರೆ.

“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್‌ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದ್ದಾರೆ.

ಅಲ್ಲದೇ, “ನಾನೇನು ಅವಳನ್ನು ರೇಪ್‌ ಮಾಡಿದ್ದೇನಾ?” ಎನ್ನುವ ಮೂಲಕ ಘಟನೆಯನ್ನು ಲಿಂಬಾವಳಿ ಸಮರ್ಥಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ ‘ನಾನೇನು ರೇಪ್ ಮಾಡಿದ್ನಾ’ ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ” ಪ್ರಶ್ನಿಸಿದೆ.

ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ Basavaraj Bommai ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಸವಾಲು ಹಾಕಿದೆ.

ಇದನ್ನೂ ಓದಿರಿ: ‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

“ಬಿಜೆಪಿಯು ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಇಂಥ ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ” ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯ ಯೂತ್ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಅಧಿಕಾರದ ಅಮಲು ನೆತ್ತಿಗೆರಿ, ದುರಂಕಾರ ಪರಮಾವಧಿಯಲ್ಲಿ. ನ್ಯಾಯ ಕೇಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ್ದಲ್ಲದೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಸಹ್ಯಕರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಇದೇನಾ ನಿಮ್ಮ ಧರ್ಮ ರಕ್ಷಣೆ, ಇದೇನಾ ನಮ್ಮ ಹಿಂದೂ ಧರ್ಮದಲ್ಲಿ ಹೇಳಿಕೊಡುವುದು. ಶಾಸಕರಾಗಿ ಸಾಧನೆ ತೋರಿಸಲಾಗದೆ ಸಾಮಾನ್ಯ ಜನರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಈ ಕೂಡಲೇ ಅರವಿಂದ್ ಲಿಂಬಾವಳಿಯ ರಾಜೀನಾಮೆ ಪಡೆಯಬೇಕು, ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...